<p><strong>ಕೋಲಾರ:</strong> ‘ಶಿಕ್ಷಕರು ಬೋಧನಾ ಕೌಶಲ ವೃದ್ದಿಸಿಕೊಂಡು ಮಕ್ಕಳಲ್ಲಿ ಸೃಜನಶೀಲತೆ, ನಾಯಕತ್ವ ಗುಣ ಬೆಳೆಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರತ್ನಯ್ಯ ಸಲಹೆ ನೀಡಿದರು.</p>.<p>ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಷನ್ ವತಿಯಿಂದ ಶನಿವಾರ ಆಯೋಜಿಸಿದ್ದ ರಸಪ್ರಶ್ನೆ ಸ್ವರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿ, ‘ತಂತ್ರಜ್ಞಾನ ಅಭಿವೃದ್ದಿಯಾಗುತ್ತಿದ್ದಂತೆ ಹೊಸಹೊಸ ಅನ್ವೇಷಣೆಗಳು ನಡೆಯುತ್ತಿದ್ದು, ಶಿಕ್ಷಕರು ನಿರಂತರ ಅಧ್ಯಯನದಿಂದ ತಮ್ಮ ಬೋಧನಾ ಸಾಮರ್ಥ್ಯ ವೃದ್ದಿಸಿಕೊಂಡು ಮಕ್ಕಳನ್ನು ಸಿದ್ದಗೊಳಿಸಬೇಕು’ ಎಂದರು.</p>.<p>‘ವಿಜ್ಞಾನ ಕಷ್ಟವಲ್ಲ ಆದರೆ ಅದನ್ನು ಮಕ್ಕಳು ಆಸಕ್ತಿಯಿಂದ ಕಲಿಯುವ ವಾತಾವರಣ ಸೃಷ್ಟಿ ಶಿಕ್ಷಕರ ಜವಾಬ್ದಾರಿ. ಪ್ರಯೋಗಗಳ ಮೂಲಕ ನೀಡುವ ವಿಜ್ಞಾನ ಶಿಕ್ಷಣ ಮಕ್ಕಳ ಮನದಲ್ಲಿ ಶಾಶ್ವತವಾಗಿ ನೆಲೆಯೂರುತ್ತದೆ’ ಎಂದು ಹೇಳಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಅನೇಕ ಶಾಲೆಗಳಲ್ಲಿ ಉತ್ತಮ ವಿಜ್ಞಾನ ಉಪಕರಣಗಳು ಇದ್ದು, ಅವುಗಳನ್ನು ಶಾಲಾ ಕೊಠಡಿಯಲ್ಲಿ ಮಕ್ಕಳಿಗೆ ಪ್ರದರ್ಶಿಸಬೇಕು’ ಎಂದು ಸೂಚಿಸಿದರು.</p>.<p>‘ಪೋಷಕರು ಮಕ್ಕಳ ಬಗ್ಗೆ ಅಪಾರ ನಂಬಿಕೆಯಿಂದ ಶಾಲೆಗೆ ಕಳುಹಿಸುತ್ತಾರೆ. ಅವರ ನಂಬಿಕೆ, ಆಶಯಗಳಿಗೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು. ನಿರಂತರ ಅಧ್ಯಯನ ನಡೆಸಿ, ಫಲಿತಾಂಶ ಹೆಚ್ಚಿಸಿಕೊಳ್ಳಬೇಕು’ ಎಂದು ಕವಿ ಮಾತು ಹೇಳಿದರು.</p>.<p>ಅಗಸ್ತ್ಯ ಇಂಟರ್ ನ್ಯಾಷನಲ್ನ ಪ್ರಾದೇಶಿಕ ಅಧಿಕಾರಿ ದಿಲೀಪ್ ಮಾತನಾಡಿ, ‘ರಸಪ್ರಶ್ನೆ ಸ್ವರ್ಧೆಗಳಲ್ಲಿ ತಾಲ್ಲೂಕಿನ ೫೦ ಹಿರಿಯ ಪ್ರಾಥಮಿಕ ಶಾಲೆಗಳಿಂದ ೧೦೦ ತಂಡಗಳು ಪಾಲ್ಗೊಂಡಿದ್ದು, ಮಕ್ಕಳು ಧೈರ್ಯದಿಂದ ಪ್ರಶ್ನೆಗಳಿಗೆ ಉತ್ತರ ನೀಡಿ’ ಎಂದರು.</p>.