<p><strong>ಮಾಲೂರು:</strong> ಇತಿಹಾಸ ಪ್ರಸಿದ್ಧ ಯಾತ್ರಾ ಸ್ಥಳವಾದ ತಾಲ್ಲೂಕಿನ ಚಿಕ್ಕತಿರುಪತಿ ಪ್ರಸನ್ನ ವೆಂಕಟರಮಣಸ್ವಾಮಿ ದೇಗುಲದಲ್ಲಿ ಶ್ರಾವಣ ಮಾಸದ ಎರಡನೇ ಶನಿವಾರ ದೇವರ ದರ್ಶನಕ್ಕಾಗಿ ಅಪಾರ ಭಕ್ತ ಸಮೂಹ ಹರಿದು ಬಂದಿತ್ತು.</p>.<p>ಬೆಂಗಳೂರಿನ ಕೆ.ಆರ್.ಮಾರ್ಕೆಟ್ ಹೂವಿನ ವ್ಯಾಪರಿಗಳಿಂದ ದೇವಾಲಯ ಸುತ್ತಲು ವಿಶೇಷ ಹೂವಿನ ಅಲಂಕಾರ ವ್ಯವಸ್ಥೆ ಮಾಡಲಾಗಿತ್ತು.</p>.<p>ಶ್ರಾವಣ ಮಾಸದ ಎರಡನೇ ಶನಿವಾರದಲ್ಲಿ ದೇವರ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳು ಸೇರಿದಂತೆ ನೆರೆಯ ತಮಿಳುನಾಡು ಹಾಗೂ ಆಂಧ್ರಪ್ರದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು.</p>.<p>ಹೊಸಕೋಟೆ, ಸರ್ಜಾಪುರ, ಆನೇಕಲ್ ಮತ್ತು ಬೇರಿಕೈಯಿಂದ ಕಾಲ್ನಡಿಗೆಯಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಮುಡಿ ಅರ್ಪಿಸಿದ ಭಕ್ತರಿಗೆ ಸ್ನಾನದ ವ್ಯವಸ್ಥೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಚಿಕ್ಕತಿರುಪತಿ ಪಂಚಾಯಿತಿ ವ್ಯಾಪ್ತಿಯ ಬಲಿಜ ಸಂಘದಿಂದ ಕೈವಾರ ನಾರೇಯಣ ತಾತಯ್ಯ ಅವರ ಹೆಸರಿನಲ್ಲಿ ಸುಮಂಗಲಿಯರಿಗೆ ಬಳೆ ಸೇವೆ ಹಮ್ಮಿಕೊಳ್ಳಲಾಗಿತ್ತು.</p>.<p>ಶಾಸಕ ಕೆ.ವೈ.ನಂಜೇಗೌಡ, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಸಂಜೀವಪ್ಫ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಂದ್ರ ಗೋಪಾಲ್ ಸೇರಿದಂತೆ ಮತ್ತಿತರರು ದರ್ಶನ ಪಡೆದರು.</p>.<p>ಪೋಲಿಸ್ ಇಲಾಖೆಯಿಂದ ಭಕ್ತರ ಹಿತದೃಷ್ಟಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.</p>.<p>ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ, ಪೇಷ್ಕಾರ್ ಚಲುವಸ್ವಾಮಿ, ಪೋಲಿಸ್ ಇಲಾಖೆಯ ವೆಂಕೋಬರಾವ್, ಗ್ರಾ.ಪಂ ಆಡಳಿತ ಅಧಿಕಾರಿ ರೂಪೇಂದ್ರ ಸೇರಿದಂತೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಇತಿಹಾಸ ಪ್ರಸಿದ್ಧ ಯಾತ್ರಾ ಸ್ಥಳವಾದ ತಾಲ್ಲೂಕಿನ ಚಿಕ್ಕತಿರುಪತಿ ಪ್ರಸನ್ನ ವೆಂಕಟರಮಣಸ್ವಾಮಿ ದೇಗುಲದಲ್ಲಿ ಶ್ರಾವಣ ಮಾಸದ ಎರಡನೇ ಶನಿವಾರ ದೇವರ ದರ್ಶನಕ್ಕಾಗಿ ಅಪಾರ ಭಕ್ತ ಸಮೂಹ ಹರಿದು ಬಂದಿತ್ತು.</p>.<p>ಬೆಂಗಳೂರಿನ ಕೆ.ಆರ್.ಮಾರ್ಕೆಟ್ ಹೂವಿನ ವ್ಯಾಪರಿಗಳಿಂದ ದೇವಾಲಯ ಸುತ್ತಲು ವಿಶೇಷ ಹೂವಿನ ಅಲಂಕಾರ ವ್ಯವಸ್ಥೆ ಮಾಡಲಾಗಿತ್ತು.</p>.<p>ಶ್ರಾವಣ ಮಾಸದ ಎರಡನೇ ಶನಿವಾರದಲ್ಲಿ ದೇವರ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳು ಸೇರಿದಂತೆ ನೆರೆಯ ತಮಿಳುನಾಡು ಹಾಗೂ ಆಂಧ್ರಪ್ರದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು.</p>.<p>ಹೊಸಕೋಟೆ, ಸರ್ಜಾಪುರ, ಆನೇಕಲ್ ಮತ್ತು ಬೇರಿಕೈಯಿಂದ ಕಾಲ್ನಡಿಗೆಯಿಂದ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಮುಡಿ ಅರ್ಪಿಸಿದ ಭಕ್ತರಿಗೆ ಸ್ನಾನದ ವ್ಯವಸ್ಥೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<p>ಚಿಕ್ಕತಿರುಪತಿ ಪಂಚಾಯಿತಿ ವ್ಯಾಪ್ತಿಯ ಬಲಿಜ ಸಂಘದಿಂದ ಕೈವಾರ ನಾರೇಯಣ ತಾತಯ್ಯ ಅವರ ಹೆಸರಿನಲ್ಲಿ ಸುಮಂಗಲಿಯರಿಗೆ ಬಳೆ ಸೇವೆ ಹಮ್ಮಿಕೊಳ್ಳಲಾಗಿತ್ತು.</p>.<p>ಶಾಸಕ ಕೆ.ವೈ.ನಂಜೇಗೌಡ, ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಸಂಜೀವಪ್ಫ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಂದ್ರ ಗೋಪಾಲ್ ಸೇರಿದಂತೆ ಮತ್ತಿತರರು ದರ್ಶನ ಪಡೆದರು.</p>.<p>ಪೋಲಿಸ್ ಇಲಾಖೆಯಿಂದ ಭಕ್ತರ ಹಿತದೃಷ್ಟಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.</p>.<p>ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ, ಪೇಷ್ಕಾರ್ ಚಲುವಸ್ವಾಮಿ, ಪೋಲಿಸ್ ಇಲಾಖೆಯ ವೆಂಕೋಬರಾವ್, ಗ್ರಾ.ಪಂ ಆಡಳಿತ ಅಧಿಕಾರಿ ರೂಪೇಂದ್ರ ಸೇರಿದಂತೆ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>