ಕೆಲ ಮನೆಗಳಲ್ಲಿ ನಾಗರಿಕರು ದೀಪ, ಮೇಣದ ಬತ್ತಿ ಹಚ್ಚಿದರು. ಮತ್ತೆ ಕೆಲ ಮನೆಗಳಲ್ಲಿ ಬ್ಯಾಟರಿ, ಲಾಟೀನು, ಮೊಬೈಲ್ ಟಾರ್ಚ್ ಬೆಳಗಿಸಿದರು. ಹಲವು ಬಡಾವಣೆಗಳಲ್ಲಿ ಪಟಾಕಿ ಸಿಡಿಸಲಾಯಿತು. ಮನೆ ಮಂದಿಯೆಲ್ಲಾ ಬಾಲ್ಕನಿಯಲ್ಲಿ ನಿಂತು ದೀಪ ಬೆಳಗಿ ಕೊರೊನಾ ಸೋಂಕಿನಿಂದ ದೇಶಕ್ಕೆ ಮುಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.