<p>ಕೋಲಾರ: ‘ಜಿಲ್ಲೆಯ ಜನರ ಹಾಗೂ ರೈತರ ಕಷ್ಟ ಸುಖಕ್ಕೆ ಸ್ಪಂದಿಸಿ, ನ್ಯಾಯ ಒದಗಿಸುವ ಪ್ರಯತ್ನ ಮಾಡುತ್ತೇವೆ. ಸಂಘದಿಂದ ನಿರಂತರವಾಗಿ ಜನಹಿತ ಕಾರ್ಯ ನಡೆಸುತ್ತೇವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸುನಿಲ್ ಹೇಳಿದರು.</p>.<p>ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಸ್ವಚ್ಛತೆ, ಕುಡಿಯುವ ನೀರು ಹಾಗೂ ರಸ್ತೆ ಸೇರಿದಂತೆ ಮೂಲಸೌಕರ್ಯಕ್ಕೆ ಹೋರಾಟ ನಡೆಸಲು ಸಿದ್ಧವಾಗಿದ್ದೇವೆ. ಸಂಘಟನೆ ಮೂಲಕ ನಾಡು, ನುಡಿ, ನೆಲ, ಜಲಕ್ಕಾಗಿ ಹಾಗೂ ಜನಸಾಮಾನ್ಯರ ಹಕ್ಕುಗಳಿಗಾಗಿ 5 ವರ್ಷದಿಂದ ಹೋರಾಟ ಮಾಡುತ್ತಿದ್ದೇವೆ’ ಎಂದರು.</p>.<p>‘ಸಂಘಟನೆ ಸ್ಥಾಪನೆಯಾಗಿ 5 ವರ್ಷವಾಗಿದ್ದು, ಜನಪರ ಹೋರಾಟ ಹಾಗೂ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ. ಆದರೆ, ಕೋವಿಡ್ ಕಾರಣಕ್ಕೆ ಕಳೆದ ಕೆಲ ತಿಂಗಳಿಂದ ಸಂಘದ ಚಟುವಟಿಕೆ ನಡೆಸಲು ಸಾಧ್ಯವಾಗಲಿಲ್ಲ. ಕೊರೊನಾ ಎಲ್ಲರಿಗೂ ಬದುಕಿನ ಪಾಠ ಕಲಿಸಿದೆ’ ಎಂದು ತಿಳಿಸಿದರು.</p>.<p>‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು, ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ. ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿರುವ ಒಳಚರಂಡಿ ಮತ್ತು ರಸ್ತೆ ಅಗಲೀಕರಣದಿಂದ ನಗರದ ಸೌಂದರ್ಯಕ್ಕೆ ಧಕ್ಕೆಯಾಗಿದೆ. ದೂಳಿನ ಸಮಸ್ಯೆ ಹೆಚ್ಚಿದ್ದು, ಜನರು ಪ್ರತಿನಿತ್ಯ ಕಿರಿಕಿರಿ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ರಸ್ತೆಗಳ ಅವ್ಯವಸ್ಥೆಯಿಂದ ಆಗಾಗ್ಗೆ ಅಪಘಾತ ಸಂಭವಿಸುತ್ತಿವೆ. ದೂಳಿನಿಂದ ವಾಣಿಜ್ಯ ಚಟುವಟಕೆಗಳಿಗೆ ತೊಂದರೆಯಾಗುತ್ತಿದೆ. ಜಿಲ್ಲಾ ಕೇಂದ್ರದ ರಸ್ತೆಗಳನ್ನು ಶೀಘ್ರವೇ ದುರಸ್ತಿ ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಸಂಘಟನೆ ಜಿಲ್ಲಾ ಘಟಕದ ಉಪಾಧ್ಯಕ್ಷ ಡಿ.ಎ.