<p><strong>ಕೋಲಾರ:</strong> ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಶಾಸಕರ ವಿರುದ್ಧ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಹೇಳಿಕೆ ನೀಡಿರುವುದು ಸರಿಯಾದ ನಡವಳಿಕೆಯಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೃಷ್ಣ ಬೈರೇಗೌಡ ಟೀಕಿಸಿದರು.</p>.<p>ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಅವರು ಸಮರ್ಥ ಮುಖ್ಯಮಂತ್ರಿ ಎಂಬುದು ನಿರ್ವಿವಾದ. ನಾಡಿನ ಜನರೇ ಇದನ್ನು ಒಪ್ಪಿಕೊಂಡಿದ್ದಾರೆ. ವಿಶ್ವನಾಥ್ರ ಹೇಳಿಕೆಯು ಸಿದ್ದರಾಮಯ್ಯರ ನಡವಳಿಕೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದರು.</p>.<p>‘ಚುನಾವಣೆ ಫಲಿತಾಂಶ ಆಧರಿಸಿ ಮುಖ್ಯಮಂತ್ರಿ ಸಮರ್ಥರು ಅಥವಾ ಅಸಮರ್ಥರೆಂದು ಭಾವಿಸಲು ಆಗಲ್ಲ. ಸೋಲು ಗೆಲುವು ಬೇರೆ, ದೇವರಾಜ ಅರಸು ಸಹ ಚುನಾವಣೆಯಲ್ಲಿ ಸೋತಿದ್ದರು. ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರವೂ ಸೋತಿತ್ತು. ಉತ್ತಮ ಆಡಳಿತಕ್ಕೆ ಚುನಾವಣೆಯೊಂದೇ ಮಾನದಂಡವಲ್ಲ’ ಎಂದು ಹೇಳಿದರು.</p>.<p>‘ವಿಶ್ವನಾಥ್ ಅವರು ಸಹೋದ್ಯೋಗಿ ಶಾಸಕರ ಕುರಿತು ಚಮಚಾಗಿರಿ ಪದ ಬಳಸಿರುವುದು ಸರಿಯಲ್ಲ. ಸಾರ್ವಜನಿಕ ಜೀವನದಲ್ಲಿ ಈ ರೀತಿ ಮಾತನಾಡಬಾರದು. ಇದು ಅವರ ವೈಯುಕ್ತಿಕ ಟೀಕೆ ಇರಬಹುದು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲ್ಲ ಮತ್ತು ಹೇಳಿಕೆಯು ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ತಿಳಿಸಿದರು.</p>.<p><strong>ಶಿಸ್ತು ಕಾಪಾಡಬೇಕು:</strong> ‘ಉಭಯ ಪಕ್ಷಗಳ ಮುಖಂಡರು ಶಿಸ್ತು ಕಾಪಾಡಬೇಕು, ಯಾವುದೇ ವಿಷಯವನ್ನು ಬಹಳ ವೈಯಕ್ತಿಕವಾಗಿ ತೆಗೆದುಕೊಳ್ಳುವುದು ಸರಿಯಲ್ಲ, 2 ಪಕ್ಷಗಳ ಹಾದಿಯಲ್ಲಿ ಸಮನ್ವಯದ ಅಡಿ ಸಾಗಬೇಕಾಗುತ್ತದೆ’ ಎಂದು ಸಲಹೆ ನೀಡಿದರು.</p>.<p>‘ವಿಶ್ವನಾಥ್ರ ಹೇಳಿಕೆಯನ್ನು ಆಳವಾಗಿ ವಿಶ್ಲೇಷಣೆ ಮಾಡಲ್ಲ. ಅವರ ಉದ್ದೇಶ ಏನೆಂದು ಅವರನ್ನೇ ಪ್ರಶ್ನಿಸಬೇಕು. ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಅಳಿವು- ಉಳಿವಿನ ಚರ್ಚೆಯ ಅಗತ್ಯವೂ ಇಲ್ಲ. ನಾವೆಲ್ಲಾ ಒಟ್ಟಾಗಿದ್ದೇವೆ. ಸರ್ಕಾರದಲ್ಲಿ 2 ಪಕ್ಷ ಇರುವುದರಿಂದ ಭಿನ್ನಾಭಿಪ್ರಾಯ ಸಹಜ. ಉಭಯ ಪಕ್ಷಗಳ ವರಿಷ್ಠರು ಇದನ್ನು ಬಗೆಹರಿಸುತ್ತಾರೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬದಲಾವಣೆ ಬಯಸಿದ್ದಾರೆ. ರಾಜಕೀಯವಾಗಿ ಖಂಡಿತ ಬದಲಾವಣೆ ಆಗುತ್ತದೆ. ಪ್ರತಿ ಪಕ್ಷಗಳ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ. ಇದರಿಂದ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಶಾಸಕರ ವಿರುದ್ಧ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಹೇಳಿಕೆ ನೀಡಿರುವುದು ಸರಿಯಾದ ನಡವಳಿಕೆಯಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೃಷ್ಣ ಬೈರೇಗೌಡ ಟೀಕಿಸಿದರು.