<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ಬಿಎಂಸಿ ಘಟಕಗಳ ಸ್ಥಾಪನೆಯಿಂದ ಉತ್ತಮ ಗುಣಮಟ್ಟದ ಹಾಲು ಸಂಗ್ರಹಣೆ ಸಾಧ್ಯವಾಗಿದೆ ಎಂದು ಕೋಚಿಮುಲ್ ನಿರ್ದೇಶಕ ಎನ್. ಹನುಮೇಶ್ ಹೇಳಿದರು.</p>.<p>ತಾಲ್ಲೂಕಿನ ನಾರವಮಾಕಲಹಳ್ಳಿ ಗ್ರಾಮದಲ್ಲಿ ಗುರುವಾರ 3 ಸಾವಿರ ಲೀಟರ್ ಸಾಮರ್ಥ್ಯದ ನೂತನ ಬಿಎಂಸಿ ಘಟಕ ಉದ್ಘಾಟಿಸಿ<br />ಮಾತನಾಡಿದರು.</p>.<p>ಬಿಎಂಸಿ ಘಟಕಗಳಲ್ಲಿ ಹಾಲನ್ನು ಶಿಥಲೀಕರಣ ಮಾಡುವುದರಿಂದ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ತಾಲ್ಲೂಕಿನಲ್ಲಿ ಪ್ರತಿದಿನ 55 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಹಾಲು ಉತ್ಪಾದಕರಿಗೆ ಲೀಟರ್ ಒಂದಕ್ಕೆ ₹ 27 ನೀಡಲಾಗುತ್ತಿದೆ. ಪಶು ಆಹಾರವನ್ನು ಮೂಟೆಯೊಂದಕ್ಕೆ ₹ 25 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಪ್ರಯೋಜನ ಪಡೆದು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು ಎಂದು ಹೇಳಿದರು.</p>.<p>ಹಾಲು ಉತ್ಪಾದಕರು ಯಾವುದೇ ಕಾರಣಕ್ಕೂ ಖಾಸಗಿ ಡೇರಿಗಳಿಗೆ ಹಾಲು ಮಾರಾಟ ಮಾಡಬಾರದು. ಹಾಗೆ ಮಾಡುವುದರಿಂದ ಹಾಲು ಒಕ್ಕೂಟದ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ ಎಂದು ಹೇಳಿದರು.</p>.<p>ಕ್ಯಾಂಪ್ ಕಚೇರಿಯ ಉಪ ವ್ಯವಸ್ಥಾಪಕ ಕೆ.ಎಸ್. ನರಸಿಂಹಯ್ಯ, ವಿಸ್ತರಣಾಧಿಕಾರಿಗಳಾದ ಎಂ.ಜಿ. ಶ್ರೀನಿವಾಸ್, ಎಸ್. ವಿನಾಯಕ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ಬಿಎಂಸಿ ಘಟಕಗಳ ಸ್ಥಾಪನೆಯಿಂದ ಉತ್ತಮ ಗುಣಮಟ್ಟದ ಹಾಲು ಸಂಗ್ರಹಣೆ ಸಾಧ್ಯವಾಗಿದೆ ಎಂದು ಕೋಚಿಮುಲ್ ನಿರ್ದೇಶಕ ಎನ್. ಹನುಮೇಶ್ ಹೇಳಿದರು.</p>.<p>ತಾಲ್ಲೂಕಿನ ನಾರವಮಾಕಲಹಳ್ಳಿ ಗ್ರಾಮದಲ್ಲಿ ಗುರುವಾರ 3 ಸಾವಿರ ಲೀಟರ್ ಸಾಮರ್ಥ್ಯದ ನೂತನ ಬಿಎಂಸಿ ಘಟಕ ಉದ್ಘಾಟಿಸಿ<br />ಮಾತನಾಡಿದರು.</p>.<p>ಬಿಎಂಸಿ ಘಟಕಗಳಲ್ಲಿ ಹಾಲನ್ನು ಶಿಥಲೀಕರಣ ಮಾಡುವುದರಿಂದ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ತಾಲ್ಲೂಕಿನಲ್ಲಿ ಪ್ರತಿದಿನ 55 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಹಾಲು ಉತ್ಪಾದಕರಿಗೆ ಲೀಟರ್ ಒಂದಕ್ಕೆ ₹ 27 ನೀಡಲಾಗುತ್ತಿದೆ. ಪಶು ಆಹಾರವನ್ನು ಮೂಟೆಯೊಂದಕ್ಕೆ ₹ 25 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಪ್ರಯೋಜನ ಪಡೆದು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು ಎಂದು ಹೇಳಿದರು.</p>.<p>ಹಾಲು ಉತ್ಪಾದಕರು ಯಾವುದೇ ಕಾರಣಕ್ಕೂ ಖಾಸಗಿ ಡೇರಿಗಳಿಗೆ ಹಾಲು ಮಾರಾಟ ಮಾಡಬಾರದು. ಹಾಗೆ ಮಾಡುವುದರಿಂದ ಹಾಲು ಒಕ್ಕೂಟದ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ ಎಂದು ಹೇಳಿದರು.</p>.<p>ಕ್ಯಾಂಪ್ ಕಚೇರಿಯ ಉಪ ವ್ಯವಸ್ಥಾಪಕ ಕೆ.ಎಸ್. ನರಸಿಂಹಯ್ಯ, ವಿಸ್ತರಣಾಧಿಕಾರಿಗಳಾದ ಎಂ.ಜಿ. ಶ್ರೀನಿವಾಸ್, ಎಸ್. ವಿನಾಯಕ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>