ಮುನಿರಾಜು, ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್, ಸದಸ್ಯ ಶ್ರೀನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ‘ಜಿಲ್ಲೆಯ ಜನರ ಹಾಗೂ ರೈತರ ಕಷ್ಟ ಸುಖಕ್ಕೆ ಸ್ಪಂದಿಸಿ, ನ್ಯಾಯ ಒದಗಿಸುವ ಪ್ರಯತ್ನ ಮಾಡುತ್ತೇವೆ. ಸಂಘದಿಂದ ನಿರಂತರವಾಗಿ ಜನಹಿತ ಕಾರ್ಯ ನಡೆಸುತ್ತೇವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸುನಿಲ್ ಹೇಳಿದರು.</p>.<p>ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಸ್ವಚ್ಛತೆ, ಕುಡಿಯುವ ನೀರು ಹಾಗೂ ರಸ್ತೆ ಸೇರಿದಂತೆ ಮೂಲಸೌಕರ್ಯಕ್ಕೆ ಹೋರಾಟ ನಡೆಸಲು ಸಿದ್ಧವಾಗಿದ್ದೇವೆ. ಸಂಘಟನೆ ಮೂಲಕ ನಾಡು, ನುಡಿ, ನೆಲ, ಜಲಕ್ಕಾಗಿ ಹಾಗೂ ಜನಸಾಮಾನ್ಯರ ಹಕ್ಕುಗಳಿಗಾಗಿ 5 ವರ್ಷದಿಂದ ಹೋರಾಟ ಮಾಡುತ್ತಿದ್ದೇವೆ’ ಎಂದರು.</p>.<p>‘ಸಂಘಟನೆ ಸ್ಥಾಪನೆಯಾಗಿ 5 ವರ್ಷವಾಗಿದ್ದು, ಜನಪರ ಹೋರಾಟ ಹಾಗೂ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ. ಆದರೆ, ಕೋವಿಡ್ ಕಾರಣಕ್ಕೆ ಕಳೆದ ಕೆಲ ತಿಂಗಳಿಂದ ಸಂಘದ ಚಟುವಟಿಕೆ ನಡೆಸಲು ಸಾಧ್ಯವಾಗಲಿಲ್ಲ. ಕೊರೊನಾ ಎಲ್ಲರಿಗೂ ಬದುಕಿನ ಪಾಠ ಕಲಿಸಿದೆ’ ಎಂದು ತಿಳಿಸಿದರು.</p>.<p>‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು, ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತೇವೆ. ಜಿಲ್ಲಾ ಕೇಂದ್ರದಲ್ಲಿ ನಡೆಯುತ್ತಿರುವ ಒಳಚರಂಡಿ ಮತ್ತು ರಸ್ತೆ ಅಗಲೀಕರಣದಿಂದ ನಗರದ ಸೌಂದರ್ಯಕ್ಕೆ ಧಕ್ಕೆಯಾಗಿದೆ. ದೂಳಿನ ಸಮಸ್ಯೆ ಹೆಚ್ಚಿದ್ದು, ಜನರು ಪ್ರತಿನಿತ್ಯ ಕಿರಿಕಿರಿ ಅನುಭವಿಸುತ್ತಿದ್ದಾರೆ’ ಎಂದು ಹೇಳಿದರು.</p>.<p>‘ರಸ್ತೆಗಳ ಅವ್ಯವಸ್ಥೆಯಿಂದ ಆಗಾಗ್ಗೆ ಅಪಘಾತ ಸಂಭವಿಸುತ್ತಿವೆ. ದೂಳಿನಿಂದ ವಾಣಿಜ್ಯ ಚಟುವಟಕೆಗಳಿಗೆ ತೊಂದರೆಯಾಗುತ್ತಿದೆ. ಜಿಲ್ಲಾ ಕೇಂದ್ರದ ರಸ್ತೆಗಳನ್ನು ಶೀಘ್ರವೇ ದುರಸ್ತಿ ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಸಂಘಟನೆ ಜಿಲ್ಲಾ ಘಟಕದ ಉಪಾಧ್ಯಕ್ಷ ಡಿ.ಎ.ಮುನಿರಾಜು, ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್, ಸದಸ್ಯ ಶ್ರೀನಾಥ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>