ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿರುತ್ತವೆ. ನಾಗಲಾಪುರ, ಮಡೆರಹಳ್ಳಿ, ಕೆಂದಟ್ಟಿ, ಕೊಂಡರಾಜನಹಳ್ಳಿ ಬಳಿ ರಸ್ತೆ ದಾಟಲು ಅಂಡರ್ ಪಾಸ್ ವ್ಯವಸ್ಥೆಯಿಲ್ಲ. ವಾಹನಗಳು ಅತಿ ವೇಗದಿಂದ ಸಂಚರಿಸುದರಿಂದ ರಸ್ತೆ ದಾಟಲು ಸಮಸ್ಯೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಬೇಕು ಎಂದು ಪಟ್ಟು ಹಿಡಿದರು.