<p><strong>ಕೋಲಾರ</strong>: ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಲದ ಗುಂಡಿ ಸ್ವಚ್ಛತೆಗೆ ಮಕ್ಕಳನ್ನು ಇಳಿಸಿದ್ದ ಪ್ರಕರಣ ದಲ್ಲಿ ಪೊಲೀಸರು ಗುರುವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.</p><p>ದೂರು ದಾಖಲಾಗುತ್ತಲೇ ತಲೆ ಮರೆಸಿಕೊಂಡಿದ್ದ ಅತಿಥಿ ಶಿಕ್ಷಕ ಅಭಿಷೇಕ್ ಹಾಗೂ ಸ್ವಚ್ಛತಾ ಸಿಬ್ಬಂದಿ ಕಲಾವತಿ ಬಂಧಿತರು. ಇಬ್ಬರೂ ಜಿಲ್ಲೆಯಲ್ಲಿಯೇ ತಲೆಮರೆಸಿಕೊಂಡಿದ್ದರು. ಇದರೊಂದಿಗೆ ಪ್ರಕರಣ ಸಂಬಂಧ ಐವರನ್ನು ಬಂಧಿಸಿದಂತಾಗಿದೆ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಎರಡು ದಿನದಲ್ಲಿ ಆರೋಪಿಗಳ ಬಂಧನಕ್ಕೆ ಸೂಚಿಸಿದ್ದರು. ಅದರ ಬೆನ್ನಲೇ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.</p><p>ಸದ್ಯ ವಸತಿ ಶಾಲೆ ಪ್ರಾಂಶುಪಾಲೆ ಭಾರತಮ್ಮ, ಚಿತ್ರಕಲಾ ಶಿಕ್ಷಕ ಮುನಿಯಪ್ಪ, ವಾರ್ಡನ್ ಮಂಜುನಾಥ್ ಅವರನ್ನು ಬಂಧಿಸಲಾಗಿದೆ.</p><p>ಐವರು ಆರೋಪಿಗಳ ವಿರುದ್ಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಪ್ರಕರಣ ಹಾಗೂ ಈ ಪೈಕಿ ಒಬ್ಬರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ವಾರ್ಡನ್ ಮಂಜುನಾಥ್ ಜಾಮೀನಿನ ಮೇಲೆ ಹೊರಬಂದಿದ್ದಾರೆ.</p><p><strong>ಮೊಬೈಲ್ ವಶಕ್ಕೆ: </strong>ಫೋಟೊ, ವಿಡಿಯೊ ಮಾಯ!: ತನಿಖೆಗಾಗಿ ವಸತಿ ಶಾಲೆಯ ಎಲ್ಲಾ ಸಿಬ್ಬಂದಿಯ ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಆರೋಪಿ ಶಿಕ್ಷಕ ಮುನಿಯಪ್ಪ ಮೊಬೈಲ್ನಲ್ಲಿದ್ದ ಫೋಟೊ, ವಿಡಿಯೊ ಅಳಿಸಿ ಹಾಕಿದ್ದಾರೆ.</p><p>‘ಯಾರು ವಿಡಿಯೊ ಮಾಡಿದ್ದಾರೆ ಎಂದು ಪತ್ತೆ ಹಚ್ಚುತ್ತಿದ್ದೇವೆ. ಶಿಕ್ಷಕ ಮುನಿಯಪ್ಪ ಮೊಬೈಲ್ನಲ್ಲಿದ್ದ ವಿಡಿಯೊಗಳನ್ನು ಅಳಿಸಿ ಹಾಕಿದ್ದು, ಅವನ್ನು ಪಡೆಯಲು (ರಿಟ್ರೀವ್) ಸಿಐಡಿ ನೆರವು ಕೋರಿದ್ದೇವೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದರು. </p><p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಡಿಜಿಟಲ್ ಸಾಕ್ಷ್ಯ,ಪ್ರತ್ಯಕ್ಷದರ್ಶಿಗಳು, ಘಟನೆಗೆ ಸಂಬಂಧಿಸಿದ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ಮುಂದುವರಿದಿದೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ’ ಎಂದು ಹೇಳಿದರು.