ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ತೂರು ಪ್ರಕಾಶ್‌ ಅಪಹರಣ: ಬಂಧನ

Last Updated 25 ಜನವರಿ 2021, 16:32 IST
ಅಕ್ಷರ ಗಾತ್ರ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣ ಸಂಬಂಧ ಪೊಲೀಸರು ಭಾನುವಾರ ಮತ್ತೊಬ್ಬ ಆರೋಪಿ ರೋಹಿತ್‌ನನ್ನು ಬಂಧಿಸಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಪ್ರಕರಣ ಸಂಬಂಧ ರೋಹಿತ್‌ನನ್ನು ಪೊಲೀಸರು ಆರಂಭದಲ್ಲೇ ಬಂಧಿಸಿದ್ದರು. ಆತನನ್ನು ಪ್ರಕರಣದ ಪ್ರಮುಖ ಆರೋಪಿ ಕವಿರಾಜ್‌ನ ಪತ್ತೆಗಾಗಿ ತಮಿಳುನಾಡಿನ ಹೊಸೂರಿಗೆ ಕರೆದೊಯ್ದಿದ್ದರು. ಆಗ ರೋಹಿತ್‌ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ.

ವರ್ತೂರು ಪ್ರಕಾಶ್‌ ಅವರು 2020ರ ನ.25ರಂದು ತಾಲ್ಲೂಕಿನ ಬೆಗ್ಲಿಹೊಸಹಳ್ಳಿ ಬಳಿಯ ತಮ್ಮ ತೋಟದ ಮನೆಯಿಂದ ಕಾರಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ ಆರೋಪಿಗಳು ಅವರ ವಾಹನ ಅಡ್ಡಗಟ್ಟಿ ಅಪಹರಿಸಿದ್ದರು. ಜತೆಗೆ ವರ್ತೂರು ಪ್ರಕಾಶ್‌ರ ಕಾರು ಚಾಲಕನನ್ನು ಎಳೆದೊಯ್ದಿದ್ದರು.

ನಂತರ ವರ್ತೂರು ಪ್ರಕಾಶ್‌ ಮತ್ತು ಅವರ ಕಾರು ಚಾಲಕನನ್ನು 3 ದಿನ ಒತ್ತೆಯಾಳಾಗಿ ಇರಿಸಿಕೊಂಡು ₹ 48 ಲಕ್ಷ ಪಡೆದು ಹಲ್ಲೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಶಿವನಾಪುರ ಬಳಿ ಬಿಟ್ಟು ಪರಾರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT