<p><strong>ಕೋಲಾರ: </strong>ನಗರದ ಎಂ.ರಸ್ತೆ ಸುತ್ತಮುತ್ತ ಗುರುವಾರ ಕಾರ್ಯಾಚರಣೆ ನಡೆಸಿದ ನಗರಸಭೆ ಅಧಿಕಾರಿಗಳು ಮುಖಗವಸು (ಮಾಸ್ಕ್) ಧರಿಸದೆ ಓಡಾಡುತ್ತಿದ್ದ ಜನರಿಗೆ ಹಾಗೂ ಅಕ್ರಮವಾಗಿ ಪ್ಲಾಸ್ಟಿಕ್ ಕವರ್ ದಾಸ್ತಾನು ಮಾಡಿದ್ದ ಗೋದಾಮು ಮಾಲೀಕರಿಗೆ ಕಾಯ್ದುಕೊಳ್ಳದ ಶಿಸ್ತುಕ್ರಮದ ಬಿಸಿ ಮುಟ್ಟಿಸಿದರು.</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಿಲ್ಲಾಡಳಿತ ಆದೇಶಿಸಿದೆ. ಆದರೆ, ಸಾಕಷ್ಟು ಮಂದಿ ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮಾಸ್ಕ್ ಧರಿಸಿದೆ ರಸ್ತೆಗಳಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದರು.</p>.<p>ಹೀಗಾಗಿ ನಗರಸಭೆ ಆಯುಕ್ತ ಆರ್.ಶ್ರೀಕಾಂತ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಚಂಪಕ್ ವೃತ್ತ, ಎಂ.ಜಿ.ರಸ್ತೆ, ಗೌರಿಪೇಟೆ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಜನರನ್ನು ತಡೆದು ಮಾಸ್ಕ್ ಧರಿಸದಿರುವ ಬಗ್ಗೆ ತಪಾಸಣೆ ಮಾಡಿದರು.</p>.<p>ಬೈಕ್ ಹಾಗೂ ಕಾರುಗಳಲ್ಲಿ ಹೋಗುತ್ತಿದ್ದ ಸಾಕಷ್ಟು ಮಂದಿ ಮಾಸ್ಕ್ ಧರಿಸಿರಲಿಲ್ಲ. ಅವರಿಗೆ ಅಧಿಕಾರಿಗಳು ಸ್ಥಳದಲ್ಲೇ ತಲಾ ₹ 100 ದಂಡ ವಿಧಿಸಿ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿ ಕಳುಹಿಸಿದರು.</p>.<p><strong>ಮಾರ್ಗಸೂಚಿ:</strong> ‘ಕೊರೊನಾ ಸೋಂಕು ತಡೆಗೆ ಸರ್ಕಾರ ಜಾರಿಗೊಳಿಸಿರುವ ಸುರಕ್ಷತಾ ಮಾರ್ಗಸೂಚಿಯನ್ನು ನಗರದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದೇವೆ. ಮಾಸ್ಕ್ ಧರಿಸಿದವರ ಮತ್ತು ಮಾರುಕಟ್ಟೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳದವರ ವಿರುದ್ಧದ ಕಾರ್ಯಾಚರಣೆ ಮುಂದುವರಿಸುತ್ತೇವೆ’ ಎಂದು ನಗರಸಭೆ ಆಯುಕ್ತ ಶ್ರೀಕಾಂತ್ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ₹ 500 ಮತ್ತು ಮಾರುಕಟ್ಟೆಗಳಲ್ಲಿ ಅಥವಾ ಅಂಗಡಿಗಳ ಬಳಿ ಅಂತರ ಕಾಯ್ದುಕೊಳ್ಳದಿದ್ದರೆ ₹ 500 ದಂಡ ವಿಧಿಸುತ್ತೇವೆ. ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಸುರಕ್ಷತಾ ಮಾರ್ಗಸೂಚಿ ರೂಪಿಸಿದ್ದು, ಇದನ್ನು ಪ್ರತಿಯೊಬ್ಬರು ಪಾಲಿಸಬೇಕು’ ಎಂದು ಹೇಳಿದರು.