<p><strong>ಕೋಲಾರ:</strong> ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಮಾಜಿ ಸಚಿವರು ಸಾಲದ ಶೂಲದಿಂದ ಪಾರಾಗಲು ಅಪಹರಣದ ನಾಟಕವಾಡಿರುವ ಶಂಕೆ ವ್ಯಕ್ತವಾಗಿದೆ.</p>.<p>ವರ್ತೂರು ಪ್ರಕಾಶ್ ಸಚಿವರಾಗಿದ್ದಾಗ ಮಹಾರಾಷ್ಟ್ರದಿಂದ ₹ 5 ಕೋಟಿಗೆ ಸುಮಾರು 1 ಸಾವಿರ ಸೀಮೆ ಹಸುಗಳನ್ನು ಖರೀದಿಸಿಕೊಂಡು ಬಂದಿದ್ದರು. ಆದರೆ, ಹಸುಗಳ ಮಾಲೀಕರಿಗೆ ಹಣ ಕೊಟ್ಟಿರಲಿಲ್ಲ. ಆ ಸಾಲದ ಮೇಲಿನ ಬಡ್ಡಿ ಸೇರಿ ₹ 15 ಕೋಟಿ ಕೊಡಬೇಕಿತ್ತು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.</p>.<p>ಹಸುಗಳ ಮಾಲೀಕರು ಹಣ ಕೊಡುವಂತೆ ಕೇಳಿದರೂ ವರ್ತೂರು ಪ್ರಕಾಶ್ ಹಣ ನೀಡದೆ ಸತಾಯಿಸುತ್ತಿದ್ದರು. ಈ ಕಾರಣಕ್ಕಾಗಿ ಹಸುಗಳ ಮಾಲೀಕರು ಮಹಾರಾಷ್ಟ್ರದಿಂದ ಬಾಡಿಗೆ ಗೂಂಡಾಗಳನ್ನು ಕಳುಹಿಸಿ ಅವರಿಗೆ ಬೆದರಿಕೆ ಹಾಕಿಸಿದ್ದರು. ಆದರೂ ಅವರು ಹಣ ಕೊಟ್ಟಿರಲಿಲ್ಲ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಹಸುಗಳ ಮಾಲೀಕರ ಸೂಚನೆಯಂತೆ ಗೂಂಡಾಗಳು ನ.25ರಂದು ವರ್ತೂರು ಪ್ರಕಾಶ್ ಮತ್ತು ಅವರ ಕಾರು ಚಾಲಕ ಸುನಿಲ್ನನ್ನು ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಸಾಲ ವಸೂಲಾತಿಗಾಗಿ ಈ ಕೃತ್ಯ ಎಸಗಿರುವುದು ನಿಜ. ಆದರೆ, ವರ್ತೂರು ಪ್ರಕಾಶ್ರನ್ನು ಒತ್ತೆಯಾಳಾಗಿ ಇರಿಸಿಕೊಂಡು ಹಣ ಪಡೆಯುವುದು ಅವರ ಉದ್ದೇಶವಾಗಿರಲಿಲ್ಲ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹನಿಟ್ರ್ಯಾಪ್ ಅಥವಾ ಮಹಿಳೆಯ ವಿಚಾರವಾಗಿ ಈ ಘಟನೆ ನಡೆದಿಲ್ಲ ಎಂದು ಮೂಲಗಳು ಹೇಳಿವೆ.</p>.<p><strong>ತನಿಖೆಗೆ ಅಸಹಕಾರ</strong>: ವರ್ತೂರು ಪ್ರಕಾಶ್ ತಮ್ಮ ಮೇಲೆ ನಡೆದ ಹಲ್ಲೆಯನ್ನೇ ನೆಪವಾಗಿಸಿಕೊಂಡು ಹಸು ಮಾಲೀಕರನ್ನು ಬೆದರಿಸುವ ಉದ್ದೇಶಕ್ಕೆ ಅಪಹರಣದ ನಾಟಕವಾಡಿದ್ದಾರೆ. ಅವರಿಗೆ ಆರೋಪಿಗಳು ಗೊತ್ತಿದ್ದರೂ ಮಾಹಿತಿ ನೀಡದೆ ತನಿಖೆಗೆ ಅಸಹಕಾರ ತೋರುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.</p>.<p>ವರ್ತೂರು ಪ್ರಕಾಶ್ ಘಟನೆ ಸಂಬಂಧ 6 ದಿನ ತಡವಾಗಿ ದೂರು ನೀಡಿರುವುದು ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ. ಅಪಹರಣಕಾರರು ಕೋಲಾರ ತಾಲ್ಲೂಕಿನ ಜಂಗಾಲಹಳ್ಳಿ ರಸ್ತೆಯಲ್ಲಿನ ನೀಲಗಿರಿ ತೋಪಿನ ಬಳಿ ತಮ್ಮ ಕಾರು ಅಡ್ಡಗಟ್ಟಿ, ಕಣ್ಣಿಗೆ ಕಾರದ ಪುಡಿ ಎರಚಿ ಅಪಹರಿಸಿದರೆಂದು ವರ್ತೂರು ಪ್ರಕಾಶ್ ಪೊಲೀಸರಿಗೆ ಹೇಳಿಕೆ ನೀಡಿದ್ದರು. ಪೊಲೀಸರು ಆ ಸ್ಥಳದಲ್ಲಿ ಪರಿಶೀಲನೆ ಮಾಡಿದಾಗ ಕೃತ್ಯಕ್ಕೆ ಸಂಬಂಧಪಟ್ಟ ಯಾವುದೇ ಕುರುಹು ಪತ್ತೆಯಾಗಿಲ್ಲ.