<p><strong>ಕೋಲಾರ</strong>: ಅಧಿಕಾರಿಗಳಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಮೂವರು ನಕಲಿ ಎಸಿಬಿ ಅಧಿಕಾರಿಗಳನ್ನು ಕೋಲಾರ ಗ್ರಾಮಾಂತರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>ಬೆಳಗಾವಿಯ ಮುರಿಗಪ್ಪ, ಹಾಸನ ಜಿಲ್ಲೆ ಸಕಲೇಶಪುರದ ರಜನಿಕಾಂತ್ ಹಾಗೂ ಮಹಾರಾಷ್ಟ್ರದ ರಾಜೇಶ್ ಬಂಧಿತ ಆರೋಪಿಗಳು. ಇವರನ್ನು ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದರು.</p>.<p>ಎಸಿಬಿ ಅಧಿಕಾರಿಗಳು ಎಂದು ಹೇಳಿಕೊಂಡ ಈ ಮೂವರು ಕೋಲಾರದ ನಿರ್ಮಿತಿ ಕೇಂದ್ರದ ಯೋಜನಾ ಅಧಿಕಾರಿ ನಾರಾಯಣಗೌಡ ಅವರನ್ನು ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅನುಮಾನಗೊಂಡ ನಾರಾಯಣಗೌಡ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಈ ಮೂವರು ಆರೋಪಿಗಳ ವಿರುದ್ಧ ಇಂಥದ್ದೇ ಹಲವು ಪ್ರಕರಣಗಳುವಿವಿಧೆಡೆ ದಾಖಲಾಗಿವೆ.</p>.<p>'ನಮ್ಮನ್ನೇಕೆ ಆತಂಕವಾದಿಗಳಂತೆ ಕಾಣುತ್ತಿದ್ದೀರಿ? ಭ್ರಷ್ಟಾಚಾರ ಮಾಡಿದವರನ್ನು ಸುಮ್ಮನೇ ಬಿಟ್ಟಿದ್ದೀರಿ. ಅವರು ದೇಶ ಹಾಳು ಮಾಡುತ್ತಿದ್ದಾರೆ. ಭ್ರಷ್ಟಾಚಾರ ಬಯಲಿಗೆಳೆವುದು ನಮ್ಮ ಉದ್ದೇಶವಾಗಿತ್ತು' ಎಂದು ಆರೋಪಿಗಳು ಪೊಲೀಸರೊಂದಿಗೆ ವಾಗ್ವಾದದಲ್ಲಿ ತೊಡಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಅಧಿಕಾರಿಗಳಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಮೂವರು ನಕಲಿ ಎಸಿಬಿ ಅಧಿಕಾರಿಗಳನ್ನು ಕೋಲಾರ ಗ್ರಾಮಾಂತರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.</p>.<p>ಬೆಳಗಾವಿಯ ಮುರಿಗಪ್ಪ, ಹಾಸನ ಜಿಲ್ಲೆ ಸಕಲೇಶಪುರದ ರಜನಿಕಾಂತ್ ಹಾಗೂ ಮಹಾರಾಷ್ಟ್ರದ ರಾಜೇಶ್ ಬಂಧಿತ ಆರೋಪಿಗಳು. ಇವರನ್ನು ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದರು.</p>.<p>ಎಸಿಬಿ ಅಧಿಕಾರಿಗಳು ಎಂದು ಹೇಳಿಕೊಂಡ ಈ ಮೂವರು ಕೋಲಾರದ ನಿರ್ಮಿತಿ ಕೇಂದ್ರದ ಯೋಜನಾ ಅಧಿಕಾರಿ ನಾರಾಯಣಗೌಡ ಅವರನ್ನು ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅನುಮಾನಗೊಂಡ ನಾರಾಯಣಗೌಡ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಈ ಮೂವರು ಆರೋಪಿಗಳ ವಿರುದ್ಧ ಇಂಥದ್ದೇ ಹಲವು ಪ್ರಕರಣಗಳುವಿವಿಧೆಡೆ ದಾಖಲಾಗಿವೆ.</p>.<p>'ನಮ್ಮನ್ನೇಕೆ ಆತಂಕವಾದಿಗಳಂತೆ ಕಾಣುತ್ತಿದ್ದೀರಿ? ಭ್ರಷ್ಟಾಚಾರ ಮಾಡಿದವರನ್ನು ಸುಮ್ಮನೇ ಬಿಟ್ಟಿದ್ದೀರಿ. ಅವರು ದೇಶ ಹಾಳು ಮಾಡುತ್ತಿದ್ದಾರೆ. ಭ್ರಷ್ಟಾಚಾರ ಬಯಲಿಗೆಳೆವುದು ನಮ್ಮ ಉದ್ದೇಶವಾಗಿತ್ತು' ಎಂದು ಆರೋಪಿಗಳು ಪೊಲೀಸರೊಂದಿಗೆ ವಾಗ್ವಾದದಲ್ಲಿ ತೊಡಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>