<p><strong>ಬಂಗಾರಪೇಟೆ</strong>: ಚಿನ್ನದ ಅಂಗಡಿಗಳಿಗೆ ಆಭರಣ ಮಾರಾಟ ಮಾಡಲು ಹೊರಟಿದ್ದ ವ್ಯಾಪಾರಿಯಿಂದ ಎರಡೂವರೆ ಕೆ.ಜಿ. ಚಿನ್ನದ ಆಭರಣಗಳನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಭಾನುವಾರ ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಪಟ್ಟಣದ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನ ತಮ್ಮ ಅಂಗಡಿಯಲ್ಲಿ ತಯಾರಿಸಿದ ಚಿನ್ನಾಭರಣಗಳನ್ನು ಬಂಗಾರಪೇಟೆ ಮತ್ತು ಕೆಜಿಎಫ್ ಚಿನ್ನದ ಅಂಗಡಿಗಳಿಗೆ ಕೊಡಲು ಚಿನ್ನಾಭರಣ ವರ್ತಕ ಗೌತಮ್ ಚಂದ್ ಎಂಬುವವರು ಭಾನುವಾರ ಮಧ್ಯಾಹ್ನ ಬೈಕ್ನಲ್ಲಿ ಬಂಗಾರಪೇಟೆಯಿಂದ ಕೆಜಿಎಫ್ಗೆ ಹೊರಟಿದ್ದರು.</p>.<p>ಮಾರ್ಗಮಧ್ಯೆ ಪಟ್ಟಣದ ಬಸ್ ನಿಲ್ದಾಣದ ಬಳಿ ಟೊಮೆಟೊ ಖರೀದಿಸಲು ಬೈಕ್ ನಿಲ್ಲಿಸಿದ್ದರು. ಬೈಕ್ನಲ್ಲಿಯೇ ಕುಳಿತು ಟೊಮೆಟೊ ಖರೀದಿ ಮಾಡುತ್ತಿದ್ದಾಗ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ಇಬ್ಬರು ಚಿನ್ನಾಭರಣ ಇದ್ದ ಬ್ಯಾಗ್ ಕಿತ್ತುಕೊಂಡು ಪರಾರಿಯಾದರು. </p>.<p>ಚಿನ್ನಾಭರಣ ವರ್ತಕ ಗೌತಮ್ ಚಂದ್ ಅವರು ಬಂಗಾರಪೇಟೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಚಿನ್ನದ ಅಂಗಡಿಗಳಿಗೆ ಆಭರಣ ಮಾರಾಟ ಮಾಡಲು ಹೊರಟಿದ್ದ ವ್ಯಾಪಾರಿಯಿಂದ ಎರಡೂವರೆ ಕೆ.ಜಿ. ಚಿನ್ನದ ಆಭರಣಗಳನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಭಾನುವಾರ ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಪಟ್ಟಣದ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಬೆಂಗಳೂರಿನ ತಮ್ಮ ಅಂಗಡಿಯಲ್ಲಿ ತಯಾರಿಸಿದ ಚಿನ್ನಾಭರಣಗಳನ್ನು ಬಂಗಾರಪೇಟೆ ಮತ್ತು ಕೆಜಿಎಫ್ ಚಿನ್ನದ ಅಂಗಡಿಗಳಿಗೆ ಕೊಡಲು ಚಿನ್ನಾಭರಣ ವರ್ತಕ ಗೌತಮ್ ಚಂದ್ ಎಂಬುವವರು ಭಾನುವಾರ ಮಧ್ಯಾಹ್ನ ಬೈಕ್ನಲ್ಲಿ ಬಂಗಾರಪೇಟೆಯಿಂದ ಕೆಜಿಎಫ್ಗೆ ಹೊರಟಿದ್ದರು.</p>.<p>ಮಾರ್ಗಮಧ್ಯೆ ಪಟ್ಟಣದ ಬಸ್ ನಿಲ್ದಾಣದ ಬಳಿ ಟೊಮೆಟೊ ಖರೀದಿಸಲು ಬೈಕ್ ನಿಲ್ಲಿಸಿದ್ದರು. ಬೈಕ್ನಲ್ಲಿಯೇ ಕುಳಿತು ಟೊಮೆಟೊ ಖರೀದಿ ಮಾಡುತ್ತಿದ್ದಾಗ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ಇಬ್ಬರು ಚಿನ್ನಾಭರಣ ಇದ್ದ ಬ್ಯಾಗ್ ಕಿತ್ತುಕೊಂಡು ಪರಾರಿಯಾದರು. </p>.<p>ಚಿನ್ನಾಭರಣ ವರ್ತಕ ಗೌತಮ್ ಚಂದ್ ಅವರು ಬಂಗಾರಪೇಟೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>