<p><strong>ಕೆಜಿಎಫ್</strong>: ‘ತ್ಯಾಗದ ಪ್ರತಿರೂಪ ಎಂದು ಹೆಣ್ಣನ್ನು ಬಣ್ಣಿಸುವುದರಲ್ಲಿ ಅತಿಶಯೋಕ್ತಿ ಇಲ್ಲ. ಎಲ್ಲರ ಜೀವನದಲ್ಲಿ ಹೆಣ್ಣಿನ ಪಾತ್ರ ಬಹುದೊಡ್ಡದಾಗಿದ್ದು, ಆಕೆಯನ್ನು ಗೌರವಿಸುವುದು ಎಲ್ಲರ ಕರ್ತವ್ಯ’ ಎಂದು ನ್ಯಾಯಾಧೀಶ ಮಹೇಶ್ ಶಂ ಪಾಟೀಲ ಹೇಳಿದರು.</p>.<p>ನಗರದ ನ್ಯಾಯಾಲಯ ಸಂಕೀರ್ಣ ದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ತಾಯಿ, ತಂಗಿ, ಹೆಂಡತಿ ಮೊದಲಾದ ರೂಪದಲ್ಲಿ ಹೆಣ್ಣನ್ನು ನೋಡುವ ನಾವು ಸಾಮಾಜಿಕವಾಗಿ ಆಕೆಯನ್ನು ಶೋಷಿಸುವುದು ತಪ್ಪು. ಹೆಣ್ಣು ಇಲ್ಲದ ಸಮಾಜವನ್ನು ನೋಡಲು ಸಾಧ್ಯವಿಲ್ಲ ಎಂದು ಹೇಳಿದರು.</p>.<p>ನ್ಯಾಯಾಧೀಶೆ ನಸ್ರತ್ ಮುಖತಾರ್ ಅಹಮದ್ ಖಾನ್ ಮಾತನಾಡಿ, ಹೆಣ್ಣು ಮಕ್ಕಳ ಬಗೆಗಿನ ಮನಸ್ಥಿತಿಯನ್ನು ನಾವು ಬದಲಾಯಿಸಿಕೊಂಡರೆ ಸಮಾಜದಲ್ಲಿ ಹೆಣ್ಣಿಗೆ ಗೌರವ ಸಹಜವಾಗಿಯೇ ಸಿಗುತ್ತದೆ ಎಂದರು.</p>.<p>‘ಹಿಂದಿನ ಕಾಲದಲ್ಲಿ ಹೆಣ್ಣುಮಕ್ಕಳು ವಿದ್ಯಾಭ್ಯಾಸ ಪಡೆಯುವುದೇ ದೊಡ್ಡ ಸಾಧನೆ ಎಂದು ಬಿಂಬಿಸಲಾಗುತ್ತಿತ್ತು. ಅವರಿಗೆ ಸಾಮಾಜಿಕವಾಗಿ ಎಲ್ಲಾ ರೀತಿಯಲ್ಲಿ ಭೇದಭಾವ ತೋರಲಾಗುತ್ತಿತ್ತು. ಉತ್ತಮ ವೈದ್ಯಕೀಯ ಚಿಕಿತ್ಸೆ ಪಡೆಯಲು ಕೂಡ ಹೆಣಗಾಡಬೇಕಾಗುತ್ತಿತ್ತು’ ಎಂದು ಉಪನ್ಯಾಸಕಿ ನೂರ್ಜಾನ್ ಹೇಳಿದರು.</p>.<p>ನ್ಯಾಯಾಧೀಶರಾದ ಆರ್. ಮಂಜುನಾಥ್, ಎಸ್.ಪಿ. ಕಿರಣ್, ವಕೀಲರ ಸಂಘದ ಅಧ್ಯಕ್ಷ ಎಸ್.ಎನ್. ರಾಜಗೋಪಾಲಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ‘ತ್ಯಾಗದ ಪ್ರತಿರೂಪ ಎಂದು ಹೆಣ್ಣನ್ನು ಬಣ್ಣಿಸುವುದರಲ್ಲಿ ಅತಿಶಯೋಕ್ತಿ ಇಲ್ಲ. ಎಲ್ಲರ ಜೀವನದಲ್ಲಿ ಹೆಣ್ಣಿನ ಪಾತ್ರ ಬಹುದೊಡ್ಡದಾಗಿದ್ದು, ಆಕೆಯನ್ನು ಗೌರವಿಸುವುದು ಎಲ್ಲರ ಕರ್ತವ್ಯ’ ಎಂದು ನ್ಯಾಯಾಧೀಶ ಮಹೇಶ್ ಶಂ ಪಾಟೀಲ ಹೇಳಿದರು.</p>.<p>ನಗರದ ನ್ಯಾಯಾಲಯ ಸಂಕೀರ್ಣ ದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>ತಾಯಿ, ತಂಗಿ, ಹೆಂಡತಿ ಮೊದಲಾದ ರೂಪದಲ್ಲಿ ಹೆಣ್ಣನ್ನು ನೋಡುವ ನಾವು ಸಾಮಾಜಿಕವಾಗಿ ಆಕೆಯನ್ನು ಶೋಷಿಸುವುದು ತಪ್ಪು. ಹೆಣ್ಣು ಇಲ್ಲದ ಸಮಾಜವನ್ನು ನೋಡಲು ಸಾಧ್ಯವಿಲ್ಲ ಎಂದು ಹೇಳಿದರು.</p>.<p>ನ್ಯಾಯಾಧೀಶೆ ನಸ್ರತ್ ಮುಖತಾರ್ ಅಹಮದ್ ಖಾನ್ ಮಾತನಾಡಿ, ಹೆಣ್ಣು ಮಕ್ಕಳ ಬಗೆಗಿನ ಮನಸ್ಥಿತಿಯನ್ನು ನಾವು ಬದಲಾಯಿಸಿಕೊಂಡರೆ ಸಮಾಜದಲ್ಲಿ ಹೆಣ್ಣಿಗೆ ಗೌರವ ಸಹಜವಾಗಿಯೇ ಸಿಗುತ್ತದೆ ಎಂದರು.</p>.<p>‘ಹಿಂದಿನ ಕಾಲದಲ್ಲಿ ಹೆಣ್ಣುಮಕ್ಕಳು ವಿದ್ಯಾಭ್ಯಾಸ ಪಡೆಯುವುದೇ ದೊಡ್ಡ ಸಾಧನೆ ಎಂದು ಬಿಂಬಿಸಲಾಗುತ್ತಿತ್ತು. ಅವರಿಗೆ ಸಾಮಾಜಿಕವಾಗಿ ಎಲ್ಲಾ ರೀತಿಯಲ್ಲಿ ಭೇದಭಾವ ತೋರಲಾಗುತ್ತಿತ್ತು. ಉತ್ತಮ ವೈದ್ಯಕೀಯ ಚಿಕಿತ್ಸೆ ಪಡೆಯಲು ಕೂಡ ಹೆಣಗಾಡಬೇಕಾಗುತ್ತಿತ್ತು’ ಎಂದು ಉಪನ್ಯಾಸಕಿ ನೂರ್ಜಾನ್ ಹೇಳಿದರು.</p>.<p>ನ್ಯಾಯಾಧೀಶರಾದ ಆರ್. ಮಂಜುನಾಥ್, ಎಸ್.ಪಿ. ಕಿರಣ್, ವಕೀಲರ ಸಂಘದ ಅಧ್ಯಕ್ಷ ಎಸ್.ಎನ್. ರಾಜಗೋಪಾಲಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>