ಬೆಳಿಗ್ಗೆ ಅಭಿಷೇಕ, ಘಂಟಾನಾದ, ಸುಪ್ರಭಾತ, ಗೋಪೂಜೆ, ವೈಕುಂಠದ್ವಾರ ಪ್ರವೇಶ ಏರ್ಪಡಿಸಲಾಗಿತ್ತು. ವಜ್ರ ಕವಚಧಾರಣೆ ಮತ್ತು ಮಹಾ ಮಂಗಳಾರತಿ ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ವೈಕುಂಠ ಏಕಾದಶಿ ದಿನ ವೆಂಕಟರಮಣಸ್ವಾಮಿಯ ದರ್ಶನ ಪಡೆದು ವೈಕುಂಠ ದ್ವಾರದ ಮೂಲಕ ಹೋದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಏಕಾದಶಿ ದಿನ ಸ್ವರ್ಗದಲ್ಲಿ ವೈಕುಂಠದ ಬಾಗಿಲು ತೆರೆದಿರುತ್ತದೆ. ಈ ದಿನ ಅತ್ಯಂತ ಪವಿತ್ರ ಎಂಬ ನಂಬಿಕೆ ಜನರಲ್ಲಿ ಬೇರೂರಿದೆ.