<p><strong>ಬಂಗಾರಪೇಟೆ:</strong> ಜಯಂತಿಗಳ ಆಚರಣೆಗೆ ಅಧಿಕಾರಿಗಳ ಹಾಜರು ಕಡ್ಡಾಯ ಎಂದು ತಹಶೀಲ್ದಾರ್ ಎಂ.ದಯಾನಂದ ಹೇಳಿದರು.</p>.<p>ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಆಯೋಜಿಸಿದ್ದ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೆಲ ಅಧಿಕಾರಿಗಳು ಮಾತ್ರ ಜಯಂತಿಗಳಿಗೆ ಹಾಜರಾಗುತ್ತಿದ್ದಾರೆ. ಮುಂದಿನ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿಗಳು ತಪ್ಪದೆ ಹಾಜರಾಗಬೇಕು ಎಂದು ಸೂಚಿಸಿದರು.</p>.<p>ವೇಮನ ಕವಿ ಅವರ ಬರಹಗಳು ಸ್ಫೂರ್ತಿದಾಯಕ. ಅವರ ಜೀವನವೇ ಒಂದು ದೊಡ್ಡ ಗ್ರಂಥ. ಜೀವನ ಹೇಗೆ ಇರಬಾರದು. ಹೇಗೆ ಇರಬೇಕು ಎನ್ನುವುದಕ್ಕೆ ವೇಮನ ಅವರೇ ನಿದರ್ಶನ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ, ಪುರಸಭೆ ಮುಖ್ಯಾಧಿಕಾರಿ ಶ್ರೀಧರ್, ತಾಲ್ಲೂಕು ಆರೋಗ್ಯ ಅಧಿಕಾರಿ ಸರಸ್ವತಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಆಸಿಫ್ ಅಲಿ, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಜಯಂತಿಗಳ ಆಚರಣೆಗೆ ಅಧಿಕಾರಿಗಳ ಹಾಜರು ಕಡ್ಡಾಯ ಎಂದು ತಹಶೀಲ್ದಾರ್ ಎಂ.ದಯಾನಂದ ಹೇಳಿದರು.</p>.<p>ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಆಯೋಜಿಸಿದ್ದ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕೆಲ ಅಧಿಕಾರಿಗಳು ಮಾತ್ರ ಜಯಂತಿಗಳಿಗೆ ಹಾಜರಾಗುತ್ತಿದ್ದಾರೆ. ಮುಂದಿನ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿಗಳು ತಪ್ಪದೆ ಹಾಜರಾಗಬೇಕು ಎಂದು ಸೂಚಿಸಿದರು.</p>.<p>ವೇಮನ ಕವಿ ಅವರ ಬರಹಗಳು ಸ್ಫೂರ್ತಿದಾಯಕ. ಅವರ ಜೀವನವೇ ಒಂದು ದೊಡ್ಡ ಗ್ರಂಥ. ಜೀವನ ಹೇಗೆ ಇರಬಾರದು. ಹೇಗೆ ಇರಬೇಕು ಎನ್ನುವುದಕ್ಕೆ ವೇಮನ ಅವರೇ ನಿದರ್ಶನ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ, ಪುರಸಭೆ ಮುಖ್ಯಾಧಿಕಾರಿ ಶ್ರೀಧರ್, ತಾಲ್ಲೂಕು ಆರೋಗ್ಯ ಅಧಿಕಾರಿ ಸರಸ್ವತಿ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಆಸಿಫ್ ಅಲಿ, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>