</p>.<p><strong>‘ವಾರ್ಡನ್ ಹುದ್ದೆಯ ಗುಂಪುಗಾರಿಕೆ ಕಾರಣ?’</strong></p><p>ವಸತಿ ಶಾಲೆಯಲ್ಲಿ ನಡೆದ ಘಟನೆಗಳಿಗೆ ಶಾಲೆ ನಿರ್ವಹಣೆ ಸಂಬಂಧ ಕಾಯಂ ಶಿಕ್ಷಕರು ಹಾಗೂ ಹೊರಗುತ್ತಿಗೆ ಶಿಕ್ಷಕರ ನಡುವಿನ ವೈಮನಸ್ಯ, ಕಮಿಷನ್ ಹಂಚಿಕೊಳ್ಳುವ ವಿಚಾರದಲ್ಲಿ ಭಿನ್ನಾಭಿಪ್ರಾಯ ಮುಖ್ಯ ಕಾರಣ ಎಂದು ವಿಚಾರಣೆಯಲ್ಲಿ ಗೊತ್ತಾಗಿದೆ.</p><p>ವಾರ್ಡನ್ ಹುದ್ದೆಗಾಗಿ ಕಣ್ಣಿಟ್ಟು ಗುಂಪುಗಾರಿಕೆ ನಡೆದಿರುವುದೂ ಕಾರಣವಾಗಿದೆ. ಪ್ರಭಾರ ವಾರ್ಡನ್ ಮಂಜುನಾಥ್ ಅವರನ್ನು ಕೆಳಗಿಳಿಸಲು ಪ್ರಯತ್ನ ನಡೆದಿತ್ತು. ಹೀಗಾಗಿ, ಒಂದು ಗುಂಪು ವಸತಿ ಶಾಲೆಯಲ್ಲಿನ ಘಟನೆಗಳನ್ನು ವಿಡಿಯೊ ಮಾಡಿದೆ ಎಂಬ ಅಂಶ ವಿಚಾರಣೆಯಲ್ಲಿ ಗೊತ್ತಾಗಿದೆ</p><p>ಶಾಲೆಗೆ ಕೆಟ್ಟು ಹೆಸರು ತಂದು ಪ್ರಾಂಶುಪಾಲರನ್ನು ಸಿಕ್ಕಿಸಿ ಹಾಕಿಸುವುದು ಇವರ ಉದ್ದೇಶವಾಗಿತ್ತು. ಹೀಗಾಗಿ, ಮಕ್ಕಳಿಗೆ ನೀಡುತ್ತಿದ್ದ ಹಿಂಸೆ, ಮಾಡಿಸುತ್ತಿದ್ದ ಕೆಲಸಗಳನ್ನು ವಿಡಿಯೊ ಮಾಡಲಾಗಿತ್ತು ಎಂದು ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಮುಖ್ಯ ಶಿಕ್ಷಕ ಅಮಾನತು</strong></p><p><strong>ಶಿವಮೊಗ್ಗ</strong>: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಲಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಅಲ್ಲಿನ ಶೌಚಾಲಯ ಸ್ವಚ್ಛಗೊಳಿಸಲು ಬಳಸಲಾಗಿದೆ. ಈ ಕುರಿತ ವಿಡಿಯೊ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.</p><p>ಭದ್ರಾವತಿ ಬಿಇಒ ನಾಗೇಂದ್ರಪ್ಪ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿ ಮಾಹಿತಿ ಸಂಗ್ರಹಿಸಿದ್ದರು.