<p><strong>ಬಂಗಾರಪೇಟೆ: </strong>ದಿಲ್ಲಿಯಲ್ಲಿ ಹೋರಾಟನಿರತ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಹಾಗೂ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಫೆ. 6ರಂದು ಹಂಚಾಳ ಗೇಟ್ ಬಂದ್ ಮಾಡಲು ಸಂಘದ ಸಭೆಯಲ್ಲಿ ನಿರ್ಣಯಿಸಲಾಯಿತು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್ ತಿಳಿಸಿದರು.</p>.<p>ಕೃಷಿ ಕಾಯ್ದೆಗಳ ವಿರುದ್ಧ ಸತತವಾಗಿ ಎರಡು ತಿಂಗಳಿಂದ ದಿಲ್ಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ ಸರ್ಕಾರ ನೆಪಮಾತ್ರಕ್ಕೆ ರೈತರ ಜೊತೆ ಮಾತುಕತೆ ನಡೆಸಿರುವುದು ಖಂಡನೀಯ ಎಂದು ದೂರಿದರು.</p>.<p>ತಾಲ್ಲೂಕು ಅಧ್ಯಕ್ಷ ಮುನ್ನ ಮಾತನಾಡಿದರು. ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ಹಸಿರು ಸೇನೆಯಜಿಲ್ಲಾ ಅಧ್ಯಕ್ಷ ಕಿರಣ್, ತಾಲ್ಲೂಕು ಅಧ್ಯಕ್ಷ ಚಾಂದ್ಪಾಷಾ, ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಚಲಪತಿ, ಮಹಮದ್ ಶೋಯಿಬ್, ಜಮೀರ್ ಪಾಷಾ, ಜಾವೀದ್, ಘೌಸ್, ವಟ್ರಕುಂಟೆ ಆಂಜಿನಪ್ಪ, ಬಾಬಾಜಾನ್, ಕೋಲಾರ ತಾಲ್ಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಮಾಲೂರು ತಾಲ್ಲೂಕು ಅಧ್ಯಕ್ಷ ಮಾಸ್ತಿ ವೆಂಕಟೇಶ್, ಮಹಮದ್ ಬುರಾನ್, ವಡಗೂರು ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ: </strong>ದಿಲ್ಲಿಯಲ್ಲಿ ಹೋರಾಟನಿರತ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಹಾಗೂ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಫೆ. 6ರಂದು ಹಂಚಾಳ ಗೇಟ್ ಬಂದ್ ಮಾಡಲು ಸಂಘದ ಸಭೆಯಲ್ಲಿ ನಿರ್ಣಯಿಸಲಾಯಿತು ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್ ತಿಳಿಸಿದರು.</p>.<p>ಕೃಷಿ ಕಾಯ್ದೆಗಳ ವಿರುದ್ಧ ಸತತವಾಗಿ ಎರಡು ತಿಂಗಳಿಂದ ದಿಲ್ಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ ಸರ್ಕಾರ ನೆಪಮಾತ್ರಕ್ಕೆ ರೈತರ ಜೊತೆ ಮಾತುಕತೆ ನಡೆಸಿರುವುದು ಖಂಡನೀಯ ಎಂದು ದೂರಿದರು.</p>.<p>ತಾಲ್ಲೂಕು ಅಧ್ಯಕ್ಷ ಮುನ್ನ ಮಾತನಾಡಿದರು. ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ, ಹಸಿರು ಸೇನೆಯಜಿಲ್ಲಾ ಅಧ್ಯಕ್ಷ ಕಿರಣ್, ತಾಲ್ಲೂಕು ಅಧ್ಯಕ್ಷ ಚಾಂದ್ಪಾಷಾ, ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಚಲಪತಿ, ಮಹಮದ್ ಶೋಯಿಬ್, ಜಮೀರ್ ಪಾಷಾ, ಜಾವೀದ್, ಘೌಸ್, ವಟ್ರಕುಂಟೆ ಆಂಜಿನಪ್ಪ, ಬಾಬಾಜಾನ್, ಕೋಲಾರ ತಾಲ್ಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಮಾಲೂರು ತಾಲ್ಲೂಕು ಅಧ್ಯಕ್ಷ ಮಾಸ್ತಿ ವೆಂಕಟೇಶ್, ಮಹಮದ್ ಬುರಾನ್, ವಡಗೂರು ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>