‘ನನ್ನ ಬೆಳವಣಿಗೆ ಸಹಿಸದ ಕೆಲವು ವ್ಯಕ್ತಿಗಳು ದುರುದ್ದೇಶಪೂರ್ವಕವಾಗಿ ಈ ಕೆಲಸ ಮಾಡಿದ್ದಾರೆ. ನಗರಸಭೆಯಲ್ಲಿ ಇದ್ದ ಅವ್ಯವಸ್ಥೆ ಹೋಗಲಾಡಿಸಿ, ಜನಸ್ನೇಹಿಯಾಗಿ ಮಾಡಲು ಯತ್ನಿಸುತ್ತಿದ್ದೇನೆ. ನಗರಸಭೆಯಲ್ಲಿ ಠಿಕಾಣಿ ಹೂಡಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಬೆದರಿಸುತ್ತ ಕೆಲಸ ಮಾಡಿಸಿಕೊಳ್ಳುತ್ತಿದ್ದ ವ್ಯಕ್ತಿಗಳಿಗೆ ಇದರಿಂದ ತೊಂದರೆಯಾಗಿದೆ. ಅಂತಹವರು ಈ ಕೆಲಸ ಮಾಡಿರಬಹುದು’ ಎಂದು ತಿಳಿಸಿದ್ದಾರೆ.