<p><strong>ಬಂಗಾರಪೇಟೆ:</strong> ಅರಣ್ಯ ಇಲಾಖೆ ಅನುಮತಿ ಪಡೆಯದೆ ನಗರದ ಎಪಿಎಂಸಿ ಆವರಣದಲ್ಲಿ ಬೆಳೆದಿರುವ ಬೃಹತ್ ಮರಗಳ ಕೊಂಬೆಗಳನ್ನು ಕಡಿದು ಮಾರಾಟ ಮಾಡಿರುವ ಘಟನೆ ಮಂಗಳವಾರ ನಡೆದಿದೆ.</p><p>ಎಪಿಎಂಸಿ ಕಾರ್ಯದರ್ಶಿ ಶ್ರೀನಿವಾಸ್ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರದ ಕೊಂಬೆಗಳನ್ನು ಕಟಾವು ಮಾಡಿಸಿದ್ದಾರೆ.</p><p>ಈ ಬಗ್ಗೆ ಕೆಲವು ಸಂಘಟನೆಯವರು ಕಾರ್ಯದರ್ಶಿಯನ್ನು ಪ್ರಶ್ನಿಸಿದ್ದಕ್ಕೆ ಎಪಿಎಂಸಿ ಅಧಿಕಾರಿಗಳನ್ನು ಕೇಳಿದಾಗ ಬುಡ ಸಮೇತ ಕಡಿದರೆ ಮಾತ್ರ ಅರಣ್ಯ ಇಲಾಖೆ ಅನುಮತಿ ಪಡೆಯಬೇಕು. ಕೊಂಬೆಗಳನ್ನು ಕಡಿಯಲು ಅನುಮತಿ ಅಗತ್ಯವಿಲ್ಲ ಎಂದು ಹಾರಿಕೆ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.</p><p>‘ಲಕ್ಷಾಂತರ ವೆಚ್ಚದಲ್ಲಿ ಕಟ್ಟಡ ಕಟ್ಟಲಾಗಿದೆ. ಅದಕ್ಕೆ ಹಾನಿಯಾದರೆ ನಾನೇ ಜವಾಬ್ದಾರಿ. ಮರಗಳ ಕೊಂಬೆಗಳಿಂದ ಕಟ್ಟಡಗಳಿಗೆ ಹಾನಿ ಉಂಟಾಗುತ್ತಿದೆ. ಹಾಗಾಗಿ ನಾನೇ ಕೊಂಬೆ ಕಡಿಯಲು ಸೂಚಿಸಿದ್ದೇನೆ’ ಎಂದು ಶ್ರೀನಿವಾಸ್ ತಿಳಿಸಿದ್ದಾರೆ.</p><p>ಸಾರ್ವಜನಿಕರು ಈ ಬಗ್ಗೆ ಅರಣ್ಯ ಇಲಾಖೆ ದೂರು ನೀಡಿದ್ದು, ಉಪ ವಲಯ ಅರಣ್ಯಾಧಿಕಾರಿ ಪ್ರಕಾಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಾರಾಟ ಮಾಡಿದ್ದ ಮರದ ಕೊಂಬೆಗಳ ತುಂಡುಗಳನ್ನು ವಶಕ್ಕೆ ಪಡೆಯಲು ಯತ್ನಿಸಿದರೂ ಸಾಧ್ಯವಾಗಿಲ್ಲ.</p><h2>ಪ್ರಕರಣ ದಾಖಲಿಸುವ ಭರವಸೆ</h2><h2></h2><p>ಸರ್ಕಾರಿ ಸ್ಥಳದಲ್ಲಿರುವ ಯಾವುದೇ ಮರ ಅಥವಾ ಅದರ ಕೊಂಬೆ ಕಡಿಯಲು ಅರಣ್ಯ ಇಲಾಖೆ ಅನುಮತಿ ಕಡ್ಡಾಯ. ಆದರೆ, ಎಪಿಎಂಸಿ ಆವರಣದಲ್ಲಿ ಅನುಮತಿ ಇಲ್ಲದೆ ಮರದ ಕೊಂಬೆ ಕಡಿಯಲಾಗಿದೆ. ಈ ಬಗ್ಗೆ ಎಪಿಎಂಸಿ ಕಾರ್ಯದರ್ಶಿ ಹಾಗೂ ಮರ ಕಡಿದವರ ವಿರುದ್ಧ ಮೇಲಾಧಿಕಾರಿಗಳ ಗಮನಕ್ಕೆ ತಂದು ಪ್ರಕರಣ ದಾಖಲಿಸಲಾಗುವುದು.