‘ಜ.25ಕ್ಕೆ ನವದೆಹಲಿಗೆ ತೆರಳಲಿದ್ದೇವೆ. ಗೃಹಿಣಿಯಾಗಿ ಕುಟುಂಬಕ್ಕೆ ಸೀಮಿತವಾಗಿದ್ದ ನನ್ನನ್ನು ಪಂಚಾಯಿತಿ ಅಧಿಕಾರಿಗಳು, ಸದಸ್ಯರು ಸಮಾಜದ ಮುಖ್ಯವಾಹಿನಿಗೆ ತಂದು ಚಾಲಕಿಯಾಗಿ ಮಾಡಿದ್ದಾರೆ. ಸಾಮಾನ್ಯ ಮಹಿಳೆಯಾಗಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿರುವುದು ಖುಷಿ ತಂದಿದೆ. ಅಧ್ಯಕ್ಷೆ ದೀಪಿಕಾ ಲೋಕೇಶ್, ಪಿಡಿಓ ಮಧುಮತಿ ಹಾಗೂ ಎಲ್ಲಾ ಸದಸ್ಯರ ಮಾರ್ಗದರ್ಶನದಲ್ಲಿ ಸ್ವಚ್ಛತೆ ಕಾರ್ಯ ಇಡೀ ಜಿಲ್ಲೆಗೆ ಮಾದರಿಯಾಗಿ ನಡೆಯುತ್ತಿದೆ’ ಎಂದು ಚಾಲಕಿ ಮಂಜುಳಾ ಸಂತಸ ವ್ಯಕ್ತಪಡಿಸಿದ್ದಾರೆ.