<p><strong>ಕೋಲಾರ: </strong>‘ರಾಜ್ಯ ಮತ್ತು ದೇಶದಲ್ಲಿ ಲಾಕ್ಡೌನ್ ಇರುವುದರಿಂದ ಟೊಮೊಟೊ ಬೆಲೆಯಲ್ಲಿ ಏರುಪೇರಾಗಿದ್ದು, ಬೆಲೆ ಕುಸಿತ ತಾತ್ಕಾಲಿಕ’ ಎಂದು ಎಪಿಎಂಸಿ ಅಧ್ಯಕ್ಷ ಕೆ.ಮಂಜುನಾಥ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಎಪಿಎಂಸಿ ಆವರಣದಲ್ಲಿ ಶನಿವಾರ ಸೋಡಿಯಂ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆಗೆ ಚಾಲನೆ ನೀಡಿ ಮಾತನಾಡಿ, ‘ಟೊಮೆಟೊ ಬೆಲೆ ಕುಸಿತಕ್ಕೆ ರೈತರು ಧೃತಿಗೆಡಬಾರದು. ಕೋವಿಡ್ ನಿಯಂತ್ರಣಕ್ಕೆ ಬಂದು ಲಾಕ್ಡೌನ್ ಅಂತ್ಯಗೊಂಡರೆ ಖಂಡಿತ ಬೆಲೆ ಏರಿಕೆಯಾಗುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>‘ಲಾಕ್ಡೌನ್ ಕಾರಣಕ್ಕೆ ಸರಕು ಸಾಗಣೆ ಸೇವೆಯಲ್ಲಿ ವ್ಯತ್ಯಯವಾಗಿರುವುದರಿಂದ ಮತ್ತು ಹೊರ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಟೊಮೆಟೊ ಬೆಲೆ ಇಳಿಕೆಯಾಗಿದೆ. ಸರಕು ಸಾಗಣೆ ಸೇವೆ ಸಹಜ ಸ್ಥಿತಿಗೆ ಮರಳಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ರೈತರು ಮಾರುಕಟ್ಟೆಗೆ ಗುಣಮಟ್ಟದ ಟೊಮೆಟೊ ತರಬೇಕು. ಈ ಬಗ್ಗೆ ದಲ್ಲಾಳಿಗಳು, ಮಂಡಿ ಮಾಲೀಕರು ರೈತರಿಗೆ ಅರಿವು ಮೂಡಿಸಬೇಕು. ಕಳಪೆ ಟೊಮೆಟೊ ಮಾರುಕಟ್ಟೆಗೆ ತಂದು ಮಾರಾಟವಾಗದೆ ಉಳಿದರೆ ಅದನ್ನು ಮಾರುಕಟ್ಟೆ ಆವರಣದಲ್ಲಿ ಸುರಿಯಬಾರದು. ಬದಲಿಗೆ ಎಪಿಎಂಸಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಗುತ್ತಿಗೆದಾರರಿಗೆ ತಿಳಿಸಿ ಹೊರಗೆ ಸಾಗಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಎಪಿಎಂಸಿ ಆವರಣದಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಮಾರಾಟವಾಗದ ಟೊಮೆಟೊ ಸರಕನ್ನು ಎಪಿಎಂಸಿ ಆವರಣದಲ್ಲಿ ಅಥವಾ ರಸ್ತೆಗಳ ಬದಿಯಲ್ಲಿ ಸುರಿದರೆ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ರಾಜ್ಯ ಮತ್ತು ದೇಶದಲ್ಲಿ ಲಾಕ್ಡೌನ್ ಇರುವುದರಿಂದ ಟೊಮೊಟೊ ಬೆಲೆಯಲ್ಲಿ ಏರುಪೇರಾಗಿದ್ದು, ಬೆಲೆ ಕುಸಿತ ತಾತ್ಕಾಲಿಕ’ ಎಂದು ಎಪಿಎಂಸಿ ಅಧ್ಯಕ್ಷ ಕೆ.ಮಂಜುನಾಥ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಎಪಿಎಂಸಿ ಆವರಣದಲ್ಲಿ ಶನಿವಾರ ಸೋಡಿಯಂ ಹೈಪೋಕ್ಲೋರೈಡ್ ದ್ರಾವಣ ಸಿಂಪಡಣೆಗೆ ಚಾಲನೆ ನೀಡಿ ಮಾತನಾಡಿ, ‘ಟೊಮೆಟೊ ಬೆಲೆ ಕುಸಿತಕ್ಕೆ ರೈತರು ಧೃತಿಗೆಡಬಾರದು. ಕೋವಿಡ್ ನಿಯಂತ್ರಣಕ್ಕೆ ಬಂದು ಲಾಕ್ಡೌನ್ ಅಂತ್ಯಗೊಂಡರೆ ಖಂಡಿತ ಬೆಲೆ ಏರಿಕೆಯಾಗುತ್ತದೆ’ ಎಂದು ಕಿವಿಮಾತು ಹೇಳಿದರು.</p>.<p>‘ಲಾಕ್ಡೌನ್ ಕಾರಣಕ್ಕೆ ಸರಕು ಸಾಗಣೆ ಸೇವೆಯಲ್ಲಿ ವ್ಯತ್ಯಯವಾಗಿರುವುದರಿಂದ ಮತ್ತು ಹೊರ ರಾಜ್ಯಗಳಲ್ಲಿ ಲಾಕ್ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಟೊಮೆಟೊ ಬೆಲೆ ಇಳಿಕೆಯಾಗಿದೆ. ಸರಕು ಸಾಗಣೆ ಸೇವೆ ಸಹಜ ಸ್ಥಿತಿಗೆ ಮರಳಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ರೈತರು ಮಾರುಕಟ್ಟೆಗೆ ಗುಣಮಟ್ಟದ ಟೊಮೆಟೊ ತರಬೇಕು. ಈ ಬಗ್ಗೆ ದಲ್ಲಾಳಿಗಳು, ಮಂಡಿ ಮಾಲೀಕರು ರೈತರಿಗೆ ಅರಿವು ಮೂಡಿಸಬೇಕು. ಕಳಪೆ ಟೊಮೆಟೊ ಮಾರುಕಟ್ಟೆಗೆ ತಂದು ಮಾರಾಟವಾಗದೆ ಉಳಿದರೆ ಅದನ್ನು ಮಾರುಕಟ್ಟೆ ಆವರಣದಲ್ಲಿ ಸುರಿಯಬಾರದು. ಬದಲಿಗೆ ಎಪಿಎಂಸಿ ಸ್ವಚ್ಛತಾ ಕಾರ್ಯ ನಿರ್ವಹಿಸುವ ಗುತ್ತಿಗೆದಾರರಿಗೆ ತಿಳಿಸಿ ಹೊರಗೆ ಸಾಗಿಸಬೇಕು’ ಎಂದು ಸಲಹೆ ನೀಡಿದರು.</p>.<p>‘ಎಪಿಎಂಸಿ ಆವರಣದಲ್ಲಿ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಮಾರಾಟವಾಗದ ಟೊಮೆಟೊ ಸರಕನ್ನು ಎಪಿಎಂಸಿ ಆವರಣದಲ್ಲಿ ಅಥವಾ ರಸ್ತೆಗಳ ಬದಿಯಲ್ಲಿ ಸುರಿದರೆ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>