</p><p><strong>ಶ್ರೀಲಕ್ಷ್ಮಿ, ವಲಯ ಅರಣ್ಯಾಧಿಕಾರಿ, ಬಂಗಾರಪೇಟೆ</strong></p>.<blockquote>ಹಾನಿಯಾಗದಂತೆ ಕೊಂಬೆ ತೆರವು </blockquote>.<div><blockquote>ಮಾರುಕಟ್ಟೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಗೋದಾಮಿಗೆ ಬೆಳಕು ಮತ್ತು ಕಡಟ್ಟಕ್ಕೆ ಹಾನಿಯಾಗಿತ್ತು. ವಾಣಿಜ್ಯ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ವರ್ತಕರ ಸಂಘದಿಂದ ದೂರು ಬಂದಿತ್ತು. ಹಾಗಾಗಿ ಮರಕ್ಕೆ ಹಾನಿಯಾಗದಂತೆ ಕೊಂಬೆಗಳನ್ನು ತೆರವುಗೊಳಿಸಲಾಗಿದೆ. </blockquote><span class="attribution">ಶ್ರೀನಿವಾಸ್, ಎಂಪಿಎಂಸಿ ಕಾರ್ಯದರ್ಶಿ, ಬಂಗಾರಪೇಟೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಅರಣ್ಯ ಇಲಾಖೆ ಅನುಮತಿ ಪಡೆಯದೆ ನಗರದ ಎಪಿಎಂಸಿ ಆವರಣದಲ್ಲಿ ಬೆಳೆದಿರುವ ಬೃಹತ್ ಮರಗಳ ಕೊಂಬೆಗಳನ್ನು ಕಡಿದು ಮಾರಾಟ ಮಾಡಿರುವ ಘಟನೆ ಮಂಗಳವಾರ ನಡೆದಿದೆ.</p><p>ಎಪಿಎಂಸಿ ಕಾರ್ಯದರ್ಶಿ ಶ್ರೀನಿವಾಸ್ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರದ ಕೊಂಬೆಗಳನ್ನು ಕಟಾವು ಮಾಡಿಸಿದ್ದಾರೆ.</p><p>ಈ ಬಗ್ಗೆ ಕೆಲವು ಸಂಘಟನೆಯವರು ಕಾರ್ಯದರ್ಶಿಯನ್ನು ಪ್ರಶ್ನಿಸಿದ್ದಕ್ಕೆ ಎಪಿಎಂಸಿ ಅಧಿಕಾರಿಗಳನ್ನು ಕೇಳಿದಾಗ ಬುಡ ಸಮೇತ ಕಡಿದರೆ ಮಾತ್ರ ಅರಣ್ಯ ಇಲಾಖೆ ಅನುಮತಿ ಪಡೆಯಬೇಕು. ಕೊಂಬೆಗಳನ್ನು ಕಡಿಯಲು ಅನುಮತಿ ಅಗತ್ಯವಿಲ್ಲ ಎಂದು ಹಾರಿಕೆ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.