<p>‘ಮಕ್ಕಳ ವ್ಯಕ್ತಿತ್ವ ವಿಕಸನದ ಜತೆಗೆ ಅವರಲ್ಲಿ ತಂತ್ರಜ್ಞಾನದ ಮಾಹಿತಿ ಹೆಚ್ಚಿಸಿ ನಾಯಕತ್ವ ಗುಣ, ಸೃಜನಶೀಲತೆ ಹೆಚ್ಚಿಸುವುದೇ ನಮ್ಮ ಸಂಸ್ಥೆಯ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>ರಸಪ್ರಶ್ನೆ ಸ್ವರ್ಧೆಯಲ್ಲಿ ತಾಲ್ಲೂಕಿನ ಕಾಕಿನೆತ್ತ ಶಾಲೆಯ ಕೆ.ವಿ.ಗುಣಶ್ರೀ ಹಾಗೂ ಕೆ.ಮುನೇಶ್ ಪ್ರಥಮ ಸ್ಥಾನ, ರಾಜಕಲ್ಲಹಳ್ಳಿ ಶಾಲೆಯ ವಿ.ಪ್ರಜ್ವಲ್, ಕೆ.ಸಿ.ಹರ್ಷ ದ್ವಿತೀಯ ಸ್ಥಾನ ಹಾಗೂ ವೇಮಗಲ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿ.ಎಂ.ಸಹನ ಹಾಗೂ ಕೆ.ಎಂ.ಜಯಶ್ರೀ ತೃತೀಯ ಸ್ಥಾನ ಪಡೆದುಕೊಂಡರು.</p>.<p>ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಷನ್ನ ಮುಖ್ಯಸ್ಥರಾದ ನಾಗಪ್ಪ, ಆನಂದ್, ಹರೀಶ್ಕುಮಾರ್, ರಾಘವೇಂದ್ರ, ಮಹೇಶ್, ಪ್ರಿಯಾಂಕಾ, ಗಾಯಿತ್ರಿ, ವಸಂತಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಶಿಕ್ಷಕರು ಬೋಧನಾ ಕೌಶಲ ವೃದ್ದಿಸಿಕೊಂಡು ಮಕ್ಕಳಲ್ಲಿ ಸೃಜನಶೀಲತೆ, ನಾಯಕತ್ವ ಗುಣ ಬೆಳೆಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರತ್ನಯ್ಯ ಸಲಹೆ ನೀಡಿದರು.</p>.<p>ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಷನ್ ವತಿಯಿಂದ ಶನಿವಾರ ಆಯೋಜಿಸಿದ್ದ ರಸಪ್ರಶ್ನೆ ಸ್ವರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿ, ‘ತಂತ್ರಜ್ಞಾನ ಅಭಿವೃದ್ದಿಯಾಗುತ್ತಿದ್ದಂತೆ ಹೊಸಹೊಸ ಅನ್ವೇಷಣೆಗಳು ನಡೆಯುತ್ತಿದ್ದು, ಶಿಕ್ಷಕರು ನಿರಂತರ ಅಧ್ಯಯನದಿಂದ ತಮ್ಮ ಬೋಧನಾ ಸಾಮರ್ಥ್ಯ ವೃದ್ದಿಸಿಕೊಂಡು ಮಕ್ಕಳನ್ನು ಸಿದ್ದಗೊಳಿಸಬೇಕು’ ಎಂದರು.</p>.