<p><strong>ಕೋಲಾರ:</strong> ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ನಾಗಾಲೋಟ ಮುಂದುವರಿದಿದ್ದು, ಗುರುವಾರ ಸೋಂಕಿನ ಮಹಾ ಸ್ಫೋಟವಾಗಿದೆ.</p>.<p>ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 192ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಸೋಂಕು ಹರಡುವಿಕೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಹೊಸದಾಗಿ 587 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 131 ಮಂದಿಗೆ ಸೋಂಕು ತಗುಲಿದೆ. ಕೋಲಾರ ತಾಲ್ಲೂಕಿನ 121 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 49 ಮಂದಿಗೆ, ಕೆಜಿಎಫ್ ತಾಲ್ಲೂಕಿನ 111 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 85 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 90 ಮಂದಿಗೆ ಸೋಂಕು ಬಂದಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,590ಕ್ಕೆ ಜಿಗಿದಿದೆ.</p>.<p>ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.</p>.<p>ಬೆಚ್ಚಿಬಿದ್ದ ಜನ: ಕಳೆದೊಂದು ವರ್ಷದಲ್ಲಿ ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾದ ನಿದರ್ಶನವಿಲ್ಲ. ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿರುವುದು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ. ಕೋವಿಡ್ 2ನೇ ಅಲೆಗೆ ಜಿಲ್ಲೆಯ ಜನ ಬೆಚ್ಚಿಬಿದ್ದಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಬೆಡ್ಗಳ ಸಮಸ್ಯೆ ಎದುರಾಗಿದೆ.</p>.<p>ಅಕ್ಕಪಕ್ಕದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ತಮಿಳುನಾಡು ಹಾಗೂ ಆಂಧ್ರಪ್ರದೇಶದಿಂದ ಕೊರೊನಾ ಸೋಂಕಿತರು ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಆಸ್ಪತ್ರೆಗಳಿಗೆ ಬರುತ್ತಿದ್ದು, ಬೆಡ್ಗಳ ಕೊರತೆ ಎದುರಾಗಿದೆ. ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುತ್ತಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದೆ.</p>.<p>130 ಮಂದಿ ಗುಣಮುಖ: ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣ ಕಡಿಮೆಯಿದೆ. ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 130 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುರುವಾರ ಮನೆಗೆ ಮರಳಿದರು.</p>.<p>ಕೋಲಾರ ತಾಲ್ಲೂಕಿನ 51 ಮಂದಿ, ಮಾಲೂರು ತಾಲ್ಲೂಕಿನ 20, ಬಂಗಾರಪೇಟೆ ತಾಲ್ಲೂಕಿನ 12, ಕೆಜಿಎಫ್ ತಾಲ್ಲೂಕಿನ 13, ಮುಳಬಾಗಿಲು ತಾಲ್ಲೂಕಿನ 8 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 26 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ನಾಗಾಲೋಟ ಮುಂದುವರಿದಿದ್ದು, ಗುರುವಾರ ಸೋಂಕಿನ ಮಹಾ ಸ್ಫೋಟವಾಗಿದೆ.</p>.<p>ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 192ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಸೋಂಕು ಹರಡುವಿಕೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಹೊಸದಾಗಿ 587 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.</p>.<p>ಮಾಲೂರು ತಾಲ್ಲೂಕಿನಲ್ಲಿ ಅತಿ ಹೆಚ್ಚು 131 ಮಂದಿಗೆ ಸೋಂಕು ತಗುಲಿದೆ. ಕೋಲಾರ ತಾಲ್ಲೂಕಿನ 121 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 49 ಮಂದಿಗೆ, ಕೆಜಿಎಫ್ ತಾಲ್ಲೂಕಿನ 111 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 85 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 90 ಮಂದಿಗೆ ಸೋಂಕು ಬಂದಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,590ಕ್ಕೆ ಜಿಗಿದಿದೆ.</p>.<p>ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.</p>.<p>ಬೆಚ್ಚಿಬಿದ್ದ ಜನ: ಕಳೆದೊಂದು ವರ್ಷದಲ್ಲಿ ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾದ ನಿದರ್ಶನವಿಲ್ಲ. ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿರುವುದು ಆರೋಗ್ಯ ಇಲಾಖೆಯ ನಿದ್ದೆಗೆಡಿಸಿದೆ. ಕೋವಿಡ್ 2ನೇ ಅಲೆಗೆ ಜಿಲ್ಲೆಯ ಜನ ಬೆಚ್ಚಿಬಿದ್ದಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಬೆಡ್ಗಳ ಸಮಸ್ಯೆ ಎದುರಾಗಿದೆ.</p>.<p>ಅಕ್ಕಪಕ್ಕದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ, ತಮಿಳುನಾಡು ಹಾಗೂ ಆಂಧ್ರಪ್ರದೇಶದಿಂದ ಕೊರೊನಾ ಸೋಂಕಿತರು ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ಆಸ್ಪತ್ರೆಗಳಿಗೆ ಬರುತ್ತಿದ್ದು, ಬೆಡ್ಗಳ ಕೊರತೆ ಎದುರಾಗಿದೆ. ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುತ್ತಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದೆ.</p>.<p>130 ಮಂದಿ ಗುಣಮುಖ: ಹೊಸದಾಗಿ ಪತ್ತೆಯಾಗುತ್ತಿರುವ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣ ಕಡಿಮೆಯಿದೆ. ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 130 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುರುವಾರ ಮನೆಗೆ ಮರಳಿದರು.</p>.<p>ಕೋಲಾರ ತಾಲ್ಲೂಕಿನ 51 ಮಂದಿ, ಮಾಲೂರು ತಾಲ್ಲೂಕಿನ 20, ಬಂಗಾರಪೇಟೆ ತಾಲ್ಲೂಕಿನ 12, ಕೆಜಿಎಫ್ ತಾಲ್ಲೂಕಿನ 13, ಮುಳಬಾಗಿಲು ತಾಲ್ಲೂಕಿನ 8 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 26 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>