<p><strong>ಕೋಲಾರ: </strong>‘ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಕಳಂಕವಾಗಿದ್ದು, ಇದನ್ನು ಬೇರು ಸಮೇತ ಕಿತ್ತೊಗೆಯುವ ಕೆಲಸ ಗ್ರಾಮಮಟ್ಟದಿಂದ ಅಗಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.</p>.<p>ತಾಲ್ಲೂಕಿನ ಮತ್ತಿಕುಂಟೆಯಲ್ಲಿ ದಲಿತ ಮುನಿವೆಂಕಟಪ್ಪ ಮತ್ತು ಹನುಮಂತಪ್ಪ ಅವರ ನಿವಾಸದಲ್ಲಿ ಇತ್ತೀಚಿಗೆ ಊಟ ಮಾಡಿ ಮಾತನಾಡಿ, ‘ಪ್ರತಿ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡಾಗ ಮಾತ್ರ ಸಾರ್ವಜನಿಕ ಜೀವನದಲ್ಲಿ ಗೌರವ ಸಂಪಾದಿಸಲು ಸಾಧ್ಯ’ ಎಂದರು.</p>.<p>‘ಸಮಾಜದಲ್ಲಿನ ಅಸಮಾನತೆ ತೊಲಗಿಸಲು ಅಂಬೇಡ್ಕರ್ ನೀಡಿದ ಸಂವಿಧಾನ ದಾರಿದೀಪವಾಗಿದೆ. ಅವರು ತಮ್ಮ ಜೀವನದಲ್ಲಿ ಎದುರಿಸಿದ ನೋವು ಯಾರಿಗೂ ಆಗದಿರಲಿ. ಅಸ್ಪೃಶ್ಯತೆ, ಜಾತಿ ಪದ್ದತಿ ಆಚರಣೆ ಮಾಡುವುದನ್ನು ನಿಲ್ಲಿಸುವ ಮೂಲಕ ಅವರ ಆಶಯಗಳನ್ನು ಈಡೇರಿಸಲು ಯುವಕರು ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಜಾತಿ ಎನ್ನುವುದು ನಾವೇ ಹುಟ್ಟುಹಾಕಿರುವುದಾಗಿದೆ. ಅದನ್ನು ಹೋಗಲಾಡಿಸಲು ಮನಸ್ಸುಗಳು ಬದಲಾಗಬೇಕು. ನಾವೆಲ್ಲಾ ಒಂದೇ ಎಂಬ ಭಾವನೆ ಬಲಗೊಳ್ಳಬೇಕು. ಮನಸ್ಸಿನಲ್ಲಿ ಬೇರೂರಿರುವ ಅಸ್ಪೃಶ್ಯತೆಯೆಂಬ ಕಳಂಕ ದೂರಮಾಡಬೇಕು’ ಎಂದು ಎಚ್ಚರಿಸಿದರು.</p>.<p>‘ನಾನು ಚಿಕ್ಕವನಾಗಿರುವಾಗಲೇ ದಲಿತರ ಮನೆಯಲ್ಲಿ ಊಟ ಸೇವನೆ ಮಾಡಿದ್ದೆ, ಆಗ ನನ್ನ ತಂದೆ ಬೈಯುತ್ತಾರೆಂಬ ಭಯವಿತ್ತು, ಆದರೆ ನನ್ನ ತಂದೆ ಏನೂ ಅನ್ನಲಿಲ್ಲ, ದಲಿತರ ಮನೆಯಲ್ಲಿ ಊಟ ಮಾಡುವುದರಲ್ಲಿ ತಪ್ಪೇನಿಲ್ಲ ಎಂದು ಧೈರ್ಯ ತುಂಬಿದರು, ಎಂದು ಬಾಲ್ಯದ ದಿನಗಳನ್ನು ನೆನಪಿಸಿಕೊಂಡರು.</p>.