</p><p>‘ಲಕ್ಷಾಂತರ ವೆಚ್ಚದಲ್ಲಿ ಕಟ್ಟಡ ಕಟ್ಟಲಾಗಿದೆ. ಅದಕ್ಕೆ ಹಾನಿಯಾದರೆ ನಾನೇ ಜವಾಬ್ದಾರಿ. ಮರಗಳ ಕೊಂಬೆಗಳಿಂದ ಕಟ್ಟಡಗಳಿಗೆ ಹಾನಿ ಉಂಟಾಗುತ್ತಿದೆ. ಹಾಗಾಗಿ ನಾನೇ ಕೊಂಬೆ ಕಡಿಯಲು ಸೂಚಿಸಿದ್ದೇನೆ’ ಎಂದು ಶ್ರೀನಿವಾಸ್ ತಿಳಿಸಿದ್ದಾರೆ.</p><p>ಸಾರ್ವಜನಿಕರು ಈ ಬಗ್ಗೆ ಅರಣ್ಯ ಇಲಾಖೆ ದೂರು ನೀಡಿದ್ದು, ಉಪ ವಲಯ ಅರಣ್ಯಾಧಿಕಾರಿ ಪ್ರಕಾಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಾರಾಟ ಮಾಡಿದ್ದ ಮರದ ಕೊಂಬೆಗಳ ತುಂಡುಗಳನ್ನು ವಶಕ್ಕೆ ಪಡೆಯಲು ಯತ್ನಿಸಿದರೂ ಸಾಧ್ಯವಾಗಿಲ್ಲ.</p><h2>ಪ್ರಕರಣ ದಾಖಲಿಸುವ ಭರವಸೆ</h2><h2></h2><p>ಸರ್ಕಾರಿ ಸ್ಥಳದಲ್ಲಿರುವ ಯಾವುದೇ ಮರ ಅಥವಾ ಅದರ ಕೊಂಬೆ ಕಡಿಯಲು ಅರಣ್ಯ ಇಲಾಖೆ ಅನುಮತಿ ಕಡ್ಡಾಯ. ಆದರೆ, ಎಪಿಎಂಸಿ ಆವರಣದಲ್ಲಿ ಅನುಮತಿ ಇಲ್ಲದೆ ಮರದ ಕೊಂಬೆ ಕಡಿಯಲಾಗಿದೆ. ಈ ಬಗ್ಗೆ ಎಪಿಎಂಸಿ ಕಾರ್ಯದರ್ಶಿ ಹಾಗೂ ಮರ ಕಡಿದವರ ವಿರುದ್ಧ ಮೇಲಾಧಿಕಾರಿಗಳ ಗಮನಕ್ಕೆ ತಂದು ಪ್ರಕರಣ ದಾಖಲಿಸಲಾಗುವುದು.</p><p><strong>ಶ್ರೀಲಕ್ಷ್ಮಿ, ವಲಯ ಅರಣ್ಯಾಧಿಕಾರಿ, ಬಂಗಾರಪೇಟೆ</strong></p>.<blockquote>ಹಾನಿಯಾಗದಂತೆ ಕೊಂಬೆ ತೆರವು </blockquote>.<div><blockquote>ಮಾರುಕಟ್ಟೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಗೋದಾಮಿಗೆ ಬೆಳಕು ಮತ್ತು ಕಡಟ್ಟಕ್ಕೆ ಹಾನಿಯಾಗಿತ್ತು. ವಾಣಿಜ್ಯ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ವರ್ತಕರ ಸಂಘದಿಂದ ದೂರು ಬಂದಿತ್ತು. ಹಾಗಾಗಿ ಮರಕ್ಕೆ ಹಾನಿಯಾಗದಂತೆ ಕೊಂಬೆಗಳನ್ನು ತೆರವುಗೊಳಿಸಲಾಗಿದೆ. </blockquote><span class="attribution">ಶ್ರೀನಿವಾಸ್, ಎಂಪಿಎಂಸಿ ಕಾರ್ಯದರ್ಶಿ, ಬಂಗಾರಪೇಟೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>