ಮುಳಬಾಗಿಲು ತಾಲ್ಲೂಕಿನ ಗಂಜಿಗುಂಟೆ ಗ್ರಾಮದ ಸಂತೋಷ್ ಎಂಬುವರು ತಮ್ಮ ಜಮೀನಿನ ಪಹಣಿಯಲ್ಲಿ ಹೆಸರು ಮತ್ತು ಅಳತೆ ದಾಖಲಿಸಲು ಕೋರಿ ಅರ್ಜಿ ಸಲ್ಲಿಸಿದ್ದರು. ಕಿರಣ್ ಅವರು ಈ ಕಾರ್ಯಕ್ಕೆ ₹ 1 ಲಕ್ಷ ಲಂಚ ಕೊಡುವಂತೆ ಕೇಳಿದ್ದರು. ಈ ಸಂಬಂಧ ಸಂತೋಷ್ ಎಸಿಬಿಗೆ ದೂರು ಕೊಟ್ಟಿದ್ದರು. ಈ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಕಿರಣ್ ಅವರನ್ನು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಬಂಧಿಸಿದ್ದಾರೆ.