<p><strong>ಮಾಲೂರು:</strong> ಒಕ್ಕೂಟವು ರೈತರು ನೀಡುವ ಹಾಲಿನಲ್ಲಿ ಲಾಭ ಪಡೆದು ಹಾಲು ಉತ್ಪಾದಕರಿಗೆ ವಿವಿಧ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದುಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮೃತ ರಾಸು<br />ಗಳಿಗೆ ಜೀವ ವಿಮೆ ಹಣ ಹಾಗೂ ನಿವೃತ್ತಿ ಹೊಂದಿರುವ ಸಿಬ್ಬಂದಿಗಳನ್ನು ಗೌರವಿಸಿ ಮಾತನಾಡಿದರು.</p>.<p>ಹಾಲು ಉತ್ಪಾದನೆ ಹೆಚ್ಚಿಸುವ ಮೂಲಕ ಹಾಲಿನ ಗುಣಮಟ್ಟ ಕಾಪಾಡಿಕೊಳ್ಳಬೇಕು. ಇದರಿಂದ ಹಾಲು ಉತ್ಪಾದಕ ಸಂಘಗಳು ಹಾಗೂ ಕೋಚಿಮುಲ್ ಲಾಭದಾಯಕ<br />ವಾಗಿರುತ್ತದೆ. ಕೋಚಿಮುಲ್ ಒಕ್ಕೂಟದ ಸದಸ್ಯ ಹಾಗೂ ಅಧ್ಯಕ್ಷರಾಗಿ ಹಾಲು ಉತ್ಪಾದಕರ ಹಾಗೂ ರೈತರ ಪರವಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಕಾರ್ಯ ರೂಪಕ್ಕೆ ತರಲಾಗಿದೆ ಎಂದರು.</p>.<p>ಹಾಲು ಉತ್ಪಾದಕ ರೈತರಿಗೆ ₹2 ಲಕ್ಷ ಜೀವ ವಿಮೆ, ರಾಸುಗಳಿಗೆ ₹30 ಸಾವಿರದಿಂದ ₹70 ಸಾವಿರದವರೆಗೆ ನೀಡಲಾಗುತ್ತಿದೆ. ಹಾಲು ಕರೆಯುವ ಯಂತ್ರಗಳು ಬಿಎಂಸಿಗಳ ನಿರ್ಮಾಣ, ನೂತನ ಕಟ್ಟಡಗಳಿಗೆ ಆರ್ಥಿಕ ಸಹಕಾರ ನೀಡಲಾಗುತ್ತಿದೆ ಎಂದರು.</p>.<p>ಇದೇ ಸಂದರ್ಭದಲ್ಲಿ ಮೃತ 33 ರಾಸುಗಳಿಗೆ ಜೀವವಿಮೆ ತಲಾ ₹60 ಸಾವಿರದಂತೆ ನೀಡಲಾಯಿತು. 16 ಮಂದಿ ನಿವೃತ್ತಿ ಹೊಂದಿರುವ ಸಿಬ್ಬಂದಿಗೆ ಗೌರವಧನ ವಿತರಿಸಲಾಯಿತು.</p>.<p>ಸಹಕಾರಿ ಯೂನಿಯನ್ ಉಪಾಧ್ಯಕ್ಷ ಗೋರ್ವಧನ್ ರೆಡ್ಡಿ, ಉಪ ವ್ಯವಸ್ಥಾಪಕ ಡಾ.ಚೇತನ್, ಮುಖಂಡ ಪರಮೇಶ್, ಅಂಜಿನಿ ಸೋಮಣ್ಣ, ವಿಸ್ತರಣಾಧಿಕಾರಿ ಹುಲ್ಲೂರಪ್ಪ, ನಾರಾಯಣಸ್ವಾಮಿ, ಮರಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಒಕ್ಕೂಟವು ರೈತರು ನೀಡುವ ಹಾಲಿನಲ್ಲಿ ಲಾಭ ಪಡೆದು ಹಾಲು ಉತ್ಪಾದಕರಿಗೆ ವಿವಿಧ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದುಕೋಚಿಮುಲ್ ಅಧ್ಯಕ್ಷ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮೃತ ರಾಸು<br />ಗಳಿಗೆ ಜೀವ ವಿಮೆ ಹಣ ಹಾಗೂ ನಿವೃತ್ತಿ ಹೊಂದಿರುವ ಸಿಬ್ಬಂದಿಗಳನ್ನು ಗೌರವಿಸಿ ಮಾತನಾಡಿದರು.</p>.<p>ಹಾಲು ಉತ್ಪಾದನೆ ಹೆಚ್ಚಿಸುವ ಮೂಲಕ ಹಾಲಿನ ಗುಣಮಟ್ಟ ಕಾಪಾಡಿಕೊಳ್ಳಬೇಕು. ಇದರಿಂದ ಹಾಲು ಉತ್ಪಾದಕ ಸಂಘಗಳು ಹಾಗೂ ಕೋಚಿಮುಲ್ ಲಾಭದಾಯಕ<br />ವಾಗಿರುತ್ತದೆ. ಕೋಚಿಮುಲ್ ಒಕ್ಕೂಟದ ಸದಸ್ಯ ಹಾಗೂ ಅಧ್ಯಕ್ಷರಾಗಿ ಹಾಲು ಉತ್ಪಾದಕರ ಹಾಗೂ ರೈತರ ಪರವಾಗಿ ಹಲವಾರು ಯೋಜನೆಗಳನ್ನು ರೂಪಿಸಿ ಕಾರ್ಯ ರೂಪಕ್ಕೆ ತರಲಾಗಿದೆ ಎಂದರು.</p>.<p>ಹಾಲು ಉತ್ಪಾದಕ ರೈತರಿಗೆ ₹2 ಲಕ್ಷ ಜೀವ ವಿಮೆ, ರಾಸುಗಳಿಗೆ ₹30 ಸಾವಿರದಿಂದ ₹70 ಸಾವಿರದವರೆಗೆ ನೀಡಲಾಗುತ್ತಿದೆ. ಹಾಲು ಕರೆಯುವ ಯಂತ್ರಗಳು ಬಿಎಂಸಿಗಳ ನಿರ್ಮಾಣ, ನೂತನ ಕಟ್ಟಡಗಳಿಗೆ ಆರ್ಥಿಕ ಸಹಕಾರ ನೀಡಲಾಗುತ್ತಿದೆ ಎಂದರು.</p>.<p>ಇದೇ ಸಂದರ್ಭದಲ್ಲಿ ಮೃತ 33 ರಾಸುಗಳಿಗೆ ಜೀವವಿಮೆ ತಲಾ ₹60 ಸಾವಿರದಂತೆ ನೀಡಲಾಯಿತು. 16 ಮಂದಿ ನಿವೃತ್ತಿ ಹೊಂದಿರುವ ಸಿಬ್ಬಂದಿಗೆ ಗೌರವಧನ ವಿತರಿಸಲಾಯಿತು.</p>.<p>ಸಹಕಾರಿ ಯೂನಿಯನ್ ಉಪಾಧ್ಯಕ್ಷ ಗೋರ್ವಧನ್ ರೆಡ್ಡಿ, ಉಪ ವ್ಯವಸ್ಥಾಪಕ ಡಾ.ಚೇತನ್, ಮುಖಂಡ ಪರಮೇಶ್, ಅಂಜಿನಿ ಸೋಮಣ್ಣ, ವಿಸ್ತರಣಾಧಿಕಾರಿ ಹುಲ್ಲೂರಪ್ಪ, ನಾರಾಯಣಸ್ವಾಮಿ, ಮರಿಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>