</p>.<p><strong>ಹೇಳಿಕೆ ಬದಲು:</strong> ಅಪಹರಣಕಾರರಿಂದ ಹಲ್ಲೆಗೊಳಗಾದ ಚಾಲಕ ಸುನಿಲ್, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವರ್ತೂರು ಪ್ರಕಾಶ್ ಬೆಂಗಳೂರಿನ ಕೆ.ಆರ್.ಪುರದ ಸತ್ಯಸಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ನಂತರ ಅವರೇ ಸುನಿಲ್ರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಂಡು ಹೋಗಿದ್ದರು ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಬೆಂಗಳೂರಿನ ಬೆಳ್ಳಂದೂರು ಬಳಿಯ ಸ್ಮಶಾನದಲ್ಲಿ ಡಿ.1ರಂದು ವರ್ತೂರು ಪ್ರಕಾಶ್ರ ಕಾರು ಪತ್ತೆಯಾಗಿತ್ತು. ಅವರ ಆಪ್ತರೇ ಆ ಜಾಗದಲ್ಲಿ ಕಾರು ನಿಲ್ಲಿಸಿ ಹೋಗಿರುವ ಸಾಧ್ಯತೆಯಿದೆ. ಅಲ್ಲದೇ, ಅವರೇ ಕಾರಿನೊಳಗೆ ಸೀಟಿನ ಮೇಲೆಲ್ಲಾ ಕಾರದ ಪುಡಿ ಎರಚಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದೆಡೆ ವರ್ತೂರು ಪ್ರಕಾಶ್ ಅವರು ಪದೇಪದೇ ಹೇಳಿಕೆ ಬದಲಿಸುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತನಿಖಾಧಿಖಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಮಾಜಿ ಸಚಿವರು ಸಾಲದ ಶೂಲದಿಂದ ಪಾರಾಗಲು ಅಪಹರಣದ ನಾಟಕವಾಡಿರುವ ಶಂಕೆ ವ್ಯಕ್ತವಾಗಿದೆ.</p>.<p>ವರ್ತೂರು ಪ್ರಕಾಶ್ ಸಚಿವರಾಗಿದ್ದಾಗ ಮಹಾರಾಷ್ಟ್ರದಿಂದ ₹ 5 ಕೋಟಿಗೆ ಸುಮಾರು 1 ಸಾವಿರ ಸೀಮೆ ಹಸುಗಳನ್ನು ಖರೀದಿಸಿಕೊಂಡು ಬಂದಿದ್ದರು. ಆದರೆ, ಹಸುಗಳ ಮಾಲೀಕರಿಗೆ ಹಣ ಕೊಟ್ಟಿರಲಿಲ್ಲ. ಆ ಸಾಲದ ಮೇಲಿನ ಬಡ್ಡಿ ಸೇರಿ ₹ 15 ಕೋಟಿ ಕೊಡಬೇಕಿತ್ತು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.</p>.<p>ಹಸುಗಳ ಮಾಲೀಕರು ಹಣ ಕೊಡುವಂತೆ ಕೇಳಿದರೂ ವರ್ತೂರು ಪ್ರಕಾಶ್ ಹಣ ನೀಡದೆ ಸತಾಯಿಸುತ್ತಿದ್ದರು. ಈ ಕಾರಣಕ್ಕಾಗಿ ಹಸುಗಳ ಮಾಲೀಕರು ಮಹಾರಾಷ್ಟ್ರದಿಂದ ಬಾಡಿಗೆ ಗೂಂಡಾಗಳನ್ನು ಕಳುಹಿಸಿ ಅವರಿಗೆ ಬೆದರಿಕೆ ಹಾಕಿಸಿದ್ದರು. ಆದರೂ ಅವರು ಹಣ ಕೊಟ್ಟಿರಲಿಲ್ಲ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಹಸುಗಳ ಮಾಲೀಕರ ಸೂಚನೆಯಂತೆ ಗೂಂಡಾಗಳು ನ.25ರಂದು ವರ್ತೂರು ಪ್ರಕಾಶ್ ಮತ್ತು ಅವರ ಕಾರು ಚಾಲಕ ಸುನಿಲ್ನನ್ನು ಅಪಹರಿಸಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಸಾಲ ವಸೂಲಾತಿಗಾಗಿ ಈ ಕೃತ್ಯ ಎಸಗಿರುವುದು ನಿಜ. ಆದರೆ, ವರ್ತೂರು ಪ್ರಕಾಶ್ರನ್ನು ಒತ್ತೆಯಾಳಾಗಿ ಇರಿಸಿಕೊಂಡು ಹಣ ಪಡೆಯುವುದು ಅವರ ಉದ್ದೇಶವಾಗಿರಲಿಲ್ಲ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಹನಿಟ್ರ್ಯಾಪ್ ಅಥವಾ ಮಹಿಳೆಯ ವಿಚಾರವಾಗಿ ಈ ಘಟನೆ ನಡೆದಿಲ್ಲ ಎಂದು ಮೂಲಗಳು ಹೇಳಿವೆ.