ನಗರದ ಗಾಂಧಿನಗರ, ಕೊಂಡರಾಜನಹಳ್ಳಿಯಲ್ಲಿ ಕೊಳವೆ ಬಾವಿಗಳಿಗೆ, ಸಂಪ್ಗಳ ಪಂಪ್ ಮತ್ತು ಮೋಟರ್ಗಳಿಗೆ ನಿಯಮಬಾಹಿರವಾಗಿ ವಿದ್ಯುತ್ ಸಂಪರ್ಕ ಪಡೆದಿರುವುದು ಅಧಿಕಾರಿಗಳ ಪರಿಶೀಲನೆ ವೇಳೆ ಪತ್ತೆಯಾಗಿದೆ. ಕೃಷಿ ಉದ್ದೇಶಕ್ಕಾಗಿ ವಿದ್ಯುತ್ ಸಂಪರ್ಕ ಪಡೆದಿದ್ದ ಹಲವರು ವಾಣಿಜ್ಯ ಉದ್ದೇಶದ ಕೊಳವೆ ಬಾವಿಗಳಿಗೆ ವಿದ್ಯುತ್ ಬಳಸಿಕೊಂಡು ನೀರು ಮಾರಾಟ ಮಾಡುತ್ತಿದ್ದುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.