<p><strong>ಬಂಗಾರಪೇಟೆ:</strong> ಅರಣ್ಯ ಇಲಾಖೆ ಅನುಮತಿ ಪಡೆಯದೆ ನಗರದ ಎಪಿಎಂಸಿ ಆವರಣದಲ್ಲಿ ಬೆಳೆದಿರುವ ಬೃಹತ್ ಮರಗಳ ಕೊಂಬೆಗಳನ್ನು ಕಡಿದು ಮಾರಾಟ ಮಾಡಿರುವ ಘಟನೆ ಮಂಗಳವಾರ ನಡೆದಿದೆ.</p><p>ಎಪಿಎಂಸಿ ಕಾರ್ಯದರ್ಶಿ ಶ್ರೀನಿವಾಸ್ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರದ ಕೊಂಬೆಗಳನ್ನು ಕಟಾವು ಮಾಡಿಸಿದ್ದಾರೆ.</p><p>ಈ ಬಗ್ಗೆ ಕೆಲವು ಸಂಘಟನೆಯವರು ಕಾರ್ಯದರ್ಶಿಯನ್ನು ಪ್ರಶ್ನಿಸಿದ್ದಕ್ಕೆ ಎಪಿಎಂಸಿ ಅಧಿಕಾರಿಗಳನ್ನು ಕೇಳಿದಾಗ ಬುಡ ಸಮೇತ ಕಡಿದರೆ ಮಾತ್ರ ಅರಣ್ಯ ಇಲಾಖೆ ಅನುಮತಿ ಪಡೆಯಬೇಕು. ಕೊಂಬೆಗಳನ್ನು ಕಡಿಯಲು ಅನುಮತಿ ಅಗತ್ಯವಿಲ್ಲ ಎಂದು ಹಾರಿಕೆ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.</p><p>‘ಲಕ್ಷಾಂತರ ವೆಚ್ಚದಲ್ಲಿ ಕಟ್ಟಡ ಕಟ್ಟಲಾಗಿದೆ. ಅದಕ್ಕೆ ಹಾನಿಯಾದರೆ ನಾನೇ ಜವಾಬ್ದಾರಿ. ಮರಗಳ ಕೊಂಬೆಗಳಿಂದ ಕಟ್ಟಡಗಳಿಗೆ ಹಾನಿ ಉಂಟಾಗುತ್ತಿದೆ. ಹಾಗಾಗಿ ನಾನೇ ಕೊಂಬೆ ಕಡಿಯಲು ಸೂಚಿಸಿದ್ದೇನೆ’ ಎಂದು ಶ್ರೀನಿವಾಸ್ ತಿಳಿಸಿದ್ದಾರೆ.</p><p>ಸಾರ್ವಜನಿಕರು ಈ ಬಗ್ಗೆ ಅರಣ್ಯ ಇಲಾಖೆ ದೂರು ನೀಡಿದ್ದು, ಉಪ ವಲಯ ಅರಣ್ಯಾಧಿಕಾರಿ ಪ್ರಕಾಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಾರಾಟ ಮಾಡಿದ್ದ ಮರದ ಕೊಂಬೆಗಳ ತುಂಡುಗಳನ್ನು ವಶಕ್ಕೆ ಪಡೆಯಲು ಯತ್ನಿಸಿದರೂ ಸಾಧ್ಯವಾಗಿಲ್ಲ.</p><h2>ಪ್ರಕರಣ ದಾಖಲಿಸುವ ಭರವಸೆ</h2><h2></h2><p>ಸರ್ಕಾರಿ ಸ್ಥಳದಲ್ಲಿರುವ ಯಾವುದೇ ಮರ ಅಥವಾ ಅದರ ಕೊಂಬೆ ಕಡಿಯಲು ಅರಣ್ಯ ಇಲಾಖೆ ಅನುಮತಿ ಕಡ್ಡಾಯ. ಆದರೆ, ಎಪಿಎಂಸಿ ಆವರಣದಲ್ಲಿ ಅನುಮತಿ ಇಲ್ಲದೆ ಮರದ ಕೊಂಬೆ ಕಡಿಯಲಾಗಿದೆ. ಈ ಬಗ್ಗೆ ಎಪಿಎಂಸಿ ಕಾರ್ಯದರ್ಶಿ ಹಾಗೂ ಮರ ಕಡಿದವರ ವಿರುದ್ಧ ಮೇಲಾಧಿಕಾರಿಗಳ ಗಮನಕ್ಕೆ ತಂದು ಪ್ರಕರಣ ದಾಖಲಿಸಲಾಗುವುದು.