<p><strong>ಕೋಲಾರ:</strong> ಹೊಸ ವರ್ಷದಲ್ಲಿ ಟೊಮೆಟೊ ಧಾರಣೆ ಏರುಗತಿಯಲ್ಲಿ ಸಾಗಿದೆ. ಕೋಲಾರ ಎಪಿಎಂಸಿ ಮಾರುಕಟ್ಟೆ ಹರಾಜಿನಲ್ಲಿ 15 ಕೆ.ಜಿ.ತೂಕದ ಬಾಕ್ಸ್ ಟೊಮೆಟೊ ₹850ರವರೆಗೆ ಮಾರಾಟವಾಗುತ್ತಿದೆ.<br>ಸ್ಥಳೀಯ ಚಿಲ್ಲರೆ ಮಾರುಕಟ್ಟೆಯಲ್ಲೂ ಕೆ.ಜಿಗೆ ₹60 ದರದಲ್ಲಿ ಮಾರಾಟ ಆಗುತ್ತಿದೆ.</p><p>ಇತ್ತೀಚಿನ ತಿಂಗಳಲ್ಲಿ ಒಂದು ಕ್ರೇಟ್ ₹850ಕ್ಕೆ ಮಾರಾಟವಾಗಿರುವುದು ಇದೇ ಮೊದಲು. ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ಆವಕ ಪ್ರಮಾಣ 8 ಸಾವಿರ ಕ್ವಿಂಟಲ್ (ಸುಮಾರು 54 ಸಾವಿರ ಬಾಕ್ಸ್) ಇತ್ತು.</p><p>ಪ್ರಮುಖವಾಗಿ ತಮಿಳುನಾಡಿನಿಂದ ಹೆಚ್ಚಿನ ಬೇಡಿಕೆ ಬರುತ್ತಿದೆ. ಅಲ್ಲಿಂದ ವರ್ತಕರು ಬಂದು ಲಾರಿಯಲ್ಲಿ ಟೊಮೆಟೊ ಒಯ್ಯುತ್ತಿದ್ದಾರೆ. ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ, ಬಿಹಾರದಿಂದಲೂ ಬೇಡಿಕೆ ಬರುತ್ತಿದೆ.</p>.<div><blockquote>ಟೊಮೆಟೊ ಧಾರಣೆ ಮತ್ತೆ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಟೊಮೆಟೊ ಫಸಲು ಕಡಿಮೆ ಇದ್ದರೂ ಹೊರ ಜಿಲ್ಲೆಗಳಿಂದ ಬರುತ್ತಿದ್ದು, ವಹಿವಾಟು ಚೆನ್ನಾಗಿ ನಡೆಯುತ್ತಿದೆ </blockquote><span class="attribution">ಕಿರಣ್, ಎಪಿಎಂಸಿ ಕಾರ್ಯದರ್ಶಿ, ಕೋಲಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಹೊಸ ವರ್ಷದಲ್ಲಿ ಟೊಮೆಟೊ ಧಾರಣೆ ಏರುಗತಿಯಲ್ಲಿ ಸಾಗಿದೆ. ಕೋಲಾರ ಎಪಿಎಂಸಿ ಮಾರುಕಟ್ಟೆ ಹರಾಜಿನಲ್ಲಿ 15 ಕೆ.ಜಿ.ತೂಕದ ಬಾಕ್ಸ್ ಟೊಮೆಟೊ ₹850ರವರೆಗೆ ಮಾರಾಟವಾಗುತ್ತಿದೆ.<br>ಸ್ಥಳೀಯ ಚಿಲ್ಲರೆ ಮಾರುಕಟ್ಟೆಯಲ್ಲೂ ಕೆ.ಜಿಗೆ ₹60 ದರದಲ್ಲಿ ಮಾರಾಟ ಆಗುತ್ತಿದೆ.</p><p>ಇತ್ತೀಚಿನ ತಿಂಗಳಲ್ಲಿ ಒಂದು ಕ್ರೇಟ್ ₹850ಕ್ಕೆ ಮಾರಾಟವಾಗಿರುವುದು ಇದೇ ಮೊದಲು. ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ಆವಕ ಪ್ರಮಾಣ 8 ಸಾವಿರ ಕ್ವಿಂಟಲ್ (ಸುಮಾರು 54 ಸಾವಿರ ಬಾಕ್ಸ್) ಇತ್ತು.</p><p>ಪ್ರಮುಖವಾಗಿ ತಮಿಳುನಾಡಿನಿಂದ ಹೆಚ್ಚಿನ ಬೇಡಿಕೆ ಬರುತ್ತಿದೆ. ಅಲ್ಲಿಂದ ವರ್ತಕರು ಬಂದು ಲಾರಿಯಲ್ಲಿ ಟೊಮೆಟೊ ಒಯ್ಯುತ್ತಿದ್ದಾರೆ. ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ, ಬಿಹಾರದಿಂದಲೂ ಬೇಡಿಕೆ ಬರುತ್ತಿದೆ.</p>.<div><blockquote>ಟೊಮೆಟೊ ಧಾರಣೆ ಮತ್ತೆ ಏರಿಕೆ ಕಾಣುತ್ತಿದೆ. ಜಿಲ್ಲೆಯಲ್ಲಿ ಟೊಮೆಟೊ ಫಸಲು ಕಡಿಮೆ ಇದ್ದರೂ ಹೊರ ಜಿಲ್ಲೆಗಳಿಂದ ಬರುತ್ತಿದ್ದು, ವಹಿವಾಟು ಚೆನ್ನಾಗಿ ನಡೆಯುತ್ತಿದೆ </blockquote><span class="attribution">ಕಿರಣ್, ಎಪಿಎಂಸಿ ಕಾರ್ಯದರ್ಶಿ, ಕೋಲಾರ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>