ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯದಂಗಡಿ ತೆರೆಯಲ್ಲ: ಸಚಿವ ಎಚ್‌.ನಾಗೇಶ್‌ ಸ್ಪಷ್ಟನೆ

Last Updated 7 ಏಪ್ರಿಲ್ 2020, 13:53 IST
ಅಕ್ಷರ ಗಾತ್ರ

ಕೋಲಾರ: ‘ಕೊರೊನಾ ಸೋಂಕು ಸಂಪೂರ್ಣ ಹತೋಟಿಗೆ ಬರುವವರೆಗೂ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ’ ಎಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದರು.

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲೇ ದಿನೇದಿನೇ ಕೊರೊನಾ ಸೋಂಕಿನ ಪ್ರಕರಣ ಹೆಚ್ಚುತ್ತಿವೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಮದ್ಯದ ವಹಿವಾಟು ಆರಂಭವಾದರೆ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಎಲ್ಲಿಯೂ ಜನರು ಮದ್ಯ ಸಿಗದೆ ಸತ್ತಿಲ್ಲ. ದಿಗ್ಬಂಧನ ಮುಗಿಯುವವರೆಗೂ ಮದ್ಯದಂಗಡಿ ತೆರೆಯುವುದಿಲ್ಲ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳ ತೀರ್ಮಾನವೇ ಅಂತಿಮ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT