ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯುಕೇಶ್ಕುಮಾರ್ ಅವರು ಪ್ರಭಾರವಾಗಿ ಜಿಲ್ಲಾಧಿಕಾರಿ ಹುದ್ದೆಯ ಜವಾಬ್ದಾರಿ ನಿಭಾಯಿಸುತ್ತಿದ್ದರು. ಕಳೆದೊಂದು ತಿಂಗಳಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆಗೊಂಡು ಜಿಲ್ಲೆಗೆ ಬಂದಿದ್ದು, ಹೊಸ ಅಧಿಕಾರಿಗಳ ಮೇಲೆ ಜನರ ನಿರೀಕ್ಷೆ ಹೆಚ್ಚಿದೆ.