<p>ವೇಮಗಲ್: ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ವಿಶೇಷ ಅರಿವು ಕಾರ್ಯಕ್ರಮ ಗುರುವಾರ ನಡೆಯಿತು.</p>.<p>ಈ ವೇಳೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ನಟೇಶ್ ಮಾತನಾಡಿ, ವರದಕ್ಷಿಣೆ ಕೇವಲ ಸಾಮಾಜಿಕ ಪಿಡುಗಲ್ಲ. ಅದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಮದುವೆ ಎಂಬ ಪವಿತ್ರ ಬಂಧವು ಹಣದ ವ್ಯವಹಾರವಾಗಿ ಬದಲಾಗುತ್ತಿರುವುದು ವಿಷಾದನೀಯ. ವರದಕ್ಷಿಣೆ ಪಡೆಯುವುದು ಮತ್ತು ಕೊಡುವುದು ಎರಡೂ ಕಾನೂನುಬಾಹಿರ. ಇದರಿಂದ ಅನೇಕ ಕುಟುಂಬಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಿವೆ. ಹಾಗಾಗಿ ಗ್ರಾಮೀಣ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಿಕ್ಷಕರು ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿದರು.</p>.<p>ವೇಮಗಲ್ - ಕುರುಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಂ.ವೆಂಕಟೇಶ್ ಮಾತನಾಡಿ, ನಾಗರಿಕ ಸಮಾಜದಲ್ಲಿ ವರದಕ್ಷಿಣೆ ಶಾಪವಾಗಿ ಪರಿಣಮಿಸಿದೆ. ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.</p>.<p>ಸಿ.ಎಸ್.ವೆಂಕಟೇಶ್, ಅನುಷಾ ಮುನಿರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ನಾಗೇಶ್ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-18-979903348</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವೇಮಗಲ್: ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಕುರಿತು ವಿಶೇಷ ಅರಿವು ಕಾರ್ಯಕ್ರಮ ಗುರುವಾರ ನಡೆಯಿತು.</p>.<p>ಈ ವೇಳೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ನಟೇಶ್ ಮಾತನಾಡಿ, ವರದಕ್ಷಿಣೆ ಕೇವಲ ಸಾಮಾಜಿಕ ಪಿಡುಗಲ್ಲ. ಅದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಮದುವೆ ಎಂಬ ಪವಿತ್ರ ಬಂಧವು ಹಣದ ವ್ಯವಹಾರವಾಗಿ ಬದಲಾಗುತ್ತಿರುವುದು ವಿಷಾದನೀಯ. ವರದಕ್ಷಿಣೆ ಪಡೆಯುವುದು ಮತ್ತು ಕೊಡುವುದು ಎರಡೂ ಕಾನೂನುಬಾಹಿರ. ಇದರಿಂದ ಅನೇಕ ಕುಟುಂಬಗಳು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಿವೆ. ಹಾಗಾಗಿ ಗ್ರಾಮೀಣ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಿಕ್ಷಕರು ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿದರು.</p>.<p>ವೇಮಗಲ್ - ಕುರುಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಂ.ವೆಂಕಟೇಶ್ ಮಾತನಾಡಿ, ನಾಗರಿಕ ಸಮಾಜದಲ್ಲಿ ವರದಕ್ಷಿಣೆ ಶಾಪವಾಗಿ ಪರಿಣಮಿಸಿದೆ. ವರದಕ್ಷಿಣೆ ಕಿರುಕುಳದಂತಹ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.</p>.<p>ಸಿ.ಎಸ್.ವೆಂಕಟೇಶ್, ಅನುಷಾ ಮುನಿರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ನಾಗೇಶ್ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-18-979903348</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>