<p>‘ಎಲ್ಲರಲ್ಲೂ ಹರಿಯುವ ರಕ್ತದ ಬಣ್ಣ ಒಂದೇ. ಕುಡಿಯುವ ನೀರು, ಉಸಿರಾಡುವ ಗಾಳಿ ನೈಸರ್ಗಿ ನಿರ್ಮಿತವಾದದು, ಅದಕ್ಕೆ ಯಾವುದೇ ಜಾತಿ, ಧರ್ಮವಿಲ್ಲ. ಪ್ರತಿಯೊಬ್ಬರು ಸಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು, ಅಸ್ಪೃಶ್ಯತೆಗೆ ಬೆಂಬಲ ನೀಡುವವರಿಗೆ ಬುದ್ದಿ ಹೇಳಬೇಕು’ ಎಂದರು.</p>.<p>‘ಸಾಮಾಜಿಕ ನ್ಯಾಯ ಇಂದು ಅಗತ್ಯವಾಗಿದೆ. ಅದಕ್ಕಾಗಿಯೇ ಸಂವಿಧಾನ ಅನೇಕ ಹಕ್ಕುಗಳನ್ನು ನೀಡಿದೆ, ಅದನ್ನು ಸದುಪಯೋಗಪಡಿಸಿಕೊಂಡು ಮುಖ್ಯವಾಹಿನಿಗೆ ಬರಬೇಕು. ಅಸ್ಪೃಶ್ಯತೆ ವಿರುದ್ಧ ಸಮಾಜದ ಪ್ರತಿಯೊಬ್ಬರು ಧ್ವನಿಯೆತ್ತುವಂತಾಗಬೇಕು. ಇತ್ತೀಚಿನ ದಿನಗಳಲ್ಲಿ ಅಂತಹ ಬೇಧ ಸಾಕಷ್ಟು ಕಡಿಮೆಯಾಗಿದ್ದು, ಜನನ್ನು ಜಾಗೃತಗೊಳಿಸಬೇಕು’ ಎಂದು ಹೇಳಿದರು.</p>.<p>ಅಣ್ಣಿಹಳ್ಳಿ ಸೊಸೈಟಿ ಅಧ್ಯಕ್ಷ ಅಣ್ಣಿಹಳ್ಳಿ ನಾಗರಾಜ್, ಬ್ಯಾಲಹಳ್ಳಿ ಶಂಕರೇಗೌಡ, ಕಾಮಧೇನುಹಳ್ಳಿ ಧರ್ಮೇಗೌಡ ಊಟ ಸವಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಕಳಂಕವಾಗಿದ್ದು, ಇದನ್ನು ಬೇರು ಸಮೇತ ಕಿತ್ತೊಗೆಯುವ ಕೆಲಸ ಗ್ರಾಮಮಟ್ಟದಿಂದ ಅಗಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು.</p>.<p>ತಾಲ್ಲೂಕಿನ ಮತ್ತಿಕುಂಟೆಯಲ್ಲಿ ದಲಿತ ಮುನಿವೆಂಕಟಪ್ಪ ಮತ್ತು ಹನುಮಂತಪ್ಪ ಅವರ ನಿವಾಸದಲ್ಲಿ ಇತ್ತೀಚಿಗೆ ಊಟ ಮಾಡಿ ಮಾತನಾಡಿ, ‘ಪ್ರತಿ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡಾಗ ಮಾತ್ರ ಸಾರ್ವಜನಿಕ ಜೀವನದಲ್ಲಿ ಗೌರವ ಸಂಪಾದಿಸಲು ಸಾಧ್ಯ’ ಎಂದರು.</p>.<p>‘ಸಮಾಜದಲ್ಲಿನ ಅಸಮಾನತೆ ತೊಲಗಿಸಲು ಅಂಬೇಡ್ಕರ್ ನೀಡಿದ ಸಂವಿಧಾನ ದಾರಿದೀಪವಾಗಿದೆ. ಅವರು ತಮ್ಮ ಜೀವನದಲ್ಲಿ ಎದುರಿಸಿದ ನೋವು ಯಾರಿಗೂ ಆಗದಿರಲಿ. ಅಸ್ಪೃಶ್ಯತೆ, ಜಾತಿ ಪದ್ದತಿ ಆಚರಣೆ ಮಾಡುವುದನ್ನು ನಿಲ್ಲಿಸುವ ಮೂಲಕ ಅವರ ಆಶಯಗಳನ್ನು