</p>.<p><strong>₹ 13 ಸಾವಿರ ದಂಡ:</strong> ಪ್ಲಾಸ್ಟಿಕ್ ತ್ಯಾಜ್ಯ (ನಿರ್ವಹಣೆ ಮತ್ತು ವ್ಯವಸ್ಥಾಪನೆ) ಕಾಯ್ದೆ 2011ರ ಪ್ರಕಾರ ರಾಜ್ಯ ಸರ್ಕಾರ 2016ರ ಮಾರ್ಚ್ 3ರಿಂದ ಅನ್ವಯವಾಗುವಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಕವರ್ಗಳ ಬಳಕೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಆದರೂ ನಿಯಮಬಾಹಿರವಾಗಿ ಪ್ಲಾಸ್ಟಿಕ್ ಕವರ್ ಮತ್ತು ಉತ್ಪನ್ನಗಳನ್ನು ದಾಸ್ತಾನು ಮಾಡಿದ್ದ ದೊಡ್ಡಪೇಟೆ, ಬ್ರಾಹ್ಮಣರ ಬೀದಿಯಲ್ಲಿನ ಮೂರ್ನಾಲ್ಕು ಗೋದಾಮುಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು.</p>.<p>ಪರಿಶೀಲನೆ ವೇಳೆ ಗೋದಾಮುಗಳಲ್ಲಿ ಪತ್ತೆಯಾದ ಪ್ಲಾಸ್ಟಿಕ್ ಉತ್ಪನ್ನಗಳನ್ನು ಜಪ್ತಿ ಮಾಡಿದ ಅಧಿಕಾರಿಗಳು ₹ 13 ಸಾವಿರ ದಂಡ ವಿಧಿಸಿದರು. ನಗರಸಭೆ ಕಂದಾಯ ಮತ್ತು ಆರೋಗ್ಯ ವಿಭಾಗದ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ನಗರದ ಎಂ.ರಸ್ತೆ ಸುತ್ತಮುತ್ತ ಗುರುವಾರ ಕಾರ್ಯಾಚರಣೆ ನಡೆಸಿದ ನಗರಸಭೆ ಅಧಿಕಾರಿಗಳು ಮುಖಗವಸು (ಮಾಸ್ಕ್) ಧರಿಸದೆ ಓಡಾಡುತ್ತಿದ್ದ ಜನರಿಗೆ ಹಾಗೂ ಅಕ್ರಮವಾಗಿ ಪ್ಲಾಸ್ಟಿಕ್ ಕವರ್ ದಾಸ್ತಾನು ಮಾಡಿದ್ದ ಗೋದಾಮು ಮಾಲೀಕರಿಗೆ ಕಾಯ್ದುಕೊಳ್ಳದ ಶಿಸ್ತುಕ್ರಮದ ಬಿಸಿ ಮುಟ್ಟಿಸಿದರು.</p>.<p>ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರಗೆ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಿಲ್ಲಾಡಳಿತ ಆದೇಶಿಸಿದೆ. ಆದರೆ, ಸಾಕಷ್ಟು ಮಂದಿ ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿ ಮಾಸ್ಕ್ ಧರಿಸಿದೆ ರಸ್ತೆಗಳಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿದ್ದರು.</p>.<p>ಹೀಗಾಗಿ ನಗರಸಭೆ ಆಯುಕ್ತ ಆರ್.ಶ್ರೀಕಾಂತ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆಗಿಳಿದ ಅಧಿಕಾರಿಗಳು ಚಂಪಕ್ ವೃತ್ತ, ಎಂ.ಜಿ.ರಸ್ತೆ, ಗೌರಿಪೇಟೆ ಸೇರಿದಂತೆ ನಗರದ ಪ್ರಮುಖ ಸ್ಥಳಗಳಲ್ಲಿ ಜನರನ್ನು ತಡೆದು ಮಾಸ್ಕ್ ಧರಿಸದಿರುವ ಬಗ್ಗೆ ತಪಾಸಣೆ ಮಾಡಿದರು.