<p><strong>ಕೋಲಾರ:</strong> ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಂಸ್ಥಾಪನೆ ದಿನಾಚರಣೆ ಅಂಗವಾಗಿ ಸ್ಥಾಪಿಸಿರುವ ‘ಉತ್ತರೋತ್ತರ ಪ್ರಶಸ್ತಿ’ಗೆ ಈ ಬಾರಿ ಕವಿ ಬಿ.ಆರ್.ಲಕ್ಷ್ಮಣರಾವ್ (ಚಿಂತಾಮಣಿ), ಹಿಂದೂಸ್ತಾನಿ ಗಾಯಕ ಉಸ್ತಾದ್ ಫಯಾಜ್ ಖಾನ್ (ಬೆಂಗಳೂರು), ತೊಗಲು ಗೊಂಬೆ ಪ್ರದರ್ಶನ ಕಲಾವಿದೆ ಸುಮಲತಾ (ಚಿಂತಾಮಣಿ) ಹಾಗೂ ಆದರ್ಶ ರೈತ ದಂಪತಿ ಕೃಷ್ಣೇಗೌಡ– ಮಂಜುಳಮ್ಮ (ಶ್ರೀನಿವಾಸಪುರ) ಅವರನ್ನು ಆಯ್ಕೆ ಮಾಡಲಾಗಿದೆ.</p>.<p>‘2013ರಿಂದ ಈ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಮೂರನೇ ವಾರ್ಷಿಕ ಪ್ರಶಸ್ತಿಗೆ ದಂಪತಿ ಸೇರಿ ವಿವಿಧ ಕ್ಷೇತ್ರಗಳ ನಾಲ್ವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಸೆ.20ರಂದು ಬೆಳಿಗ್ಗೆ 11.30ಕ್ಕೆ ಕೋಲಾರ ತಾಲ್ಲೂಕಿನ ಮಂಗಸಂದ್ರ ಸ್ನಾತಕೋತ್ತರ ಕೇಂದ್ರದಲ್ಲಿ ನಡೆಯಲಿರುವ ದಿನಾಚರಣೆಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹ 10 ಸಾವಿರ ನಗದು, ಫಲಕ ಹಾಗೂ ಪ್ರಮಾಣಪತ್ರ ಒಳಗೊಂಡಿರಲಿದೆ’ ಎಂದು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ತಿಳಿಸಿದ್ದಾರೆ.</p>.<p>ಸಾಹಿತಿ ಜಯಂತ ಕಾಯ್ಕಿಣಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪ್ರೊ.ವಾನಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಂಸ್ಥಾಪನೆ ದಿನಾಚರಣೆ ಅಂಗವಾಗಿ ಸ್ಥಾಪಿಸಿರುವ ‘ಉತ್ತರೋತ್ತರ ಪ್ರಶಸ್ತಿ’ಗೆ ಈ ಬಾರಿ ಕವಿ ಬಿ.ಆರ್.ಲಕ್ಷ್ಮಣರಾವ್ (ಚಿಂತಾಮಣಿ), ಹಿಂದೂಸ್ತಾನಿ ಗಾಯಕ ಉಸ್ತಾದ್ ಫಯಾಜ್ ಖಾನ್ (ಬೆಂಗಳೂರು), ತೊಗಲು ಗೊಂಬೆ ಪ್ರದರ್ಶನ ಕಲಾವಿದೆ ಸುಮಲತಾ (ಚಿಂತಾಮಣಿ) ಹಾಗೂ ಆದರ್ಶ ರೈತ ದಂಪತಿ ಕೃಷ್ಣೇಗೌಡ– ಮಂಜುಳಮ್ಮ (ಶ್ರೀನಿವಾಸಪುರ) ಅವರನ್ನು ಆಯ್ಕೆ ಮಾಡಲಾಗಿದೆ.</p>.<p>‘2013ರಿಂದ ಈ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಮೂರನೇ ವಾರ್ಷಿಕ ಪ್ರಶಸ್ತಿಗೆ ದಂಪತಿ ಸೇರಿ ವಿವಿಧ ಕ್ಷೇತ್ರಗಳ ನಾಲ್ವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಸೆ.20ರಂದು ಬೆಳಿಗ್ಗೆ 11.30ಕ್ಕೆ ಕೋಲಾರ ತಾಲ್ಲೂಕಿನ ಮಂಗಸಂದ್ರ ಸ್ನಾತಕೋತ್ತರ ಕೇಂದ್ರದಲ್ಲಿ ನಡೆಯಲಿರುವ ದಿನಾಚರಣೆಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹ 10 ಸಾವಿರ ನಗದು, ಫಲಕ ಹಾಗೂ ಪ್ರಮಾಣಪತ್ರ ಒಳಗೊಂಡಿರಲಿದೆ’ ಎಂದು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ತಿಳಿಸಿದ್ದಾರೆ.</p>.<p>ಸಾಹಿತಿ ಜಯಂತ ಕಾಯ್ಕಿಣಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪ್ರೊ.ವಾನಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>