</p><p><strong>ಶ್ರೀಲಕ್ಷ್ಮಿ, ವಲಯ ಅರಣ್ಯಾಧಿಕಾರಿ, ಬಂಗಾರಪೇಟೆ</strong></p>.<blockquote>ಹಾನಿಯಾಗದಂತೆ ಕೊಂಬೆ ತೆರವು </blockquote>.<div><blockquote>ಮಾರುಕಟ್ಟೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಗೋದಾಮಿಗೆ ಬೆಳಕು ಮತ್ತು ಕಡಟ್ಟಕ್ಕೆ ಹಾನಿಯಾಗಿತ್ತು. ವಾಣಿಜ್ಯ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ವರ್ತಕರ ಸಂಘದಿಂದ ದೂರು ಬಂದಿತ್ತು. ಹಾಗಾಗಿ ಮರಕ್ಕೆ ಹಾನಿಯಾಗದಂತೆ ಕೊಂಬೆಗಳನ್ನು ತೆರವುಗೊಳಿಸಲಾಗಿದೆ. </blockquote><span class="attribution">ಶ್ರೀನಿವಾಸ್, ಎಂಪಿಎಂಸಿ ಕಾರ್ಯದರ್ಶಿ, ಬಂಗಾರಪೇಟೆ</span></div>
<p><strong>ಬಂಗಾರಪೇಟೆ:</strong> ಅರಣ್ಯ ಇಲಾಖೆ ಅನುಮತಿ ಪಡೆಯದೆ ನಗರದ ಎಪಿಎಂಸಿ ಆವರಣದಲ್ಲಿ ಬೆಳೆದಿರುವ ಬೃಹತ್ ಮರಗಳ ಕೊಂಬೆಗಳನ್ನು ಕಡಿದು ಮಾರಾಟ ಮಾಡಿರುವ ಘಟನೆ ಮಂಗಳವಾರ ನಡೆದಿದೆ.</p><p>ಎಪಿಎಂಸಿ ಕಾರ್ಯದರ್ಶಿ ಶ್ರೀನಿವಾಸ್ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರದ ಕೊಂಬೆಗಳನ್ನು ಕಟಾವು ಮಾಡಿಸಿದ್ದಾರೆ.</p><p>ಈ ಬಗ್ಗೆ ಕೆಲವು ಸಂಘಟನೆಯವರು ಕಾರ್ಯದರ್ಶಿಯನ್ನು ಪ್ರಶ್ನಿಸಿದ್ದಕ್ಕೆ ಎಪಿಎಂಸಿ ಅಧಿಕಾರಿಗಳನ್ನು ಕೇಳಿದಾಗ ಬುಡ ಸಮೇತ ಕಡಿದರೆ ಮಾತ್ರ ಅರಣ್ಯ ಇಲಾಖೆ ಅನುಮತಿ ಪಡೆಯಬೇಕು. ಕೊಂಬೆಗಳನ್ನು ಕಡಿಯಲು ಅನುಮತಿ ಅಗತ್ಯವಿಲ್ಲ ಎಂದು ಹಾರಿಕೆ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.