</p>.<p><strong>ತನಿಖೆಗೆ ಅಸಹಕಾರ</strong>: ವರ್ತೂರು ಪ್ರಕಾಶ್ ತಮ್ಮ ಮೇಲೆ ನಡೆದ ಹಲ್ಲೆಯನ್ನೇ ನೆಪವಾಗಿಸಿಕೊಂಡು ಹಸು ಮಾಲೀಕರನ್ನು ಬೆದರಿಸುವ ಉದ್ದೇಶಕ್ಕೆ ಅಪಹರಣದ ನಾಟಕವಾಡಿದ್ದಾರೆ. ಅವರಿಗೆ ಆರೋಪಿಗಳು ಗೊತ್ತಿದ್ದರೂ ಮಾಹಿತಿ ನೀಡದೆ ತನಿಖೆಗೆ ಅಸಹಕಾರ ತೋರುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.</p>.<p>ವರ್ತೂರು ಪ್ರಕಾಶ್ ಘಟನೆ ಸಂಬಂಧ 6 ದಿನ ತಡವಾಗಿ ದೂರು ನೀಡಿರುವುದು ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ. ಅಪಹರಣಕಾರರು ಕೋಲಾರ ತಾಲ್ಲೂಕಿನ ಜಂಗಾಲಹಳ್ಳಿ ರಸ್ತೆಯಲ್ಲಿನ ನೀಲಗಿರಿ ತೋಪಿನ ಬಳಿ ತಮ್ಮ ಕಾರು ಅಡ್ಡಗಟ್ಟಿ, ಕಣ್ಣಿಗೆ ಕಾರದ ಪುಡಿ ಎರಚಿ ಅಪಹರಿಸಿದರೆಂದು ವರ್ತೂರು ಪ್ರಕಾಶ್ ಪೊಲೀಸರಿಗೆ ಹೇಳಿಕೆ ನೀಡಿದ್ದರು. ಪೊಲೀಸರು ಆ ಸ್ಥಳದಲ್ಲಿ ಪರಿಶೀಲನೆ ಮಾಡಿದಾಗ ಕೃತ್ಯಕ್ಕೆ ಸಂಬಂಧಪಟ್ಟ ಯಾವುದೇ ಕುರುಹು ಪತ್ತೆಯಾಗಿಲ್ಲ.</p>.<p><strong>ಹೇಳಿಕೆ ಬದಲು:</strong> ಅಪಹರಣಕಾರರಿಂದ ಹಲ್ಲೆಗೊಳಗಾದ ಚಾಲಕ ಸುನಿಲ್, ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವರ್ತೂರು ಪ್ರಕಾಶ್ ಬೆಂಗಳೂರಿನ ಕೆ.ಆರ್.ಪುರದ ಸತ್ಯಸಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ನಂತರ ಅವರೇ ಸುನಿಲ್ರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿಕೊಂಡು ಹೋಗಿದ್ದರು ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಬೆಂಗಳೂರಿನ ಬೆಳ್ಳಂದೂರು ಬಳಿಯ ಸ್ಮಶಾನದಲ್ಲಿ ಡಿ.1ರಂದು ವರ್ತೂರು ಪ್ರಕಾಶ್ರ ಕಾರು ಪತ್ತೆಯಾಗಿತ್ತು. ಅವರ ಆಪ್ತರೇ ಆ ಜಾಗದಲ್ಲಿ ಕಾರು ನಿಲ್ಲಿಸಿ ಹೋಗಿರುವ ಸಾಧ್ಯತೆಯಿದೆ. ಅಲ್ಲದೇ, ಅವರೇ ಕಾರಿನೊಳಗೆ ಸೀಟಿನ ಮೇಲೆಲ್ಲಾ ಕಾರದ ಪುಡಿ ಎರಚಿರುವ ಶಂಕೆ ವ್ಯಕ್ತವಾಗಿದೆ. ಮತ್ತೊಂದೆಡೆ ವರ್ತೂರು ಪ್ರಕಾಶ್ ಅವರು ಪದೇಪದೇ ಹೇಳಿಕೆ ಬದಲಿಸುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತನಿಖಾಧಿಖಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>