<p><strong>ಕೋಲಾರ</strong>: ಬೆಂಗಳುರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಪರೀಕ್ಷೆಗಳನ್ನು ಲೋಪಗಳಿಗೆ ಅವಕಾಶವಿಲ್ಲದಂತೆ ನಡೆಸಬೇಕು. ನಕಲು ಮಾಡಲು ಬಿಡಬಾರದು. ಪರೀಕ್ಷಾ ಪಾವಿತ್ರ್ಯ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಬಿ.ಕೆ.ರವಿ ಸೂಚನೆ ನೀಡಿದರು.</p>.<p>ಸ್ನಾತಕ ಪದವಿ ಪರೀಕ್ಷೆಗಳ ಕೇಂದ್ರಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಅವರು, ನಂತರ ಉತ್ತರ ಪತ್ರಿಕೆಗಳನ್ನು ಸಂಗ್ರಹಿಸುವ ನಗರದ ಬಾಲಕರ ಕಾಲೇಜಿನ ಗೋದಾಮಿಗೂ ತೆರಳಿ ವೀಕ್ಷಿಸಿದರು.</p>.<p>ಉತ್ತರ ವಿಶ್ವವಿದ್ಯಾಲಯದಲ್ಲಿ ಪರೀಕ್ಷಾ ಅವ್ಯವಹಾರಗಳಿಗೆ ಅವಕಾಶ ನೀಡಬಾರದು. ಘನತೆಗೆ ಧಕ್ಕೆ ಬರುವ ಕೆಲಸವಾಗದಂತೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು. ಪರೀಕ್ಷೆ, ಮೌಲ್ಯಮಾಪನದ ಪಾವಿತ್ರ್ಯಕ್ಕೂ ಧಕ್ಕೆಯಾಗದಂತೆ ಎಚ್ಚರವಹಿಸಬೇಕು ಎಂದು ಅಧ್ಯಾಪಕರು, ಪ್ರಾಂಶುಪಾಲರಿಗೆ ಸಲಹೆ ನೀಡಿದರು.</p>.<p>ಅಕಾಡೆಮಿಕ್ ಕಾರ್ಯಕ್ರಮಗಳು, ಪರೀಕ್ಷಾ ವೇಳಾಪಟ್ಟಿ ಮತ್ತು ಆಡಳಿತಾತ್ಮಕ ಆದ್ಯತೆಗಳು ಲೋಪವಾಗದಂತಿರಲಿ. ಪಾರದರ್ಶಕತೆ, ಅಕಾಡೆಮಿಕ್ ಸ್ವಾಯತ್ತತೆ ಮತ್ತು ವಿದ್ಯಾರ್ಥಿ ಕೇಂದ್ರಿತ ಸುಧಾರಣೆಗಳಿಗೆ ಗಮನ ಹರಿಸುವುದಾಗಿ ನುಡಿದರು.</p>.<p>ಈ ಸಂದರ್ಭದಲ್ಲಿ ಕುಲಪತಿ ಜೊತೆ ಮೌಲ್ಯಮಾಪನ ಕುಲಸಚಿವ ಪ್ರೊ.ಲೋಕನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಬೆಂಗಳುರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಪರೀಕ್ಷೆಗಳನ್ನು ಲೋಪಗಳಿಗೆ ಅವಕಾಶವಿಲ್ಲದಂತೆ ನಡೆಸಬೇಕು. ನಕಲು ಮಾಡಲು ಬಿಡಬಾರದು. ಪರೀಕ್ಷಾ ಪಾವಿತ್ರ್ಯ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಬಿ.ಕೆ.ರವಿ ಸೂಚನೆ ನೀಡಿದರು.</p>.<p>ಸ್ನಾತಕ ಪದವಿ ಪರೀಕ್ಷೆಗಳ ಕೇಂದ್ರಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಅವರು, ನಂತರ ಉತ್ತರ ಪತ್ರಿಕೆಗಳನ್ನು ಸಂಗ್ರಹಿಸುವ ನಗರದ ಬಾಲಕರ ಕಾಲೇಜಿನ ಗೋದಾಮಿಗೂ ತೆರಳಿ ವೀಕ್ಷಿಸಿದರು.</p>.<p>ಉತ್ತರ ವಿಶ್ವವಿದ್ಯಾಲಯದಲ್ಲಿ ಪರೀಕ್ಷಾ ಅವ್ಯವಹಾರಗಳಿಗೆ ಅವಕಾಶ ನೀಡಬಾರದು. ಘನತೆಗೆ ಧಕ್ಕೆ ಬರುವ ಕೆಲಸವಾಗದಂತೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು. ಪರೀಕ್ಷೆ, ಮೌಲ್ಯಮಾಪನದ ಪಾವಿತ್ರ್ಯಕ್ಕೂ ಧಕ್ಕೆಯಾಗದಂತೆ ಎಚ್ಚರವಹಿಸಬೇಕು ಎಂದು ಅಧ್ಯಾಪಕರು, ಪ್ರಾಂಶುಪಾಲರಿಗೆ ಸಲಹೆ ನೀಡಿದರು.</p>.<p>ಅಕಾಡೆಮಿಕ್ ಕಾರ್ಯಕ್ರಮಗಳು, ಪರೀಕ್ಷಾ ವೇಳಾಪಟ್ಟಿ ಮತ್ತು ಆಡಳಿತಾತ್ಮಕ ಆದ್ಯತೆಗಳು ಲೋಪವಾಗದಂತಿರಲಿ. ಪಾರದರ್ಶಕತೆ, ಅಕಾಡೆಮಿಕ್ ಸ್ವಾಯತ್ತತೆ ಮತ್ತು ವಿದ್ಯಾರ್ಥಿ ಕೇಂದ್ರಿತ ಸುಧಾರಣೆಗಳಿಗೆ ಗಮನ ಹರಿಸುವುದಾಗಿ ನುಡಿದರು.</p>.<p>ಈ ಸಂದರ್ಭದಲ್ಲಿ ಕುಲಪತಿ ಜೊತೆ ಮೌಲ್ಯಮಾಪನ ಕುಲಸಚಿವ ಪ್ರೊ.ಲೋಕನಾಥ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>