‘ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ, ದೇಶದಲ್ಲಿ ಜಾತ್ಯಾತೀತ ಶಕ್ತಿಗಳು ಒಗ್ಗೂಡಿ ಅಧಿಕಾರಕ್ಕೆ ಬರಲಿದ್ದು, ರಾಹುಲ್ ಗಾಂಧಿ ಪ್ರಧಾನಿಯಾಗುವುದು ಖಚಿತ. ರಾಜ್ಯದ 28 ಕ್ಷೇತ್ರಗಳ ಪೈಕಿ 7ರಲ್ಲಿ ಜೆಡಿಎಸ್ ಹಾಗೂ ಉಳಿದ 21ರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 28 ಕ್ಷೇತ್ರಗಳಲ್ಲೂ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ’ ಎಂದು ಹೇಳಿದರು.