ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಲ್ಲಿ ಬಣ ರಾಜಕೀಯ ಇಲ್ಲ

Last Updated 21 ಮೇ 2022, 15:42 IST
ಅಕ್ಷರ ಗಾತ್ರ

ಕೋಲಾರ: ‘ಮೂರು ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯನಾಗಿದ್ದೇನೆ. ನಾನು ಬಿಜೆಪಿಗೆ ಸೇರಿದ ನಂತರ ಪಕ್ಷದಲ್ಲಿ ಬಣ ರಾಜಕೀಯ ಸೃಷ್ಟಿಯಾಗಿಲ್ಲ. ಆರಂಭದಲ್ಲಿ ಮಾಲೂರು ಕ್ಷೇತ್ರದ ಟಿಕೆಟ್‌ ಅಕಾಂಕ್ಷಿಗಳಿಗೆ ಅಸಮಾಧಾನವಿತ್ತು. ಈಗ ಅಸಮಾಧಾನ ಶಮನಗೊಂಡಿದ್ದು, ಪಕ್ಷ ಸಂಘಟನೆ ಗಟ್ಟಿಗೊಳ್ಳುತ್ತಿದೆ’ ಎಂದು ಮಾಜಿ ಶಾಸಕ ಕೆ.ಎಸ್‌.ಮಂಜುನಾಥ್‌ಗೌಡ ಹೇಳಿದರು.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಇತ್ತೀಚೆಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಪರ ಕೆಲಸ ಮಾಡಿದ್ದೆ. ಕೇವಲ 400 ಮತ ಇದ್ದ ಬಿಜೆಪಿಗೆ 1,900ಕ್ಕೂ ಹೆಚ್ಚು ಮತ ಕೊಡಿಸುವ ಪ್ರಯತ್ನ ಮಾಡಿದ್ದೇವೆ. ಇದಕ್ಕೆ ನಮಗೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬ ನಂಬಿಕೆಯಿದೆ’ ಎಂದು ತಿಳಿಸಿದರು.

‘ಮಾಲೂರು ಪುರಸಭೆ ಚುನಾವಣೆಯಲ್ಲಿ 8 ಸ್ಥಾನ ಗೆಲ್ಲಿಸಿಕೊಂಡಿದ್ದೆವು. ಈಗ ಕ್ಷೇತ್ರದ ಯಾವುದೇ ಹಳ್ಳಿಗೆ ಹೋದರೂ ಹಬ್ಬದ ವಾತಾವರಣ ಸೃಷ್ಟಿಯಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಸುಧಾಕರ್ ಮತ್ತು ಮುನಿರತ್ನ ಅವರು ನನ್ನನ್ನು ಬಿಜೆಪಿಗೆ ಆಹ್ವಾನಿಸಿದರು. ಕಾರ್ಯಕರ್ತರೊಂದಿಗೆ ಚರ್ಚಿಸಿ ಬಿಜೆಪಿ ಸೇರಿದೆ. ಕ್ಷೇತ್ರದಲ್ಲಿ ಸಕ್ರಿಯವಾಗಿ ಪಕ್ಷ ಸಂಘಟಿಸಿ ಚುನಾವಣಾ ಗೆಲುವಿಗೆ ಪೂರಕ ವಾತಾವರಣ ಸೃಷ್ಟಿ ಮಾಡಿಕೊಳ್ಳುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT