<p><strong>ಕೋಲಾರ: </strong>ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಆರ್ಡಬ್ಲ್ಯೂ ಮತ್ತು ಎಂಆರ್ಡಬ್ಲ್ಯೂ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿ ಸದಸ್ಯರು ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗುರುವಾರ ಧರಣಿ ನಡೆಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಮುರಳಿ ಮಾತನಾಡಿ, ‘ಜಿಲ್ಲೆಯಲ್ಲಿ ೪೮,೦೦೦ಕ್ಕಿಂತ ಅಧಿಕ ಮಂದಿ ವಿಕಲಚೇತನರಿದ್ದಾರೆ. ಸರ್ಕಾರಿ ಯೋಜನೆಗಳನ್ನು ಕಟ್ಟಕಡೇಯ ವಿಕಲಚೇತನರಿಗೆ ತಲುಪಿಸುವಲ್ಲಿ ೧೧ ವರ್ಷಗಳಿಂದ ವಿಆರ್ಡಬ್ಲ್ಯೂ ಮತ್ತು ಎಂಆರ್ಡಬ್ಲ್ಯೂಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ನೀಡುತ್ತಿರುವ ವೇತನವನ್ನು ಕನಿಷ್ಠ ₨ 18 ಸಾವಿರಕ್ಕೆ ಏರಿಕೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗವಿಕಲರ ಹುದ್ದೆಯನ್ನು ಖಾಯಂಗೊಳಿಸಬೇಕು. ಅಂವಿಕಲರ ಪಿಂಚಣಿಯನ್ನು ₨ 5 ಸಾವಿರಕ್ಕೆ ಏರಿಕೆ ಮಾಡಬೇಕು. ಉಚಿತ ಬಸ್ ಪಾಸ್ ವಿತರಣೆ ಜತೆಗೆ ರಾಜ್ಯದಂದ್ಯ ಸರ್ಕಾರಿ ಬಸ್ನಲ್ಲಿ ಸಂಚರಿಸಲು ಅವಕಾಸ ಕಲ್ಪಿಸಬೇಕು. ಕೆಲಸ ನಿರ್ವಹಣೆ ಮಾಡುತ್ತಿರುವ ಅಂಗವಿಕಲರಿಗೆ ತ್ರಿಚಕ್ರ ವಾಹನ ನೀಡಬೇಕು. ಕೆಲಸದ ವೇಳೆ ಮರಣ ಹೊಂದಿದರೆ ಕುಟುಂಬಕ್ಕೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಸರ್ಕಾರಿ ಇಲಾಖೆಗಳಲ್ಲಿ ಅಂಗವಿಕಲರಿಗೆ ಮೀಸಲಿರಿಸುತ್ತಿರುವ ಶೇ.೫ರರಷ್ಟು ಅನುದಾನ ಸಮರ್ಪಕವಾಗಿ ವೆಚ್ಚ ಮಾಡಬೇಕು. ಪ್ರತ್ಯೇಕ ಸಚಿವಾಲಯ ಮತ್ತು ಅಂಗವಿಕಲರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆದ್ಯತೆ ಮೇರೆಗೆ ಅಂಗವಿಕಲರಿಗೆ ಅವಕಾಶ ನೀಡಬೇಕು’ ಎಂದು ಕೋರಿದರು.</p>.<p>ಸಂಘದ ಸದಸ್ಯರಾದ ಜಮೀಲ್, ಫರ್ವೀಕ್ ಪಾಷ, ರವಿಕುಮಾರ್, ಶಾಂತಮ್ಮ, ಮಂಜುಳಾ, ಶ್ವೇತಾ, ಗೀತಮ್ಮ, ರೂಪ, ನಜೀರ್, ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರಾಮುಶಿವಣ್ಣ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ರಾಜ್ಯಾಧ್ಯಕ್ಷ ಎನ್. ರಾಜೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿಆರ್ಡಬ್ಲ್ಯೂ ಮತ್ತು ಎಂಆರ್ಡಬ್ಲ್ಯೂ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿ ಸದಸ್ಯರು ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗುರುವಾರ ಧರಣಿ ನಡೆಸಿದರು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಮುರಳಿ ಮಾತನಾಡಿ, ‘ಜಿಲ್ಲೆಯಲ್ಲಿ ೪೮,೦೦೦ಕ್ಕಿಂತ ಅಧಿಕ ಮಂದಿ ವಿಕಲಚೇತನರಿದ್ದಾರೆ. ಸರ್ಕಾರಿ ಯೋಜನೆಗಳನ್ನು ಕಟ್ಟಕಡೇಯ ವಿಕಲಚೇತನರಿಗೆ ತಲುಪಿಸುವಲ್ಲಿ ೧೧ ವರ್ಷಗಳಿಂದ ವಿಆರ್ಡಬ್ಲ್ಯೂ ಮತ್ತು ಎಂಆರ್ಡಬ್ಲ್ಯೂಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಅವರಿಗೆ ನೀಡುತ್ತಿರುವ ವೇತನವನ್ನು ಕನಿಷ್ಠ ₨ 18 ಸಾವಿರಕ್ಕೆ ಏರಿಕೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗವಿಕಲರ ಹುದ್ದೆಯನ್ನು ಖಾಯಂಗೊಳಿಸಬೇಕು. ಅಂವಿಕಲರ ಪಿಂಚಣಿಯನ್ನು ₨ 5 ಸಾವಿರಕ್ಕೆ ಏರಿಕೆ ಮಾಡಬೇಕು. ಉಚಿತ ಬಸ್ ಪಾಸ್ ವಿತರಣೆ ಜತೆಗೆ ರಾಜ್ಯದಂದ್ಯ ಸರ್ಕಾರಿ ಬಸ್ನಲ್ಲಿ ಸಂಚರಿಸಲು ಅವಕಾಸ ಕಲ್ಪಿಸಬೇಕು. ಕೆಲಸ ನಿರ್ವಹಣೆ ಮಾಡುತ್ತಿರುವ ಅಂಗವಿಕಲರಿಗೆ ತ್ರಿಚಕ್ರ ವಾಹನ ನೀಡಬೇಕು. ಕೆಲಸದ ವೇಳೆ ಮರಣ ಹೊಂದಿದರೆ ಕುಟುಂಬಕ್ಕೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಸರ್ಕಾರಿ ಇಲಾಖೆಗಳಲ್ಲಿ ಅಂಗವಿಕಲರಿಗೆ ಮೀಸಲಿರಿಸುತ್ತಿರುವ ಶೇ.೫ರರಷ್ಟು ಅನುದಾನ ಸಮರ್ಪಕವಾಗಿ ವೆಚ್ಚ ಮಾಡಬೇಕು. ಪ್ರತ್ಯೇಕ ಸಚಿವಾಲಯ ಮತ್ತು ಅಂಗವಿಕಲರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು. ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆದ್ಯತೆ ಮೇರೆಗೆ ಅಂಗವಿಕಲರಿಗೆ ಅವಕಾಶ ನೀಡಬೇಕು’ ಎಂದು ಕೋರಿದರು.</p>.<p>ಸಂಘದ ಸದಸ್ಯರಾದ ಜಮೀಲ್, ಫರ್ವೀಕ್ ಪಾಷ, ರವಿಕುಮಾರ್, ಶಾಂತಮ್ಮ, ಮಂಜುಳಾ, ಶ್ವೇತಾ, ಗೀತಮ್ಮ, ರೂಪ, ನಜೀರ್, ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರಾಮುಶಿವಣ್ಣ, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ರಾಜ್ಯಾಧ್ಯಕ್ಷ ಎನ್. ರಾಜೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>