ವರ್ತೂರು ಪ್ರಕಾಶ್ರ ಫಾರ್ಮ್ಹೌಸ್ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಆಂಧ್ರಪ್ರದೇಶದ ಮಹಿಳೆಯೊಬ್ಬರ ಕೈವಾಡವಿರುವ ಶಂಕೆಯಿದೆ. ಹಣಕಾಸು ವ್ಯವಹಾರದಲ್ಲಿನ ಭಿನ್ನಾಭಿಪ್ರಾಯ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದೇವೆ. ಅಪಹರಣಕಾರರು ಮಹಾರಾಷ್ಟ್ರ ರಾಜ್ಯದವರಲ್ಲ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ವೃತ್ತಿಪರ ದುಷ್ಕರ್ಮಿಗಳ ಗುಂಪು ಈ ಕೃತ್ಯ ಎಸಗಿದೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ.