<p><strong>ಕೋಲಾರ:</strong> ತಾಲ್ಲೂಕಿನ ಮುದುವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಮಕ್ಕಳ ಸಂತೆಯಲ್ಲಿ ಮಕ್ಕಳು ತರಕಾರಿ, ಬಜ್ಜಿ, ಬೋಂಡಾ, ಪಾನಿಪುರಿ ಮತ್ತಿತರ ತಿನಿಸುಗಳನ್ನು ಮಾರಾಟ ಮಾಡುವ ಮೂಲಕ ಗಮನ ಸೆಳೆದರು.</p>.<p>ಮಕ್ಕಳ ಸಂತೆಯಲ್ಲಿ 50ಕ್ಕೂ ಹೆಚ್ಚು ಅಂಗಡಿಗಳು ಶಾಲೆಯ ಆವರಣದಲ್ಲಿ ತಲೆಯೆತ್ತುವ ಮೂಲಕ ಮಕ್ಕಳಲ್ಲೂ ವ್ಯಾಪಾರದ ಅನುಭವ ಮೂಡಿಸಲು ಕಾರಣವಾಯಿತು.</p>.<p>ಮಕ್ಕಳು ವಿವಿಧ ರೀತಿಯ ಸೊಪ್ಪು,ಬೀನ್ಸ್, ಹೀರೇಕಾಯಿ, ಮುಲಂಗಿ, ಕ್ಯಾರೇಟ್, ಕುಂಬಳಕಾಯಿ, ಸೋರೇಕಾಯಿ ಮತ್ತಿತರವುಗಳ ಜತೆಗೆ ಬೇಲ್ ಪುರಿ, ಬೋಂಡಾ, ಬಜ್ಜಿ ಮಾರಾಟ ಮಾಡಿದರು.</p>.<p>ಶಾಲೆಯ ಮೆಟ್ರಿಕ್ ಸಂತೆಗೆ ಚಾಲನೆ ನೀಡಿದ ಮುಖ್ಯ ಶಿಕ್ಷಕ ಶಂಕರೇಗೌಡ ಮಾತನಾಡಿ, ‘ವ್ಯಾಪಾರ ವಹಿವಾಟಿನಿಂದ ಮಕ್ಕಳಲ್ಲಿ ನಿತ್ಯ ಜೀವನದ ಅನುಭವವಾಗುತ್ತದೆ, ತಂದೆ, ತಾಯಿ ಅಂಗಡಿಗೆ ಹೋಗಿ ತರಕಾರಿ ತರಲು ತಿಳಿಸಿದರೆ ಯಾವ ರೀತಿ ವ್ಯಾಪಾರ ಮಾಡಬೇಕೆಂಬ ಅರಿವು ಸಿಕ್ಕಂತಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಗ್ರಾಮದ ಮುಖಂಡ ವಿ.ಮಂಜುನಾಥ್ ಮಾತನಾಡಿ, ‘ಕೇವಲ ಪಾಠ, ಕ್ರೀಡೆಗೆ ಸೀಮಿತವಾಗದೇ ಮಕ್ಕಳಲ್ಲಿ ಸಾಮಾಜಿಕ ಬದುಕಿನ ಪರಿಚಯ ಮಾಡಿಕೊಡುವ ಉದ್ದೇಶದಿಂದ ಮಕ್ಕಳ ಸಂತೆ ನೆರವಾಗಿದೆ’ ಎಂದರು.</p>.<p>ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಖಜಾಂಚಿ ಆಂಜನೇಯ, ಎಸ್ಡಿಎಂಸಿ ಅಧ್ಯಕ್ಷ ರಮೇಶ್, ಸದಸ್ಯರಾದ ಆನಂದ್, ರತ್ನಮ್ಮ, ಮುಖಂಡರಾದ ವಿ.ಮಂಜುನಾಥ್, ಶ್ರೀನಿವಾಸ್, ಬಾಬು, ಶಿಕ್ಷಕರಾದ ಕೆ.ವಿ.ಪ್ರತಿಭಾ, ಸಿ.ಟಿ.ಜಯಲಕ್ಷ್ಮಿ, ಚೌಡಮ್ಮ, ಆಂಜನೇಯ, ಗಿರಿಜಮ್ಮ, ವೇದಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ತಾಲ್ಲೂಕಿನ ಮುದುವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಮಕ್ಕಳ ಸಂತೆಯಲ್ಲಿ ಮಕ್ಕಳು ತರಕಾರಿ, ಬಜ್ಜಿ, ಬೋಂಡಾ, ಪಾನಿಪುರಿ ಮತ್ತಿತರ ತಿನಿಸುಗಳನ್ನು ಮಾರಾಟ ಮಾಡುವ ಮೂಲಕ ಗಮನ ಸೆಳೆದರು.</p>.<p>ಮಕ್ಕಳ ಸಂತೆಯಲ್ಲಿ 50ಕ್ಕೂ ಹೆಚ್ಚು ಅಂಗಡಿಗಳು ಶಾಲೆಯ ಆವರಣದಲ್ಲಿ ತಲೆಯೆತ್ತುವ ಮೂಲಕ ಮಕ್ಕಳಲ್ಲೂ ವ್ಯಾಪಾರದ ಅನುಭವ ಮೂಡಿಸಲು ಕಾರಣವಾಯಿತು.</p>.<p>ಮಕ್ಕಳು ವಿವಿಧ ರೀತಿಯ ಸೊಪ್ಪು,ಬೀನ್ಸ್, ಹೀರೇಕಾಯಿ, ಮುಲಂಗಿ, ಕ್ಯಾರೇಟ್, ಕುಂಬಳಕಾಯಿ, ಸೋರೇಕಾಯಿ ಮತ್ತಿತರವುಗಳ ಜತೆಗೆ ಬೇಲ್ ಪುರಿ, ಬೋಂಡಾ, ಬಜ್ಜಿ ಮಾರಾಟ ಮಾಡಿದರು.</p>.<p>ಶಾಲೆಯ ಮೆಟ್ರಿಕ್ ಸಂತೆಗೆ ಚಾಲನೆ ನೀಡಿದ ಮುಖ್ಯ ಶಿಕ್ಷಕ ಶಂಕರೇಗೌಡ ಮಾತನಾಡಿ, ‘ವ್ಯಾಪಾರ ವಹಿವಾಟಿನಿಂದ ಮಕ್ಕಳಲ್ಲಿ ನಿತ್ಯ ಜೀವನದ ಅನುಭವವಾಗುತ್ತದೆ, ತಂದೆ, ತಾಯಿ ಅಂಗಡಿಗೆ ಹೋಗಿ ತರಕಾರಿ ತರಲು ತಿಳಿಸಿದರೆ ಯಾವ ರೀತಿ ವ್ಯಾಪಾರ ಮಾಡಬೇಕೆಂಬ ಅರಿವು ಸಿಕ್ಕಂತಾಗಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಗ್ರಾಮದ ಮುಖಂಡ ವಿ.ಮಂಜುನಾಥ್ ಮಾತನಾಡಿ, ‘ಕೇವಲ ಪಾಠ, ಕ್ರೀಡೆಗೆ ಸೀಮಿತವಾಗದೇ ಮಕ್ಕಳಲ್ಲಿ ಸಾಮಾಜಿಕ ಬದುಕಿನ ಪರಿಚಯ ಮಾಡಿಕೊಡುವ ಉದ್ದೇಶದಿಂದ ಮಕ್ಕಳ ಸಂತೆ ನೆರವಾಗಿದೆ’ ಎಂದರು.</p>.<p>ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಖಜಾಂಚಿ ಆಂಜನೇಯ, ಎಸ್ಡಿಎಂಸಿ ಅಧ್ಯಕ್ಷ ರಮೇಶ್, ಸದಸ್ಯರಾದ ಆನಂದ್, ರತ್ನಮ್ಮ, ಮುಖಂಡರಾದ ವಿ.ಮಂಜುನಾಥ್, ಶ್ರೀನಿವಾಸ್, ಬಾಬು, ಶಿಕ್ಷಕರಾದ ಕೆ.ವಿ.ಪ್ರತಿಭಾ, ಸಿ.ಟಿ.ಜಯಲಕ್ಷ್ಮಿ, ಚೌಡಮ್ಮ, ಆಂಜನೇಯ, ಗಿರಿಜಮ್ಮ, ವೇದಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>