<p><strong>ಕೋಲಾರ: </strong>ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 65 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ.</p>.<p>ಸೋಂಕು ಹರಡುವಿಕೆ ಪ್ರಮಾಣ ಏರು ಗತಿಯಲ್ಲೇ ಸಾಗಿದ್ದು, ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ. ಮತ್ತೊಂದೆಡೆ ಕೋವಿಡ್ 3ನೇ ಅಲೆ ಭೀತಿಗೆ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.</p>.<p>ಕೋಲಾರ ತಾಲ್ಲೂಕಿನ 29 ಮಂದಿಗೆ, ಮಾಲೂರು ತಾಲ್ಲೂಕಿನ 10 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 6 ಮಂದಿಗೆ, ಕೆಜಿಎಫ್ ತಾಲ್ಲೂಕಿನ 13 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 5 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರಿಗೆ ಸೋಂಕು ಬಂದಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 226ಕ್ಕೆ ಜಿಗಿದಿದೆ.</p>.<p>ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಬಂಗಾರಪೇಟೆ ತಾಲ್ಲೂಕಿನ 3 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 65 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ.</p>.<p>ಸೋಂಕು ಹರಡುವಿಕೆ ಪ್ರಮಾಣ ಏರು ಗತಿಯಲ್ಲೇ ಸಾಗಿದ್ದು, ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ. ಮತ್ತೊಂದೆಡೆ ಕೋವಿಡ್ 3ನೇ ಅಲೆ ಭೀತಿಗೆ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.</p>.<p>ಕೋಲಾರ ತಾಲ್ಲೂಕಿನ 29 ಮಂದಿಗೆ, ಮಾಲೂರು ತಾಲ್ಲೂಕಿನ 10 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 6 ಮಂದಿಗೆ, ಕೆಜಿಎಫ್ ತಾಲ್ಲೂಕಿನ 13 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 5 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರಿಗೆ ಸೋಂಕು ಬಂದಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 226ಕ್ಕೆ ಜಿಗಿದಿದೆ.</p>.<p>ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಬಂಗಾರಪೇಟೆ ತಾಲ್ಲೂಕಿನ 3 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>