<p><strong>ಬೇತಮಂಗಲ</strong>: ಧಾರ್ಮಿಕ ದತ್ತಿ ಇಲಾಖೆ ಹಾಗೂ ಮುಜರಾಯಿ ಇಲಾಖೆಯಸಪ್ತಪದಿ ಯೋಜನೆಯಡಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ಎರಡು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.</p>.<p>ಪ್ರಸಿದ್ಧ ಬಂಗಾರು ತಿರುಪತಿ ದೇವಾಲಯದ ಅವರಣದಲ್ಲಿ ಬುಧವಾರ ಹಿಂದೂ ಸಂಪ್ರದಾಯದಂತೆ ಕೋಲಾರ ತಾಲ್ಲೂಕಿನ ಶ್ರೀಕಾಂತ್ ಹಾಗೂ ಚೈತ್ರಾ, ಬಂಗಾರಪೇಟೆ ತಾಲ್ಲೂಕಿನ ಹರೀಶ್ ಕುಮಾರ್ ಹಾಗೂ ನಂದಿನಿ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮುಜರಾಯಿ ಇಲಾಖೆಯ ಮಾರ್ಗಸೂಚಿಯಂತೆ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ವಿವಾಹ ನಡೆಸಿಕೊಟ್ಟರು.</p>.<p>ಕೆಜಿಎಫ್ ತಹಶೀಲ್ದಾರ್ ಸುಜಾತಾ ಸ್ಥಳಕ್ಕೆ ಭೇಟಿ ನೀಡಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಜೋಡಿಗಳಿಗೆ ಶುಭ ಹಾರೈಸಿ, ದೇವಾಲಯದಿಂದ ವಧು ಹಾಗೂ ವರರಿಗೆ ನೀಡುವ ನೆರವಿನ ಚೆಕ್ ವಿತರಿಸಿದರು.</p>.<p>ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಸುಬ್ರಮಣಿ, ಪೇಷ್ಕರ್ ಸುರೇಶ್, ವಿಶ್ವ ಹಿಂದೂ ಪರಿಷತ್ನ ಸಿಂಧ್ಯಾ ಜೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ಧಾರ್ಮಿಕ ದತ್ತಿ ಇಲಾಖೆ ಹಾಗೂ ಮುಜರಾಯಿ ಇಲಾಖೆಯಸಪ್ತಪದಿ ಯೋಜನೆಯಡಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ಎರಡು ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.</p>.<p>ಪ್ರಸಿದ್ಧ ಬಂಗಾರು ತಿರುಪತಿ ದೇವಾಲಯದ ಅವರಣದಲ್ಲಿ ಬುಧವಾರ ಹಿಂದೂ ಸಂಪ್ರದಾಯದಂತೆ ಕೋಲಾರ ತಾಲ್ಲೂಕಿನ ಶ್ರೀಕಾಂತ್ ಹಾಗೂ ಚೈತ್ರಾ, ಬಂಗಾರಪೇಟೆ ತಾಲ್ಲೂಕಿನ ಹರೀಶ್ ಕುಮಾರ್ ಹಾಗೂ ನಂದಿನಿ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮುಜರಾಯಿ ಇಲಾಖೆಯ ಮಾರ್ಗಸೂಚಿಯಂತೆ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ವಿವಾಹ ನಡೆಸಿಕೊಟ್ಟರು.</p>.<p>ಕೆಜಿಎಫ್ ತಹಶೀಲ್ದಾರ್ ಸುಜಾತಾ ಸ್ಥಳಕ್ಕೆ ಭೇಟಿ ನೀಡಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಜೋಡಿಗಳಿಗೆ ಶುಭ ಹಾರೈಸಿ, ದೇವಾಲಯದಿಂದ ವಧು ಹಾಗೂ ವರರಿಗೆ ನೀಡುವ ನೆರವಿನ ಚೆಕ್ ವಿತರಿಸಿದರು.</p>.<p>ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಸುಬ್ರಮಣಿ, ಪೇಷ್ಕರ್ ಸುರೇಶ್, ವಿಶ್ವ ಹಿಂದೂ ಪರಿಷತ್ನ ಸಿಂಧ್ಯಾ ಜೀ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>