<p><strong>ಕೆಜಿಎಫ್</strong>: ಗುಟ್ಟಹಳ್ಳಿಯ ಬಂಗಾರು ತಿರುಪತಿ ದೇವಾಲಯದ ಆಡಳಿತ ಕಚೇರಿಯಲ್ಲಿ ಅರ್ಚಕರೊಬ್ಬರು ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಕುರಿತಂತೆ ಗುರುವಾರ ಮಜರಾಯಿ ತಹಶೀಲ್ದಾರ್ ನಾಗವೇಣಿ ಸಿಬ್ಬಂದಿಯ ವಿಚಾರಣೆ ನಡೆಸಿದರು.</p>.<p>ದೇವಾಲಯದ ಹೂವಾಡಿಗ ಹಾಗೂ ಅಂಗಳ ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣ ಎಂಬುವರು ಜೂನ್ 16ರಂದು ಆಡಳಿತ ಕಚೇರಿಯ ಶೌಚಾಲಯದ ಟಬ್ ಸ್ವಚ್ಛ ಮಾಡುತ್ತಿರುವುದು ಹಾಗೂ ದೇವಾಲಯದ ಪ್ರಾಂಗಣದಲ್ಲಿ ಕಸ ಗುಡಿಸುತ್ತಿರುವ ಫೋಟೊ ವೈರಲ್ ಆಗಿತ್ತು.</p>.<p>ಈ ಸಂಬಂಧ ‘ಪ್ರಜಾವಾಣಿ’ ಬುಧವಾರ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಆಗಮಿಸಿದ ಮುಜರಾಯಿ ತಹಶೀಲ್ದಾರ್ ನಾಗವೇಣಿ ಕಚೇರಿಯ ಕಾರ್ಯ ನಿರ್ವಾಹಕ ಸುಬ್ರಹ್ಮಣಿ, ಪೇಷ್ಕಾರ್ ಗೋವಿಂದಪ್ಪ, ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದರು.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗಿದೆ. ಜಿಲ್ಲಾಧಿಕಾರಿ ಅವರು ಮುಂದಿನ ಕ್ರಮಕೈಗೊಳ್ಳಲಿದ್ದಾರೆ. ವರದಿಯನ್ನು ಅವರಿಗೆ ನೀಡಲಾಗುವುದು. ವರದಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದು ತಹಶೀಲ್ದಾರ್ ನಾಗವೇಣಿ<br />ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್</strong>: ಗುಟ್ಟಹಳ್ಳಿಯ ಬಂಗಾರು ತಿರುಪತಿ ದೇವಾಲಯದ ಆಡಳಿತ ಕಚೇರಿಯಲ್ಲಿ ಅರ್ಚಕರೊಬ್ಬರು ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಕುರಿತಂತೆ ಗುರುವಾರ ಮಜರಾಯಿ ತಹಶೀಲ್ದಾರ್ ನಾಗವೇಣಿ ಸಿಬ್ಬಂದಿಯ ವಿಚಾರಣೆ ನಡೆಸಿದರು.</p>.<p>ದೇವಾಲಯದ ಹೂವಾಡಿಗ ಹಾಗೂ ಅಂಗಳ ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣ ಎಂಬುವರು ಜೂನ್ 16ರಂದು ಆಡಳಿತ ಕಚೇರಿಯ ಶೌಚಾಲಯದ ಟಬ್ ಸ್ವಚ್ಛ ಮಾಡುತ್ತಿರುವುದು ಹಾಗೂ ದೇವಾಲಯದ ಪ್ರಾಂಗಣದಲ್ಲಿ ಕಸ ಗುಡಿಸುತ್ತಿರುವ ಫೋಟೊ ವೈರಲ್ ಆಗಿತ್ತು.</p>.<p>ಈ ಸಂಬಂಧ ‘ಪ್ರಜಾವಾಣಿ’ ಬುಧವಾರ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಆಗಮಿಸಿದ ಮುಜರಾಯಿ ತಹಶೀಲ್ದಾರ್ ನಾಗವೇಣಿ ಕಚೇರಿಯ ಕಾರ್ಯ ನಿರ್ವಾಹಕ ಸುಬ್ರಹ್ಮಣಿ, ಪೇಷ್ಕಾರ್ ಗೋವಿಂದಪ್ಪ, ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದರು.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗಿದೆ. ಜಿಲ್ಲಾಧಿಕಾರಿ ಅವರು ಮುಂದಿನ ಕ್ರಮಕೈಗೊಳ್ಳಲಿದ್ದಾರೆ. ವರದಿಯನ್ನು ಅವರಿಗೆ ನೀಡಲಾಗುವುದು. ವರದಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದು ತಹಶೀಲ್ದಾರ್ ನಾಗವೇಣಿ<br />ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>