</p>.<p>ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಅವರು ಸಮರ್ಥ ಮುಖ್ಯಮಂತ್ರಿ ಎಂಬುದು ನಿರ್ವಿವಾದ. ನಾಡಿನ ಜನರೇ ಇದನ್ನು ಒಪ್ಪಿಕೊಂಡಿದ್ದಾರೆ. ವಿಶ್ವನಾಥ್ರ ಹೇಳಿಕೆಯು ಸಿದ್ದರಾಮಯ್ಯರ ನಡವಳಿಕೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದರು.</p>.<p>‘ಚುನಾವಣೆ ಫಲಿತಾಂಶ ಆಧರಿಸಿ ಮುಖ್ಯಮಂತ್ರಿ ಸಮರ್ಥರು ಅಥವಾ ಅಸಮರ್ಥರೆಂದು ಭಾವಿಸಲು ಆಗಲ್ಲ. ಸೋಲು ಗೆಲುವು ಬೇರೆ, ದೇವರಾಜ ಅರಸು ಸಹ ಚುನಾವಣೆಯಲ್ಲಿ ಸೋತಿದ್ದರು. ಜನಪ್ರಿಯ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ ನೇತೃತ್ವದ ಸರ್ಕಾರವೂ ಸೋತಿತ್ತು. ಉತ್ತಮ ಆಡಳಿತಕ್ಕೆ ಚುನಾವಣೆಯೊಂದೇ ಮಾನದಂಡವಲ್ಲ’ ಎಂದು ಹೇಳಿದರು.</p>.<p>‘ವಿಶ್ವನಾಥ್ ಅವರು ಸಹೋದ್ಯೋಗಿ ಶಾಸಕರ ಕುರಿತು ಚಮಚಾಗಿರಿ ಪದ ಬಳಸಿರುವುದು ಸರಿಯಲ್ಲ. ಸಾರ್ವಜನಿಕ ಜೀವನದಲ್ಲಿ ಈ ರೀತಿ ಮಾತನಾಡಬಾರದು. ಇದು ಅವರ ವೈಯುಕ್ತಿಕ ಟೀಕೆ ಇರಬಹುದು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲ್ಲ ಮತ್ತು ಹೇಳಿಕೆಯು ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ತಿಳಿಸಿದರು.</p>.<p><strong>ಶಿಸ್ತು ಕಾಪಾಡಬೇಕು:</strong> ‘ಉಭಯ ಪಕ್ಷಗಳ ಮುಖಂಡರು ಶಿಸ್ತು ಕಾಪಾಡಬೇಕು, ಯಾವುದೇ ವಿಷಯವನ್ನು ಬಹಳ ವೈಯಕ್ತಿಕವಾಗಿ ತೆಗೆದುಕೊಳ್ಳುವುದು ಸರಿಯಲ್ಲ, 2 ಪಕ್ಷಗಳ ಹಾದಿಯಲ್ಲಿ ಸಮನ್ವಯದ ಅಡಿ ಸಾಗಬೇಕಾಗುತ್ತದೆ’ ಎಂದು ಸಲಹೆ ನೀಡಿದರು.</p>.<p>‘ವಿಶ್ವನಾಥ್ರ ಹೇಳಿಕೆಯನ್ನು ಆಳವಾಗಿ ವಿಶ್ಲೇಷಣೆ ಮಾಡಲ್ಲ. ಅವರ ಉದ್ದೇಶ ಏನೆಂದು ಅವರನ್ನೇ ಪ್ರಶ್ನಿಸಬೇಕು. ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಅಳಿವು- ಉಳಿವಿನ ಚರ್ಚೆಯ ಅಗತ್ಯವೂ ಇಲ್ಲ. ನಾವೆಲ್ಲಾ ಒಟ್ಟಾಗಿದ್ದೇವೆ. ಸರ್ಕಾರದಲ್ಲಿ 2 ಪಕ್ಷ ಇರುವುದರಿಂದ ಭಿನ್ನಾಭಿಪ್ರಾಯ ಸಹಜ. ಉಭಯ ಪಕ್ಷಗಳ ವರಿಷ್ಠರು ಇದನ್ನು ಬಗೆಹರಿಸುತ್ತಾರೆ’ ಎಂದು ಸ್ಪಷ್ಟಪಡಿಸಿದರು.</p>.<p>‘ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬದಲಾವಣೆ ಬಯಸಿದ್ದಾರೆ. ರಾಜಕೀಯವಾಗಿ ಖಂಡಿತ ಬದಲಾವಣೆ ಆಗುತ್ತದೆ. ಪ್ರತಿ ಪಕ್ಷಗಳ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ. ಇದರಿಂದ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>