<p><strong>ಕೋಲಾರ</strong>: ‘ಸರ್ಕಾರವು ಹೋಬಳಿ ಮಟ್ಟದಲ್ಲಿ ಜನಪದ ಜಾತ್ರೆ ನಡೆಸುತ್ತಿರುವುದರಿಂದ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಲು ಅವಕಾಶವಾಗುತ್ತದೆ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಎನ್.ಅರುಣ್ಪ್ರಸಾದ್ ಅಭಿಪ್ರಾಯಪಟ್ಟರು.</p>.<p>ಜನಪದ ಜಾತ್ರೆ ಆಚರಣೆ ಕುರಿತು ತಾಲ್ಲೂಕಿನ ವಕ್ಕಲೇರಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಸ್ಥಳೀಯವಾಗಿ ಸಾಕಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಸರ್ಕಾರ ಅಂತಹ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p>‘ವಕ್ಕಲೇರಿಯಲ್ಲಿ ಫೆ.9ರಂದು ಜನಪದ ಜಾತ್ರೆ ನಡೆಯುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವಕ್ಕಲೇರಿಯ ಧರ್ಮರಾಯಸ್ವಾಮಿ ದೇವಸ್ಥಾನ ಆವರಣದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ’ ಎಂದು ಮಾಹಿತಿ ನೀಡಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ಸಂಸದ ಎಸ್.ಮುನಿಸ್ವಾಮಿ, ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ನಸೀರ್ ಅಹಮ್ಮದ್, ಶಾಸಕರಾದ ಕೆ.ಆರ್.ರಮೇಶ್ಕುಮಾರ್, ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ ಹಾಗೂ ಎಂ.ರೂಪಕಲಾ ಭಾಗವಹಿಸುತ್ತಾರೆ’ ಎಂದರು.</p>.<p><strong>ಹಬ್ಬದಂತೆ ಆಚರಿಸಿ:</strong> ‘ಜನಪದ ಜಾತ್ರೆಯನ್ನು ಹಬ್ಬದಂತೆ ಆಚರಿಸಬೇಕು. ಗ್ರಾಮದೆಲ್ಲೆಡೆ ಸ್ವಚ್ಛತೆ ಮಾಡಿ ಬಾಳೆ ದಿಂಡು ಕಟ್ಟಬೇಕು. ಜನರಿಗೆ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಸರಿಯಿರಬೇಕು. ಫೆ.11 ಮತ್ತು 12ರಂದು ನಡೆಯುವ ಉದ್ಯೋಗ ಮೇಳದ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕು’ ಎಂದು ಹೇಳಿದರು.</p>.<p>‘ಕಾರ್ಯಕ್ರಮ ರಾಜಕೀಯರಹಿತ ಕಾರ್ಯಕ್ರಮವಾಗಬೇಕು. ಸಮಯಾವಕಾಶ ಕಡಿಮೆಯಿದ್ದು, ಹೋಬಳಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲೂ ಹೆಚ್ಚಿನ ಪ್ರಚಾರ ನಡೆಸಬೇಕು. ಜತೆಗೆ ಕಾರ್ಯಕ್ರಮದ ಮಾಹಿತಿಯುಳ್ಳ ಕರಪತ್ರ ಹಂಚಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಬರುವಂತೆ ಮಾಡಬೇಕು’ ಎಂದು ಸೂಚಿಸಿದರು.</p>.<p><strong>20 ಕಲಾ ತಂಡ:</strong> ‘ಸರ್ಕಾರದ ಆದೇಶದಂತೆ ಇಲಾಖೆಯಿಂದ ಜಿಲ್ಲೆಯಾದ್ಯಂತ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ವರ್ಷ ವಕ್ಕಲೇರಿ ಹೋಬಳಿಯಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಮಾಹಿತಿ ನೀಡಿದರು.</p>.<p>‘ಫೆ.9ರಂದು ವಕ್ಕಲೇರಿಯಲ್ಲಿ ಜಾತ್ರೆ ಇರುವುದರಿಂದ ಜನಪದ ಜಾತ್ರೆ ಆಚರಿಸಲಾಗುತ್ತಿದೆ. ಬೇರೆ ತಾಲ್ಲೂಕುಗಳಿಂದ 20ಕ್ಕೂ ಹೆಚ್ಚು ಕಲಾ ತಂಡಗಳು ಕಾರ್ಯಕ್ರಮಕ್ಕೆ ಬರುತ್ತವೆ. ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ, ಜನಪದ ಗೀತಾ ಗಾಯನ, ರಂಗಗೀತೆ, ಜನಪದ ನೃತ್ಯ ಹಾಗೂ ಭರತನಾಟ್ಯ ನಡೆಯುತ್ತದೆ’ ಎಂದು ತಿಳಿಸಿದರು.</p>.<p>ವಕ್ಕಲೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ, ಸದಸ್ಯರು ಹಾಗೂ ಪಿಡಿಒ ಆರ್.