</p><p>ಅವರು ಸಲ್ಲಿಸಿರುವ ವರದಿಯನ್ನು ಆಧರಿಸಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಪ್ರಭಾರ ಮುಖ್ಯಶಿಕ್ಷಕ ಶಂಕರಪ್ಪ ವಿರುದ್ಧ ಇಲಾಖೆ ವಿಚಾರಣೆ ಕಾಯ್ದಿರಿಸಿ, ಅವರನ್ನು ಅಮಾನತುಗೊಳಿಸಿದ್ದಾರೆ.ಶಂಕರಪ್ಪ 11 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.</p><p><strong>ಪ್ರತ್ಯೇಕ ವಿಡಿಯೊ: </strong>ಶಾಲೆಯ ಸಮವಸ್ತ್ರದಲ್ಲಿರುವ ವಿದ್ಯಾರ್ಥಿ –ವಿದ್ಯಾರ್ಥಿನಿಯರು ಬ್ರಷ್ ಹಿಡಿದು ಶೌಚಾಲಯದ ನೆಲವನ್ನು ಉಜ್ಜಿ ಸ್ವಚ್ಛಗೊಳಿಸುತ್ತಿರುವುದು ವಿಡಿಯೊದಲ್ಲಿದೆ.</p><p><strong>ಡಿಎಸ್ಎಸ್ ದೂರು: </strong>ಜಾಲತಾಣಗಳಲ್ಲಿ ವಿಡಿಯೊ ಹರಿದಾಡುತ್ತಿದ್ದಂತೆಯೇ ದಲಿತ ಸಂಘರ್ಷ ಸಮಿತಿಯ ಮುಖಂಡರು ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರಿಗೆ ಈ ಸಂಬಂಧ ದೂರು ನೀಡಿದ್ದಾರೆ. ‘ಶಾಲೆ ಶೌಚಾಲಯ ಸ್ವಚ್ಛಗೊಳಿಸಲು ಪದೇಪದೇ ವಿದ್ಯಾರ್ಥಿಗಳನ್ನು ಬಳಸಲಾಗುತ್ತಿದೆ. ನಿರಾಕರಿಸುವ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಮುಖ್ಯಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಲದ ಗುಂಡಿ ಸ್ವಚ್ಛತೆಗೆ ಮಕ್ಕಳನ್ನು ಇಳಿಸಿದ್ದ ಪ್ರಕರಣ ದಲ್ಲಿ ಪೊಲೀಸರು ಗುರುವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.</p><p>ದೂರು ದಾಖಲಾಗುತ್ತಲೇ ತಲೆ ಮರೆಸಿಕೊಂಡಿದ್ದ ಅತಿಥಿ ಶಿಕ್ಷಕ ಅಭಿಷೇಕ್ ಹಾಗೂ ಸ್ವಚ್ಛತಾ ಸಿಬ್ಬಂದಿ ಕಲಾವತಿ ಬಂಧಿತರು. ಇಬ್ಬರೂ ಜಿಲ್ಲೆಯಲ್ಲಿಯೇ ತಲೆಮರೆಸಿಕೊಂಡಿದ್ದರು. ಇದರೊಂದಿಗೆ ಪ್ರಕರಣ ಸಂಬಂಧ ಐವರನ್ನು ಬಂಧಿಸಿದಂತಾಗಿದೆ.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಎರಡು ದಿನದಲ್ಲಿ ಆರೋಪಿಗಳ ಬಂಧನಕ್ಕೆ ಸೂಚಿಸಿದ್ದರು. ಅದರ ಬೆನ್ನಲೇ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.</p><p>ಸದ್ಯ ವಸತಿ ಶಾಲೆ ಪ್ರಾಂಶುಪಾಲೆ ಭಾರತಮ್ಮ, ಚಿತ್ರಕಲಾ ಶಿಕ್ಷಕ ಮುನಿಯಪ್ಪ, ವಾರ್ಡನ್ ಮಂಜುನಾಥ್ ಅವರನ್ನು ಬಂಧಿಸಲಾಗಿದೆ.