<p><strong>ಮಾಲೂರು:</strong> ಕೊರೊನಾ ವಾರಿಯರ್ಸ್ಗೆ ಲಸಿಕೆ ಹಾಕಲು ಪಟ್ಟಣದ ಸರ್ಕಾರಿ ಆಸ್ಪತ್ರೆ ಸೇರಿದಂತೆ ತಾಲ್ಲೂಕಿನ 6 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.</p>.<p>ತಾಲ್ಲೂಕಿನ ದೊಡ್ಡ ಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಕೋವಿಡ್ ಲಸಿಕೆ ಹಾಕುವ ಬಗ್ಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೊರೊನಾ ಸೋಂಕಿಗೆ ತುರ್ತು ಲಸಿಕೆ ಹಾಕುವ ಅಭಿಯಾನಕ್ಕೆ ಸರ್ಕಾರಕ್ಕೆ ಮುಂದಾಗಿದೆ. ಮೊದಲನೇ ಹಂತದಲ್ಲಿ ಕೊರೊನಾ ವಾರಿಯರ್ಸ್ ಆಗಿ ದೇಶಾದ್ಯಂತ ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಲಸಿಕೆ ಹಾಕಲು ತುರ್ತು ಅನುಮತಿ ನೀಡಲಾಗಿದೆ ಎಂದರು.</p>.<p>ತಾಲ್ಲೂಕು ಆರೋಗ್ಯ ಆಧಿಕಾರಿ ಡಾ.ಪ್ರಸನ್ನ ಮಾತನಾಡಿ, ಕೊರೊನಾ ಸೋಂಕನ್ನು ತಡೆಗಟ್ಟವ<br />ನಿಟ್ಟಿನಲ್ಲಿ ಶ್ರಮಿಸಿದ ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ ಹಾಕಲು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲ್ಳೂಕಿನ ದೊಡ್ಡ ಶಿವಾರ, ತೋರ್ನಹಳ್ಳಿ, ಮಾಸ್ತಿ, ಟೇಕಲ್, ತೊರಲಕ್ಕಿ, ಲಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.<br />1,300 ಮಂದಿ ಆರೋಗ್ಯ ಕಾರ್ಯಕರ್ತರು ಇದ್ದು, ಒಂದು ದಿನಕ್ಕೆ 100 ಮಂದಿಯಂತೆ 6 ಆರೋಗ್ಯ ಕೇಂದ್ರಗಳಲ್ಲಿ 600 ಮಂದಿಗೆ ಪ್ರತಿ ದಿನ ಲಸಿಕೆ ಹಾಕಲಾಗುವುದು<br />ಎಂದರು.</p>.<p>ತಾ.ಪಂ.ಇಒ ಕೃಷ್ಣಪ್ಪ, ಪಿಡಿಒ ರಾಮಕೃಷ್ಣ ರೆಡ್ಡಿ, ದೊಡ್ಡ ಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಕೊರೊನಾ ವಾರಿಯರ್ಸ್ಗೆ ಲಸಿಕೆ ಹಾಕಲು ಪಟ್ಟಣದ ಸರ್ಕಾರಿ ಆಸ್ಪತ್ರೆ ಸೇರಿದಂತೆ ತಾಲ್ಲೂಕಿನ 6 ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು.</p>.<p>ತಾಲ್ಲೂಕಿನ ದೊಡ್ಡ ಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಕೋವಿಡ್ ಲಸಿಕೆ ಹಾಕುವ ಬಗ್ಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೊರೊನಾ ಸೋಂಕಿಗೆ ತುರ್ತು ಲಸಿಕೆ ಹಾಕುವ ಅಭಿಯಾನಕ್ಕೆ ಸರ್ಕಾರಕ್ಕೆ ಮುಂದಾಗಿದೆ. ಮೊದಲನೇ ಹಂತದಲ್ಲಿ ಕೊರೊನಾ ವಾರಿಯರ್ಸ್ ಆಗಿ ದೇಶಾದ್ಯಂತ ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಲಸಿಕೆ ಹಾಕಲು ತುರ್ತು ಅನುಮತಿ ನೀಡಲಾಗಿದೆ ಎಂದರು.</p>.<p>ತಾಲ್ಲೂಕು ಆರೋಗ್ಯ ಆಧಿಕಾರಿ ಡಾ.ಪ್ರಸನ್ನ ಮಾತನಾಡಿ, ಕೊರೊನಾ ಸೋಂಕನ್ನು ತಡೆಗಟ್ಟವ<br />ನಿಟ್ಟಿನಲ್ಲಿ ಶ್ರಮಿಸಿದ ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ ಹಾಕಲು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲ್ಳೂಕಿನ ದೊಡ್ಡ ಶಿವಾರ, ತೋರ್ನಹಳ್ಳಿ, ಮಾಸ್ತಿ, ಟೇಕಲ್, ತೊರಲಕ್ಕಿ, ಲಕ್ಕೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.<br />1,300 ಮಂದಿ ಆರೋಗ್ಯ ಕಾರ್ಯಕರ್ತರು ಇದ್ದು, ಒಂದು ದಿನಕ್ಕೆ 100 ಮಂದಿಯಂತೆ 6 ಆರೋಗ್ಯ ಕೇಂದ್ರಗಳಲ್ಲಿ 600 ಮಂದಿಗೆ ಪ್ರತಿ ದಿನ ಲಸಿಕೆ ಹಾಕಲಾಗುವುದು<br />ಎಂದರು.</p>.<p>ತಾ.ಪಂ.ಇಒ ಕೃಷ್ಣಪ್ಪ, ಪಿಡಿಒ ರಾಮಕೃಷ್ಣ ರೆಡ್ಡಿ, ದೊಡ್ಡ ಶಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>