ಪಟ್ಟಣದ ದೊಡ್ಡಪೇಟೆ ರಸ್ತೆ ಬಳಿ ಇರುವ ಶ್ರೀಶಂಕರನಾರಾಯಣ ಸ್ವಾಮಿ ದೇಗುಲ, ಕುಂಭೇಶ್ವರ ಸ್ವಾಮಿ, ಬೀರೇಶ್ವರ ಸ್ವಾಮಿ, ಬಸವಣ್ಣ ದೇಗುಲ ಸೇರಿದಂತೆ ಸಂತೆಪೇಟೆಯ ಪಂಚಲಿಂಗೇಶ್ವರ ಸ್ವಾಮಿ ದೇವಾಲಯಗಳಲ್ಲಿ ಶಿವ ಲಿಂಗಗಳಿಗೆ ಮುಂಜಾನೆಯಿಂದಲೇ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರುದ್ರಾಭೀಷೇಕ, ಪಂಚಾಮೃತ ಅಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯ ನಡೆಸಲಾಯಿತು.