<p>‘ವಿಜ್ಞಾನ ಕಷ್ಟವಲ್ಲ ಆದರೆ ಅದನ್ನು ಮಕ್ಕಳು ಆಸಕ್ತಿಯಿಂದ ಕಲಿಯುವ ವಾತಾವರಣ ಸೃಷ್ಟಿ ಶಿಕ್ಷಕರ ಜವಾಬ್ದಾರಿ. ಪ್ರಯೋಗಗಳ ಮೂಲಕ ನೀಡುವ ವಿಜ್ಞಾನ ಶಿಕ್ಷಣ ಮಕ್ಕಳ ಮನದಲ್ಲಿ ಶಾಶ್ವತವಾಗಿ ನೆಲೆಯೂರುತ್ತದೆ’ ಎಂದು ಹೇಳಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಮಾತನಾಡಿ, ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಅನೇಕ ಶಾಲೆಗಳಲ್ಲಿ ಉತ್ತಮ ವಿಜ್ಞಾನ ಉಪಕರಣಗಳು ಇದ್ದು, ಅವುಗಳನ್ನು ಶಾಲಾ ಕೊಠಡಿಯಲ್ಲಿ ಮಕ್ಕಳಿಗೆ ಪ್ರದರ್ಶಿಸಬೇಕು’ ಎಂದು ಸೂಚಿಸಿದರು.</p>.<p>‘ಪೋಷಕರು ಮಕ್ಕಳ ಬಗ್ಗೆ ಅಪಾರ ನಂಬಿಕೆಯಿಂದ ಶಾಲೆಗೆ ಕಳುಹಿಸುತ್ತಾರೆ. ಅವರ ನಂಬಿಕೆ, ಆಶಯಗಳಿಗೆ ಚ್ಯುತಿ ಬಾರದಂತೆ ನಡೆದುಕೊಳ್ಳಬೇಕು. ನಿರಂತರ ಅಧ್ಯಯನ ನಡೆಸಿ, ಫಲಿತಾಂಶ ಹೆಚ್ಚಿಸಿಕೊಳ್ಳಬೇಕು’ ಎಂದು ಕವಿ ಮಾತು ಹೇಳಿದರು.</p>.<p>ಅಗಸ್ತ್ಯ ಇಂಟರ್ ನ್ಯಾಷನಲ್ನ ಪ್ರಾದೇಶಿಕ ಅಧಿಕಾರಿ ದಿಲೀಪ್ ಮಾತನಾಡಿ, ‘ರಸಪ್ರಶ್ನೆ ಸ್ವರ್ಧೆಗಳಲ್ಲಿ ತಾಲ್ಲೂಕಿನ ೫೦ ಹಿರಿಯ ಪ್ರಾಥಮಿಕ ಶಾಲೆಗಳಿಂದ ೧೦೦ ತಂಡಗಳು ಪಾಲ್ಗೊಂಡಿದ್ದು, ಮಕ್ಕಳು ಧೈರ್ಯದಿಂದ ಪ್ರಶ್ನೆಗಳಿಗೆ ಉತ್ತರ ನೀಡಿ’ ಎಂದರು.</p>.<p>‘ಮಕ್ಕಳ ವ್ಯಕ್ತಿತ್ವ ವಿಕಸನದ ಜತೆಗೆ ಅವರಲ್ಲಿ ತಂತ್ರಜ್ಞಾನದ ಮಾಹಿತಿ ಹೆಚ್ಚಿಸಿ ನಾಯಕತ್ವ ಗುಣ, ಸೃಜನಶೀಲತೆ ಹೆಚ್ಚಿಸುವುದೇ ನಮ್ಮ ಸಂಸ್ಥೆಯ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>ರಸಪ್ರಶ್ನೆ ಸ್ವರ್ಧೆಯಲ್ಲಿ ತಾಲ್ಲೂಕಿನ ಕಾಕಿನೆತ್ತ ಶಾಲೆಯ ಕೆ.ವಿ.ಗುಣಶ್ರೀ ಹಾಗೂ ಕೆ.ಮುನೇಶ್ ಪ್ರಥಮ ಸ್ಥಾನ, ರಾಜಕಲ್ಲಹಳ್ಳಿ ಶಾಲೆಯ ವಿ.ಪ್ರಜ್ವಲ್, ಕೆ.ಸಿ.ಹರ್ಷ ದ್ವಿತೀಯ ಸ್ಥಾನ ಹಾಗೂ ವೇಮಗಲ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿ.ಎಂ.ಸಹನ ಹಾಗೂ ಕೆ.ಎಂ.ಜಯಶ್ರೀ ತೃತೀಯ ಸ್ಥಾನ ಪಡೆದುಕೊಂಡರು.</p>.<p>ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಷನ್ನ ಮುಖ್ಯಸ್ಥರಾದ ನಾಗಪ್ಪ, ಆನಂದ್, ಹರೀಶ್ಕುಮಾರ್, ರಾಘವೇಂದ್ರ, ಮಹೇಶ್, ಪ್ರಿಯಾಂಕಾ, ಗಾಯಿತ್ರಿ, ವಸಂತಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>