</p><p>ಐವರು ಆರೋಪಿಗಳ ವಿರುದ್ಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಪ್ರಕರಣ ಹಾಗೂ ಈ ಪೈಕಿ ಒಬ್ಬರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ವಾರ್ಡನ್ ಮಂಜುನಾಥ್ ಜಾಮೀನಿನ ಮೇಲೆ ಹೊರಬಂದಿದ್ದಾರೆ.</p><p><strong>ಮೊಬೈಲ್ ವಶಕ್ಕೆ: </strong>ಫೋಟೊ, ವಿಡಿಯೊ ಮಾಯ!: ತನಿಖೆಗಾಗಿ ವಸತಿ ಶಾಲೆಯ ಎಲ್ಲಾ ಸಿಬ್ಬಂದಿಯ ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಆರೋಪಿ ಶಿಕ್ಷಕ ಮುನಿಯಪ್ಪ ಮೊಬೈಲ್ನಲ್ಲಿದ್ದ ಫೋಟೊ, ವಿಡಿಯೊ ಅಳಿಸಿ ಹಾಕಿದ್ದಾರೆ.</p><p>‘ಯಾರು ವಿಡಿಯೊ ಮಾಡಿದ್ದಾರೆ ಎಂದು ಪತ್ತೆ ಹಚ್ಚುತ್ತಿದ್ದೇವೆ. ಶಿಕ್ಷಕ ಮುನಿಯಪ್ಪ ಮೊಬೈಲ್ನಲ್ಲಿದ್ದ ವಿಡಿಯೊಗಳನ್ನು ಅಳಿಸಿ ಹಾಕಿದ್ದು, ಅವನ್ನು ಪಡೆಯಲು (ರಿಟ್ರೀವ್) ಸಿಐಡಿ ನೆರವು ಕೋರಿದ್ದೇವೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದರು. </p><p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಡಿಜಿಟಲ್ ಸಾಕ್ಷ್ಯ,ಪ್ರತ್ಯಕ್ಷದರ್ಶಿಗಳು, ಘಟನೆಗೆ ಸಂಬಂಧಿಸಿದ ಸಾಕ್ಷ್ಯಗಳ ಆಧಾರದ ಮೇಲೆ ತನಿಖೆ ಮುಂದುವರಿದಿದೆ. ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ’ ಎಂದು ಹೇಳಿದರು.</p>.<p><strong>‘ವಾರ್ಡನ್ ಹುದ್ದೆಯ ಗುಂಪುಗಾರಿಕೆ ಕಾರಣ?’</strong></p><p>ವಸತಿ ಶಾಲೆಯಲ್ಲಿ ನಡೆದ ಘಟನೆಗಳಿಗೆ ಶಾಲೆ ನಿರ್ವಹಣೆ ಸಂಬಂಧ ಕಾಯಂ ಶಿಕ್ಷಕರು ಹಾಗೂ ಹೊರಗುತ್ತಿಗೆ ಶಿಕ್ಷಕರ ನಡುವಿನ ವೈಮನಸ್ಯ, ಕಮಿಷನ್ ಹಂಚಿಕೊಳ್ಳುವ ವಿಚಾರದಲ್ಲಿ ಭಿನ್ನಾಭಿಪ್ರಾಯ ಮುಖ್ಯ ಕಾರಣ ಎಂದು ವಿಚಾರಣೆಯಲ್ಲಿ ಗೊತ್ತಾಗಿದೆ.</p><p>ವಾರ್ಡನ್ ಹುದ್ದೆಗಾಗಿ ಕಣ್ಣಿಟ್ಟು ಗುಂಪುಗಾರಿಕೆ ನಡೆದಿರುವುದೂ ಕಾರಣವಾಗಿದೆ. ಪ್ರಭಾರ ವಾರ್ಡನ್ ಮಂಜುನಾಥ್ ಅವರನ್ನು ಕೆಳಗಿಳಿಸಲು ಪ್ರಯತ್ನ ನಡೆದಿತ್ತು. ಹೀಗಾಗಿ, ಒಂದು ಗುಂಪು ವಸತಿ ಶಾಲೆಯಲ್ಲಿನ ಘಟನೆಗಳನ್ನು ವಿಡಿಯೊ ಮಾಡಿದೆ ಎಂಬ ಅಂಶ ವಿಚಾರಣೆಯಲ್ಲಿ ಗೊತ್ತಾಗಿದೆ</p><p>ಶಾಲೆಗೆ ಕೆಟ್ಟು ಹೆಸರು ತಂದು ಪ್ರಾಂಶುಪಾಲರನ್ನು ಸಿಕ್ಕಿಸಿ ಹಾಕಿಸುವುದು ಇವರ ಉದ್ದೇಶವಾಗಿತ್ತು. ಹೀಗಾಗಿ, ಮಕ್ಕಳಿಗೆ ನೀಡುತ್ತಿದ್ದ ಹಿಂಸೆ, ಮಾಡಿಸುತ್ತಿದ್ದ ಕೆಲಸಗಳನ್ನು ವಿಡಿಯೊ ಮಾಡಲಾಗಿತ್ತು ಎಂದು ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಮುಖ್ಯ ಶಿಕ್ಷಕ ಅಮಾನತು</strong></p><p><strong>ಶಿವಮೊಗ್ಗ</strong>: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಲಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಅಲ್ಲಿನ ಶೌಚಾಲಯ ಸ್ವಚ್ಛಗೊಳಿಸಲು ಬಳಸಲಾಗಿದೆ. ಈ ಕುರಿತ ವಿಡಿಯೊ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.</p><p>ಭದ್ರಾವತಿ ಬಿಇಒ ನಾಗೇಂದ್ರಪ್ಪ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದು ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿ ಮಾಹಿತಿ ಸಂಗ್ರಹಿಸಿದ್ದರು.</p><p>ಅವರು ಸಲ್ಲಿಸಿರುವ ವರದಿಯನ್ನು ಆಧರಿಸಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಪ್ರಭಾರ ಮುಖ್ಯಶಿಕ್ಷಕ ಶಂಕರಪ್ಪ ವಿರುದ್ಧ ಇಲಾಖೆ ವಿಚಾರಣೆ ಕಾಯ್ದಿರಿಸಿ, ಅವರನ್ನು ಅಮಾನತುಗೊಳಿಸಿದ್ದಾರೆ.ಶಂಕರಪ್ಪ 11 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.</p><p><strong>ಪ್ರತ್ಯೇಕ ವಿಡಿಯೊ: </strong>ಶಾಲೆಯ ಸಮವಸ್ತ್ರದಲ್ಲಿರುವ ವಿದ್ಯಾರ್ಥಿ –ವಿದ್ಯಾರ್ಥಿನಿಯರು ಬ್ರಷ್ ಹಿಡಿದು ಶೌಚಾಲಯದ ನೆಲವನ್ನು ಉಜ್ಜಿ ಸ್ವಚ್ಛಗೊಳಿಸುತ್ತಿರುವುದು ವಿಡಿಯೊದಲ್ಲಿದೆ.</p><p><strong>ಡಿಎಸ್ಎಸ್ ದೂರು: </strong>ಜಾಲತಾಣಗಳಲ್ಲಿ ವಿಡಿಯೊ ಹರಿದಾಡುತ್ತಿದ್ದಂತೆಯೇ ದಲಿತ ಸಂಘರ್ಷ ಸಮಿತಿಯ ಮುಖಂಡರು ಶಿವಮೊಗ್ಗ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರಿಗೆ ಈ ಸಂಬಂಧ ದೂರು ನೀಡಿದ್ದಾರೆ. ‘ಶಾಲೆ ಶೌಚಾಲಯ ಸ್ವಚ್ಛಗೊಳಿಸಲು ಪದೇಪದೇ ವಿದ್ಯಾರ್ಥಿಗಳನ್ನು ಬಳಸಲಾಗುತ್ತಿದೆ. ನಿರಾಕರಿಸುವ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಮುಖ್ಯಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>