<p><strong>ಕೋಲಾರ: </strong>ಜಿಲ್ಲೆಯ ಮುಳಬಾಗಿಲು ಮತ್ತು ಕೋಲಾರದಲ್ಲಿ ಸೋಮವಾರ ದಿಢೀರ್ ಕಾರ್ಯಾಚರಣೆ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಲಂಚ ಪಡೆದ ಆರೋಪದ ಮೇಲೆ ಗ್ರಾಮ ಲೆಕ್ಕಿಗ ಹಾಗೂ ಕರ ವಸೂಲಿಗಾರರನ್ನು ಬಂಧಿಸಿದ್ದಾರೆ.</p>.<p>ಜಮೀನಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ಭೂಮಿ ತಂತ್ರಾಂಶದ ಮೂಲಕ ಹೆಸರು ಮತ್ತು ಅಳತೆ ವಿವರ ನಮೂದಿಸಲು ₹ 1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಮುಳಬಾಗಿಲು ತಾಲ್ಲೂಕು ಕಚೇರಿಯ ಗ್ರಾಮ ಲೆಕ್ಕಿಗ ಕಿರಣ್ ಅವರು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.</p>.<p>ಮುಳಬಾಗಿಲು ತಾಲ್ಲೂಕಿನ ಗಂಜಿಗುಂಟೆ ಗ್ರಾಮದ ಸಂತೋಷ್ ಎಂಬುವರು ತಮ್ಮ ಜಮೀನಿನ ಪಹಣಿಯಲ್ಲಿ ಹೆಸರು ಮತ್ತು ಅಳತೆ ದಾಖಲಿಸಲು ಕೋರಿ ಅರ್ಜಿ ಸಲ್ಲಿಸಿದ್ದರು. ಕಿರಣ್ ಅವರು ಈ ಕಾರ್ಯಕ್ಕೆ ₹ 1 ಲಕ್ಷ ಲಂಚ ಕೊಡುವಂತೆ ಕೇಳಿದ್ದರು. ಈ ಸಂಬಂಧ ಸಂತೋಷ್ ಎಸಿಬಿಗೆ ದೂರು ಕೊಟ್ಟಿದ್ದರು. ಈ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಕಿರಣ್ ಅವರನ್ನು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಬಂಧಿಸಿದ್ದಾರೆ.</p>.<p><strong>ಮತ್ತೊಂದು ಪ್ರಕರಣ:</strong> ಕೋಲಾರದ ಕುವೆಂಪುನಗರ ನಿವಾಸಿ ಆಸೀಫ್ ಪಾಷಾ ಎಂಬುವರು ತಮ್ಮ ನಿವೇಶನಗಳ ತೆರಿಗೆ ಪಾವತಿಯ ಮೊತ್ತಕ್ಕೆ ಚಲನ್ (ರಸೀದಿ) ಕೋರಿ ನಗರಸಭೆಗೆ ಅರ್ಜಿ ಸಲ್ಲಿಸಿದ್ದರು. ನಗರಸಭೆ ಕರ ವಸೂಲಿಗಾರ ವೆಂಕಟರಮಣಪ್ಪ ಅವರು ತೆರಿಗೆ ಮೊತ್ತ ಕಡಿಮೆ ಮಾಡಿಕೊಡಲು ₹ 18 ಸಾವಿರ ಲಂಚ ಕೇಳಿದ್ದರು.</p>.<p>ಈ ಸಂಬಂಧ ಆಸೀಫ್ ಪಾಷಾ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ವೆಂಕಟರಮಣಪ್ಪ ಅವರನ್ನು ಸಂಜೆ ನಗರಸಭೆ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆಯಲ್ಲೇ ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಜಿಲ್ಲೆಯ ಮುಳಬಾಗಿಲು ಮತ್ತು ಕೋಲಾರದಲ್ಲಿ ಸೋಮವಾರ ದಿಢೀರ್ ಕಾರ್ಯಾಚರಣೆ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಲಂಚ ಪಡೆದ ಆರೋಪದ ಮೇಲೆ ಗ್ರಾಮ ಲೆಕ್ಕಿಗ ಹಾಗೂ ಕರ ವಸೂಲಿಗಾರರನ್ನು ಬಂಧಿಸಿದ್ದಾರೆ.</p>.<p>ಜಮೀನಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ಭೂಮಿ ತಂತ್ರಾಂಶದ ಮೂಲಕ ಹೆಸರು ಮತ್ತು ಅಳತೆ ವಿವರ ನಮೂದಿಸಲು ₹ 1 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಮುಳಬಾಗಿಲು ತಾಲ್ಲೂಕು ಕಚೇರಿಯ ಗ್ರಾಮ ಲೆಕ್ಕಿಗ ಕಿರಣ್ ಅವರು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ.</p>.<p>ಮುಳಬಾಗಿಲು ತಾಲ್ಲೂಕಿನ ಗಂಜಿಗುಂಟೆ ಗ್ರಾಮದ ಸಂತೋಷ್ ಎಂಬುವರು ತಮ್ಮ ಜಮೀನಿನ ಪಹಣಿಯಲ್ಲಿ ಹೆಸರು ಮತ್ತು ಅಳತೆ ದಾಖಲಿಸಲು ಕೋರಿ ಅರ್ಜಿ ಸಲ್ಲಿಸಿದ್ದರು. ಕಿರಣ್ ಅವರು ಈ ಕಾರ್ಯಕ್ಕೆ ₹ 1 ಲಕ್ಷ ಲಂಚ ಕೊಡುವಂತೆ ಕೇಳಿದ್ದರು. ಈ ಸಂಬಂಧ ಸಂತೋಷ್ ಎಸಿಬಿಗೆ ದೂರು ಕೊಟ್ಟಿದ್ದರು. ಈ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ಕಿರಣ್ ಅವರನ್ನು ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಬಂಧಿಸಿದ್ದಾರೆ.</p>.<p><strong>ಮತ್ತೊಂದು ಪ್ರಕರಣ:</strong> ಕೋಲಾರದ ಕುವೆಂಪುನಗರ ನಿವಾಸಿ ಆಸೀಫ್ ಪಾಷಾ ಎಂಬುವರು ತಮ್ಮ ನಿವೇಶನಗಳ ತೆರಿಗೆ ಪಾವತಿಯ ಮೊತ್ತಕ್ಕೆ ಚಲನ್ (ರಸೀದಿ) ಕೋರಿ ನಗರಸಭೆಗೆ ಅರ್ಜಿ ಸಲ್ಲಿಸಿದ್ದರು. ನಗರಸಭೆ ಕರ ವಸೂಲಿಗಾರ ವೆಂಕಟರಮಣಪ್ಪ ಅವರು ತೆರಿಗೆ ಮೊತ್ತ ಕಡಿಮೆ ಮಾಡಿಕೊಡಲು ₹ 18 ಸಾವಿರ ಲಂಚ ಕೇಳಿದ್ದರು.</p>.<p>ಈ ಸಂಬಂಧ ಆಸೀಫ್ ಪಾಷಾ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು ವೆಂಕಟರಮಣಪ್ಪ ಅವರನ್ನು ಸಂಜೆ ನಗರಸಭೆ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ವೇಳೆಯಲ್ಲೇ ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>