</p>.<p>ಬೈಕ್ ಹಾಗೂ ಕಾರುಗಳಲ್ಲಿ ಹೋಗುತ್ತಿದ್ದ ಸಾಕಷ್ಟು ಮಂದಿ ಮಾಸ್ಕ್ ಧರಿಸಿರಲಿಲ್ಲ. ಅವರಿಗೆ ಅಧಿಕಾರಿಗಳು ಸ್ಥಳದಲ್ಲೇ ತಲಾ ₹ 100 ದಂಡ ವಿಧಿಸಿ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿ ಕಳುಹಿಸಿದರು.</p>.<p><strong>ಮಾರ್ಗಸೂಚಿ:</strong> ‘ಕೊರೊನಾ ಸೋಂಕು ತಡೆಗೆ ಸರ್ಕಾರ ಜಾರಿಗೊಳಿಸಿರುವ ಸುರಕ್ಷತಾ ಮಾರ್ಗಸೂಚಿಯನ್ನು ನಗರದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದೇವೆ. ಮಾಸ್ಕ್ ಧರಿಸಿದವರ ಮತ್ತು ಮಾರುಕಟ್ಟೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳದವರ ವಿರುದ್ಧದ ಕಾರ್ಯಾಚರಣೆ ಮುಂದುವರಿಸುತ್ತೇವೆ’ ಎಂದು ನಗರಸಭೆ ಆಯುಕ್ತ ಶ್ರೀಕಾಂತ್ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ₹ 500 ಮತ್ತು ಮಾರುಕಟ್ಟೆಗಳಲ್ಲಿ ಅಥವಾ ಅಂಗಡಿಗಳ ಬಳಿ ಅಂತರ ಕಾಯ್ದುಕೊಳ್ಳದಿದ್ದರೆ ₹ 500 ದಂಡ ವಿಧಿಸುತ್ತೇವೆ. ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಸುರಕ್ಷತಾ ಮಾರ್ಗಸೂಚಿ ರೂಪಿಸಿದ್ದು, ಇದನ್ನು ಪ್ರತಿಯೊಬ್ಬರು ಪಾಲಿಸಬೇಕು’ ಎಂದು ಹೇಳಿದರು.</p>.<p><strong>₹ 13 ಸಾವಿರ ದಂಡ:</strong> ಪ್ಲಾಸ್ಟಿಕ್ ತ್ಯಾಜ್ಯ (ನಿರ್ವಹಣೆ ಮತ್ತು ವ್ಯವಸ್ಥಾಪನೆ) ಕಾಯ್ದೆ 2011ರ ಪ್ರಕಾರ ರಾಜ್ಯ ಸರ್ಕಾರ 2016ರ ಮಾರ್ಚ್ 3ರಿಂದ ಅನ್ವಯವಾಗುವಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಕವರ್ಗಳ ಬಳಕೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಆದರೂ ನಿಯಮಬಾಹಿರವಾಗಿ ಪ್ಲಾಸ್ಟಿಕ್ ಕವರ್ ಮತ್ತು ಉತ್ಪನ್ನಗಳನ್ನು ದಾಸ್ತಾನು ಮಾಡಿದ್ದ ದೊಡ್ಡಪೇಟೆ, ಬ್ರಾಹ್ಮಣರ ಬೀದಿಯಲ್ಲಿನ ಮೂರ್ನಾಲ್ಕು ಗೋದಾಮುಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು.</p>.<p>ಪರಿಶೀಲನೆ ವೇಳೆ ಗೋದಾಮುಗಳಲ್ಲಿ ಪತ್ತೆಯಾದ ಪ್ಲಾಸ್ಟಿಕ್ ಉತ್ಪನ್ನಗಳನ್ನು ಜಪ್ತಿ ಮಾಡಿದ ಅಧಿಕಾರಿಗಳು ₹ 13 ಸಾವಿರ ದಂಡ ವಿಧಿಸಿದರು. ನಗರಸಭೆ ಕಂದಾಯ ಮತ್ತು ಆರೋಗ್ಯ ವಿಭಾಗದ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>