<p><strong>ಕೋಲಾರ: </strong>ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಸಂಬಂಧ ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ರಾತ್ರಿ ವಶಕ್ಕೆ ತೆಗೆದುಕೊಂಡಿದ್ದು, ಪ್ರಕರಣ ಇತರೆ ಆರೋಪಿಗಳು ಬಂಧನ ಭೀತಿಯಿಂದ ಪ್ರವಾಸಕ್ಕೆ ಹೋಗಿದ್ದಾರೆ ಎಂದು ಗೊತ್ತಾಗಿದೆ.</p>.<p>ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿದ ದುಷ್ಕರ್ಮಿಗಳು ವೃತ್ತಿಪರ ಅಪಹರಣಕಾರರು. ಪ್ರಕರಣದಲ್ಲಿ ಪ್ರಕಾಶ್ರ ಪರಿಚಿತ ವ್ಯಕ್ತಿಗಳ ಪಾತ್ರವಿದೆ. ಮೊಬೈಲ್ ಕರೆಗಳ ಮಾಹಿತಿ ಆಧರಿಸಿ ಒಬ್ಬ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಂಡಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವರ್ತೂರು ಪ್ರಕಾಶ್ರ ಫಾರ್ಮ್ಹೌಸ್ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಆಂಧ್ರಪ್ರದೇಶದ ಮಹಿಳೆಯೊಬ್ಬರ ಕೈವಾಡವಿರುವ ಶಂಕೆಯಿದೆ. ಹಣಕಾಸು ವ್ಯವಹಾರದಲ್ಲಿನ ಭಿನ್ನಾಭಿಪ್ರಾಯ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದೇವೆ. ಅಪಹರಣಕಾರರು ಮಹಾರಾಷ್ಟ್ರ ರಾಜ್ಯದವರಲ್ಲ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ವೃತ್ತಿಪರ ದುಷ್ಕರ್ಮಿಗಳ ಗುಂಪು ಈ ಕೃತ್ಯ ಎಸಗಿದೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸಿಕ್ಕಿಬಿದ್ದಿರುವ ಆರೋಪಿಯು ಪ್ರಕರಣದ ಇತರೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಹಣಕ್ಕಾಗಿಯೇ ಈ ಕೃತ್ಯ ಎಸಗಿದ್ದಾಗಿ ಆತ ಹೇಳಿಕೆ ನೀಡಿದ್ದಾನೆ. ವರ್ತೂರು ಪ್ರಕಾಶ್ ಅವರು ದನದ ವ್ಯಾಪಾರಿ ನಯಾಜ್ ಮೂಲಕ ಕೊಡಿಸಿದ ₹ 48 ಲಕ್ಷ ಹಣದಲ್ಲಿ ಇತರೆ ಆರೋಪಿಗಳು ಪ್ರವಾಸಕ್ಕೆ ಹೋಗಿದ್ದಾರೆ ಎಂದು ಆತ ತಿಳಿಸಿದ್ದಾನೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಸಂಬಂಧ ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ರಾತ್ರಿ ವಶಕ್ಕೆ ತೆಗೆದುಕೊಂಡಿದ್ದು, ಪ್ರಕರಣ ಇತರೆ ಆರೋಪಿಗಳು ಬಂಧನ ಭೀತಿಯಿಂದ ಪ್ರವಾಸಕ್ಕೆ ಹೋಗಿದ್ದಾರೆ ಎಂದು ಗೊತ್ತಾಗಿದೆ.</p>.<p>ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿದ ದುಷ್ಕರ್ಮಿಗಳು ವೃತ್ತಿಪರ ಅಪಹರಣಕಾರರು. ಪ್ರಕರಣದಲ್ಲಿ ಪ್ರಕಾಶ್ರ ಪರಿಚಿತ ವ್ಯಕ್ತಿಗಳ ಪಾತ್ರವಿದೆ. ಮೊಬೈಲ್ ಕರೆಗಳ ಮಾಹಿತಿ ಆಧರಿಸಿ ಒಬ್ಬ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಂಡಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವರ್ತೂರು ಪ್ರಕಾಶ್ರ ಫಾರ್ಮ್ಹೌಸ್ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಆಂಧ್ರಪ್ರದೇಶದ ಮಹಿಳೆಯೊಬ್ಬರ ಕೈವಾಡವಿರುವ ಶಂಕೆಯಿದೆ. ಹಣಕಾಸು ವ್ಯವಹಾರದಲ್ಲಿನ ಭಿನ್ನಾಭಿಪ್ರಾಯ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದೇವೆ. ಅಪಹರಣಕಾರರು ಮಹಾರಾಷ್ಟ್ರ ರಾಜ್ಯದವರಲ್ಲ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ವೃತ್ತಿಪರ ದುಷ್ಕರ್ಮಿಗಳ ಗುಂಪು ಈ ಕೃತ್ಯ ಎಸಗಿದೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಸಿಕ್ಕಿಬಿದ್ದಿರುವ ಆರೋಪಿಯು ಪ್ರಕರಣದ ಇತರೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದಾನೆ. ಹಣಕ್ಕಾಗಿಯೇ ಈ ಕೃತ್ಯ ಎಸಗಿದ್ದಾಗಿ ಆತ ಹೇಳಿಕೆ ನೀಡಿದ್ದಾನೆ. ವರ್ತೂರು ಪ್ರಕಾಶ್ ಅವರು ದನದ ವ್ಯಾಪಾರಿ ನಯಾಜ್ ಮೂಲಕ ಕೊಡಿಸಿದ ₹ 48 ಲಕ್ಷ ಹಣದಲ್ಲಿ ಇತರೆ ಆರೋಪಿಗಳು ಪ್ರವಾಸಕ್ಕೆ ಹೋಗಿದ್ದಾರೆ ಎಂದು ಆತ ತಿಳಿಸಿದ್ದಾನೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>