ಮಂಗಳವಾರ, ಮಾರ್ಚ್ 21, 2023
20 °C

ಅರ್ಚಕನಿಂದ ಶೌಚಾಲಯ ಸ್ವಚ್ಛ: ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಜಿಎಫ್‌: ಗುಟ್ಟಹಳ್ಳಿಯ ಬಂಗಾರು ತಿರುಪತಿ ದೇವಾಲಯದ ಆಡಳಿತ ಕಚೇರಿಯಲ್ಲಿ ಅರ್ಚಕರೊಬ್ಬರು ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಕುರಿತಂತೆ ಗುರುವಾರ ಮಜರಾಯಿ ತಹಶೀಲ್ದಾರ್ ನಾಗವೇಣಿ ಸಿಬ್ಬಂದಿಯ ವಿಚಾರಣೆ ನಡೆಸಿದರು.

ದೇವಾಲಯದ ಹೂವಾಡಿಗ ಹಾಗೂ ಅಂಗಳ ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣ ಎಂಬುವರು ಜೂನ್‌ 16ರಂದು ಆಡಳಿತ ಕಚೇರಿಯ ಶೌಚಾಲಯದ ಟಬ್ ಸ್ವಚ್ಛ ಮಾಡುತ್ತಿರುವುದು ಹಾಗೂ ದೇವಾಲಯದ ಪ್ರಾಂಗಣದಲ್ಲಿ ಕಸ ಗುಡಿಸುತ್ತಿರುವ ಫೋಟೊ ವೈರಲ್ ಆಗಿತ್ತು.

ಈ ಸಂಬಂಧ ‘ಪ್ರಜಾವಾಣಿ’ ಬುಧವಾರ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಆಗಮಿಸಿದ ಮುಜರಾಯಿ ತಹಶೀಲ್ದಾರ್ ನಾಗವೇಣಿ ಕಚೇರಿಯ ಕಾರ್ಯ ನಿರ್ವಾಹಕ ಸುಬ್ರಹ್ಮಣಿ, ಪೇಷ್ಕಾರ್ ಗೋವಿಂದಪ್ಪ, ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಯನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದರು.

‘ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗಿದೆ. ಜಿಲ್ಲಾಧಿಕಾರಿ ಅವರು ಮುಂದಿನ ಕ್ರಮಕೈಗೊಳ್ಳಲಿದ್ದಾರೆ. ವರದಿಯನ್ನು ಅವರಿಗೆ ನೀಡಲಾಗುವುದು. ವರದಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದು ತಹಶೀಲ್ದಾರ್ ನಾಗವೇಣಿ
ತಿಳಿಸಿದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು