ಈ ಸಂಬಂಧವಾಗಿ ಗುರುವಾರ ನಗರಸಭೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶ್ರೀಧರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಸ್ತೆಯು ನಗರಸಭೆಗೆ ಸೇರಿದೆ. ಆದರೆ ಒಬ್ಬ ವ್ಯಕ್ತಿ ತನ್ನ ಜಮೀನು ಎಂದು ತಕರಾರು ಎತ್ತಿದ್ದರಿಂದ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಸದ್ಯ ಸರ್ವೆ ಮುಗಿದು, ವರದಿ ಬಂದಿದೆ. ಕೂಡಲೇ ರಸ್ತೆಯನ್ನು ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.