</p><p>‘ಲಕ್ಷಾಂತರ ವೆಚ್ಚದಲ್ಲಿ ಕಟ್ಟಡ ಕಟ್ಟಲಾಗಿದೆ. ಅದಕ್ಕೆ ಹಾನಿಯಾದರೆ ನಾನೇ ಜವಾಬ್ದಾರಿ. ಮರಗಳ ಕೊಂಬೆಗಳಿಂದ ಕಟ್ಟಡಗಳಿಗೆ ಹಾನಿ ಉಂಟಾಗುತ್ತಿದೆ. ಹಾಗಾಗಿ ನಾನೇ ಕೊಂಬೆ ಕಡಿಯಲು ಸೂಚಿಸಿದ್ದೇನೆ’ ಎಂದು ಶ್ರೀನಿವಾಸ್ ತಿಳಿಸಿದ್ದಾರೆ.</p><p>ಸಾರ್ವಜನಿಕರು ಈ ಬಗ್ಗೆ ಅರಣ್ಯ ಇಲಾಖೆ ದೂರು ನೀಡಿದ್ದು, ಉಪ ವಲಯ ಅರಣ್ಯಾಧಿಕಾರಿ ಪ್ರಕಾಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮಾರಾಟ ಮಾಡಿದ್ದ ಮರದ ಕೊಂಬೆಗಳ ತುಂಡುಗಳನ್ನು ವಶಕ್ಕೆ ಪಡೆಯಲು ಯತ್ನಿಸಿದರೂ ಸಾಧ್ಯವಾಗಿಲ್ಲ.</p><h2>ಪ್ರಕರಣ ದಾಖಲಿಸುವ ಭರವಸೆ</h2><h2></h2><p>ಸರ್ಕಾರಿ ಸ್ಥಳದಲ್ಲಿರುವ ಯಾವುದೇ ಮರ ಅಥವಾ ಅದರ ಕೊಂಬೆ ಕಡಿಯಲು ಅರಣ್ಯ ಇಲಾಖೆ ಅನುಮತಿ ಕಡ್ಡಾಯ. ಆದರೆ, ಎಪಿಎಂಸಿ ಆವರಣದಲ್ಲಿ ಅನುಮತಿ ಇಲ್ಲದೆ ಮರದ ಕೊಂಬೆ ಕಡಿಯಲಾಗಿದೆ. ಈ ಬಗ್ಗೆ ಎಪಿಎಂಸಿ ಕಾರ್ಯದರ್ಶಿ ಹಾಗೂ ಮರ ಕಡಿದವರ ವಿರುದ್ಧ ಮೇಲಾಧಿಕಾರಿಗಳ ಗಮನಕ್ಕೆ ತಂದು ಪ್ರಕರಣ ದಾಖಲಿಸಲಾಗುವುದು.</p><p><strong>ಶ್ರೀಲಕ್ಷ್ಮಿ, ವಲಯ ಅರಣ್ಯಾಧಿಕಾರಿ, ಬಂಗಾರಪೇಟೆ</strong></p>.<blockquote>ಹಾನಿಯಾಗದಂತೆ ಕೊಂಬೆ ತೆರವು </blockquote>.<div><blockquote>ಮಾರುಕಟ್ಟೆ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಗೋದಾಮಿಗೆ ಬೆಳಕು ಮತ್ತು ಕಡಟ್ಟಕ್ಕೆ ಹಾನಿಯಾಗಿತ್ತು. ವಾಣಿಜ್ಯ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ವರ್ತಕರ ಸಂಘದಿಂದ ದೂರು ಬಂದಿತ್ತು. ಹಾಗಾಗಿ ಮರಕ್ಕೆ ಹಾನಿಯಾಗದಂತೆ ಕೊಂಬೆಗಳನ್ನು ತೆರವುಗೊಳಿಸಲಾಗಿದೆ. </blockquote><span class="attribution">ಶ್ರೀನಿವಾಸ್, ಎಂಪಿಎಂಸಿ ಕಾರ್ಯದರ್ಶಿ, ಬಂಗಾರಪೇಟೆ</span></div>