<p><strong>ಕೋಲಾರ</strong>: ‘ಶಾಸಕ ಗಾಲಿ ಜನಾರ್ದನ ರೆಡ್ಡಿ ವಾಲ್ಮೀಕಿ ಸಮುದಾಯದ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಹೀಯಾಳಿಸಿದ್ದಾರೆ. ವಾಲ್ಮೀಕಿ ಸಮುದಾಯ ಹಾಗೂ ಶ್ರೀರಾಮುಲು ಅಭಿಮಾನಿಗಳ ಬಳಗವು ಈ ನಡೆಯನ್ನು ತೀವ್ರವಾಗಿ ಖಂಡಿಸಿದೆ’ ಎಂದು ಜಿಲ್ಲಾ ವಾಲ್ಮೀಕಿ ಸಮುದಾಯದ ಮುಖಂಡ ನರಸಿಂಹಯ್ಯ ತಿಳಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ಸಹಕಾರದಿಂದ ರಾಜಕಾರಣದಲ್ಲಿ ಬೆಳೆದಿದ್ದಾರೆ. ಆದರೆ, ಈಗ ಅವರ ವಿರುದ್ಧವೇ ನೀಡುತ್ತಿರುವ ಹೇಳಿಕೆ ಸಹಿಸಲು ಸಾಧ್ಯವಿಲ್ಲ. ಬಿಜೆಪಿ ಈ ಹಿಂದೆ ಅಧಿಕಾರ ಹಿಡಿಯುವಲ್ಲಿ ಶ್ರೀರಾಮುಲು ಪ್ರಮುಖ ಪಾತ್ರವಹಿಸಿದ್ದರು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಶ್ರೀರಾಮುಲು ಅವರಿಗೆ ರಾಜ್ಯಸಭಾ ಸದಸ್ಯತ್ವ ನೀಡಿ ಕೇಂದ್ರದ ಸಚಿವರನ್ನಾಗಿ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಶ್ರೀರಾಮುಲು ವಿರುದ್ಧ ತಾತ್ಸಾರದ ಮಾತನಾಡಿರುವ ರೆಡ್ಡಿ ಬಹಿರಂಗವಾಗಿ ಕ್ಷೆಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಮುದಾಯದ ಮುಖಂಡರಾದ ನವೀನ್, ನಾಗರಾಜ್, ಮುನಿಯಪ್ಪ, ಮಾಲೂರು ಕೃಷ್ಣಪ್ಪ, ಐತರಾಸನಹಳ್ಳಿ ನರಸಿಂಹಪ್ಪ, ಗರುಡುನಹಳ್ಳಿ ಬಾಬು, ನರಸಾಪುರ ವೆಂಕಟೇಶ್, ಚಿಕ್ಕಕಡತೂರು ಶ್ರೀನಿವಾಸ್, ಹುಂಗೇನಹಳ್ಳಿ ವೆಂಕಟೇಶ್, ಕುಡುವನಹಳ್ಳಿ ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಶಾಸಕ ಗಾಲಿ ಜನಾರ್ದನ ರೆಡ್ಡಿ ವಾಲ್ಮೀಕಿ ಸಮುದಾಯದ ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಹೀಯಾಳಿಸಿದ್ದಾರೆ. ವಾಲ್ಮೀಕಿ ಸಮುದಾಯ ಹಾಗೂ ಶ್ರೀರಾಮುಲು ಅಭಿಮಾನಿಗಳ ಬಳಗವು ಈ ನಡೆಯನ್ನು ತೀವ್ರವಾಗಿ ಖಂಡಿಸಿದೆ’ ಎಂದು ಜಿಲ್ಲಾ ವಾಲ್ಮೀಕಿ ಸಮುದಾಯದ ಮುಖಂಡ ನರಸಿಂಹಯ್ಯ ತಿಳಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ಸಹಕಾರದಿಂದ ರಾಜಕಾರಣದಲ್ಲಿ ಬೆಳೆದಿದ್ದಾರೆ. ಆದರೆ, ಈಗ ಅವರ ವಿರುದ್ಧವೇ ನೀಡುತ್ತಿರುವ ಹೇಳಿಕೆ ಸಹಿಸಲು ಸಾಧ್ಯವಿಲ್ಲ. ಬಿಜೆಪಿ ಈ ಹಿಂದೆ ಅಧಿಕಾರ ಹಿಡಿಯುವಲ್ಲಿ ಶ್ರೀರಾಮುಲು ಪ್ರಮುಖ ಪಾತ್ರವಹಿಸಿದ್ದರು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಶ್ರೀರಾಮುಲು ಅವರಿಗೆ ರಾಜ್ಯಸಭಾ ಸದಸ್ಯತ್ವ ನೀಡಿ ಕೇಂದ್ರದ ಸಚಿವರನ್ನಾಗಿ ಮಾಡಬೇಕು’ ಎಂದು ಆಗ್ರಹಿಸಿದರು.</p>.<p>‘ಶ್ರೀರಾಮುಲು ವಿರುದ್ಧ ತಾತ್ಸಾರದ ಮಾತನಾಡಿರುವ ರೆಡ್ಡಿ ಬಹಿರಂಗವಾಗಿ ಕ್ಷೆಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಮುದಾಯದ ಮುಖಂಡರಾದ ನವೀನ್, ನಾಗರಾಜ್, ಮುನಿಯಪ್ಪ, ಮಾಲೂರು ಕೃಷ್ಣಪ್ಪ, ಐತರಾಸನಹಳ್ಳಿ ನರಸಿಂಹಪ್ಪ, ಗರುಡುನಹಳ್ಳಿ ಬಾಬು, ನರಸಾಪುರ ವೆಂಕಟೇಶ್, ಚಿಕ್ಕಕಡತೂರು ಶ್ರೀನಿವಾಸ್, ಹುಂಗೇನಹಳ್ಳಿ ವೆಂಕಟೇಶ್, ಕುಡುವನಹಳ್ಳಿ ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>