ಮಂಜುನಾಥ್ಪ್ರಸಾದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಸರ್ಕಾರವು ಹೋಬಳಿ ಮಟ್ಟದಲ್ಲಿ ಜನಪದ ಜಾತ್ರೆ ನಡೆಸುತ್ತಿರುವುದರಿಂದ ಸ್ಥಳೀಯ ಪ್ರತಿಭೆಗಳನ್ನು ಗುರುತಿಸಲು ಅವಕಾಶವಾಗುತ್ತದೆ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಎನ್.ಅರುಣ್ಪ್ರಸಾದ್ ಅಭಿಪ್ರಾಯಪಟ್ಟರು.</p>.<p>ಜನಪದ ಜಾತ್ರೆ ಆಚರಣೆ ಕುರಿತು ತಾಲ್ಲೂಕಿನ ವಕ್ಕಲೇರಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಸ್ಥಳೀಯವಾಗಿ ಸಾಕಷ್ಟು ಪ್ರತಿಭಾವಂತ ಕಲಾವಿದರಿದ್ದಾರೆ. ಸರ್ಕಾರ ಅಂತಹ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p>‘ವಕ್ಕಲೇರಿಯಲ್ಲಿ ಫೆ.9ರಂದು ಜನಪದ ಜಾತ್ರೆ ನಡೆಯುತ್ತದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವಕ್ಕಲೇರಿಯ ಧರ್ಮರಾಯಸ್ವಾಮಿ ದೇವಸ್ಥಾನ ಆವರಣದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ’ ಎಂದು ಮಾಹಿತಿ ನೀಡಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ಸಂಸದ ಎಸ್.ಮುನಿಸ್ವಾಮಿ, ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ನಸೀರ್ ಅಹಮ್ಮದ್, ಶಾಸಕರಾದ ಕೆ.ಆರ್.ರಮೇಶ್ಕುಮಾರ್, ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ ಹಾಗೂ ಎಂ.ರೂಪಕಲಾ ಭಾಗವಹಿಸುತ್ತಾರೆ’ ಎಂದರು.</p>.<p><strong>ಹಬ್ಬದಂತೆ ಆಚರಿಸಿ:</strong> ‘ಜನಪದ ಜಾತ್ರೆಯನ್ನು ಹಬ್ಬದಂತೆ ಆಚರಿಸಬೇಕು. ಗ್ರಾಮದೆಲ್ಲೆಡೆ ಸ್ವಚ್ಛತೆ ಮಾಡಿ ಬಾಳೆ ದಿಂಡು ಕಟ್ಟಬೇಕು. ಜನರಿಗೆ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಸರಿಯಿರಬೇಕು. ಫೆ.11 ಮತ್ತು 12ರಂದು ನಡೆಯುವ ಉದ್ಯೋಗ ಮೇಳದ ಬಗ್ಗೆ ವ್ಯಾಪಕ ಪ್ರಚಾರ ನಡೆಸಬೇಕು’ ಎಂದು ಹೇಳಿದರು.</p>.<p>‘ಕಾರ್ಯಕ್ರಮ ರಾಜಕೀಯರಹಿತ ಕಾರ್ಯಕ್ರಮವಾಗಬೇಕು. ಸಮಯಾವಕಾಶ ಕಡಿಮೆಯಿದ್ದು, ಹೋಬಳಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲೂ ಹೆಚ್ಚಿನ ಪ್ರಚಾರ ನಡೆಸಬೇಕು. ಜತೆಗೆ ಕಾರ್ಯಕ್ರಮದ ಮಾಹಿತಿಯುಳ್ಳ ಕರಪತ್ರ ಹಂಚಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಬರುವಂತೆ ಮಾಡಬೇಕು’ ಎಂದು ಸೂಚಿಸಿದರು.</p>.<p><strong>20 ಕಲಾ ತಂಡ:</strong> ‘ಸರ್ಕಾರದ ಆದೇಶದಂತೆ ಇಲಾಖೆಯಿಂದ ಜಿಲ್ಲೆಯಾದ್ಯಂತ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ವರ್ಷ ವಕ್ಕಲೇರಿ ಹೋಬಳಿಯಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಮಾಹಿತಿ ನೀಡಿದರು.</p>.<p>‘ಫೆ.9ರಂದು ವಕ್ಕಲೇರಿಯಲ್ಲಿ ಜಾತ್ರೆ ಇರುವುದರಿಂದ ಜನಪದ ಜಾತ್ರೆ ಆಚರಿಸಲಾಗುತ್ತಿದೆ. ಬೇರೆ ತಾಲ್ಲೂಕುಗಳಿಂದ 20ಕ್ಕೂ ಹೆಚ್ಚು ಕಲಾ ತಂಡಗಳು ಕಾರ್ಯಕ್ರಮಕ್ಕೆ ಬರುತ್ತವೆ. ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ, ಜನಪದ ಗೀತಾ ಗಾಯನ, ರಂಗಗೀತೆ, ಜನಪದ ನೃತ್ಯ ಹಾಗೂ ಭರತನಾಟ್ಯ ನಡೆಯುತ್ತದೆ’ ಎಂದು ತಿಳಿಸಿದರು.</p>.<p>ವಕ್ಕಲೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ, ಸದಸ್ಯರು ಹಾಗೂ ಪಿಡಿಒ ಆರ್.ಮಂಜುನಾಥ್ಪ್ರಸಾದ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>