ತಾಲ್ಲೂಕಿನ ಪುರಹಳ್ಳಿ, ತಿಪ್ಪೇನಹಳ್ಳಿ ಹಾಗೂ ಜಂಭಪುರ ಗ್ರಾಮದಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ‘ಕ್ಷೇತ್ರದ ವ್ಯಾಪ್ತಿಯಲ್ಲಿ 18 ಗ್ರಾ.ಪಂಗಳಿದ್ದು, ಈ ಪೈಕಿ 14 ಕಡೆ ಜೆಡಿಎಸ್ ಬೆಂಬಲಿತ ಸದಸ್ಯರು ಅಧಿಕಾರ ಹಿಡಿದಿದ್ದಾರೆ. ಅವರಿಗೆ ಹೂವಿನ ಹಾರ ಹಾಕಿ ತಮ್ಮವರು ಎಂದು ಹೇಳಿಕೊಳ್ಳುತ್ತಿರುವ ವರ್ತೂರು ಪ್ರಕಾಶ್ಗೆ ನಾಚಿಕೆಯಾಗಬೇಕು’ ಎಂದು ವ್ಯಂಗ್ಯವಾಡಿದರು.