ಈಡೇರಿಸಲು ಯುವಕರು ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<p>‘ಜಾತಿ ಎನ್ನುವುದು ನಾವೇ ಹುಟ್ಟುಹಾಕಿರುವುದಾಗಿದೆ. ಅದನ್ನು ಹೋಗಲಾಡಿಸಲು ಮನಸ್ಸುಗಳು ಬದಲಾಗಬೇಕು. ನಾವೆಲ್ಲಾ ಒಂದೇ ಎಂಬ ಭಾವನೆ ಬಲಗೊಳ್ಳಬೇಕು. ಮನಸ್ಸಿನಲ್ಲಿ ಬೇರೂರಿರುವ ಅಸ್ಪೃಶ್ಯತೆಯೆಂಬ ಕಳಂಕ ದೂರಮಾಡಬೇಕು’ ಎಂದು ಎಚ್ಚರಿಸಿದರು.</p>.<p>‘ನಾನು ಚಿಕ್ಕವನಾಗಿರುವಾಗಲೇ ದಲಿತರ ಮನೆಯಲ್ಲಿ ಊಟ ಸೇವನೆ ಮಾಡಿದ್ದೆ, ಆಗ ನನ್ನ ತಂದೆ ಬೈಯುತ್ತಾರೆಂಬ ಭಯವಿತ್ತು, ಆದರೆ ನನ್ನ ತಂದೆ ಏನೂ ಅನ್ನಲಿಲ್ಲ, ದಲಿತರ ಮನೆಯಲ್ಲಿ ಊಟ ಮಾಡುವುದರಲ್ಲಿ ತಪ್ಪೇನಿಲ್ಲ ಎಂದು ಧೈರ್ಯ ತುಂಬಿದರು, ಎಂದು ಬಾಲ್ಯದ ದಿನಗಳನ್ನು ನೆನಪಿಸಿಕೊಂಡರು.</p>.<p>‘ಎಲ್ಲರಲ್ಲೂ ಹರಿಯುವ ರಕ್ತದ ಬಣ್ಣ ಒಂದೇ. ಕುಡಿಯುವ ನೀರು, ಉಸಿರಾಡುವ ಗಾಳಿ ನೈಸರ್ಗಿ ನಿರ್ಮಿತವಾದದು, ಅದಕ್ಕೆ ಯಾವುದೇ ಜಾತಿ, ಧರ್ಮವಿಲ್ಲ. ಪ್ರತಿಯೊಬ್ಬರು ಸಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು, ಅಸ್ಪೃಶ್ಯತೆಗೆ ಬೆಂಬಲ ನೀಡುವವರಿಗೆ ಬುದ್ದಿ ಹೇಳಬೇಕು’ ಎಂದರು.</p>.<p>‘ಸಾಮಾಜಿಕ ನ್ಯಾಯ ಇಂದು ಅಗತ್ಯವಾಗಿದೆ. ಅದಕ್ಕಾಗಿಯೇ ಸಂವಿಧಾನ ಅನೇಕ ಹಕ್ಕುಗಳನ್ನು ನೀಡಿದೆ, ಅದನ್ನು ಸದುಪಯೋಗಪಡಿಸಿಕೊಂಡು ಮುಖ್ಯವಾಹಿನಿಗೆ ಬರಬೇಕು. ಅಸ್ಪೃಶ್ಯತೆ ವಿರುದ್ಧ ಸಮಾಜದ ಪ್ರತಿಯೊಬ್ಬರು ಧ್ವನಿಯೆತ್ತುವಂತಾಗಬೇಕು. ಇತ್ತೀಚಿನ ದಿನಗಳಲ್ಲಿ ಅಂತಹ ಬೇಧ ಸಾಕಷ್ಟು ಕಡಿಮೆಯಾಗಿದ್ದು, ಜನನ್ನು ಜಾಗೃತಗೊಳಿಸಬೇಕು’ ಎಂದು ಹೇಳಿದರು.</p>.<p>ಅಣ್ಣಿಹಳ್ಳಿ ಸೊಸೈಟಿ ಅಧ್ಯಕ್ಷ ಅಣ್ಣಿಹಳ್ಳಿ ನಾಗರಾಜ್, ಬ್ಯಾಲಹಳ್ಳಿ ಶಂಕರೇಗೌಡ, ಕಾಮಧೇನುಹಳ್ಳಿ ಧರ್ಮೇಗೌಡ ಊಟ ಸವಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>